ಬೆಂಗಳೂರು ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಂದ ಜನರು ಶಿವಮೊಗ್ಗ ಜಿಲ್ಲೆಗೆ ಬರುತ್ತಿದ್ದಾರೆ. ಲಾಕ್ಡೌನ್ ಮಾಡುವಮೊದಲು ಅಗತ್ಯವಾದ ಹಾಸಿಗೆ, ವೆಂಟಿಲೇಟರ್, ಸ್ಯಾನಿಟೈಸರ್, ಆ್ಯಂಬುಲೆನ್ಸ್ ವಾಹನಗಳ ವ್ಯವಸ್ಥೆ ಮಾಡಬೇಕು.ಜನರೇಹೆದರಿಕೆಯಿಂದ ಸ್ವಯಂ ಪ್ರೇರಿತರಾಗಿ ಲಾಕ್ಡೌನ್ಗೆ ಒಳಗಾಗುತ್ತಿದ್ದಾರೆ. ಅದಕ್ಕಾಗಿ ಪೂರ್ಣ ಪ್ರಮಾಣದಲ್ಲಿ ಲಾಕ್ಡೌನ್ ಮಾಡಬೇಕು. ಅದಕ್ಕೂ ಮೊದಲು ಜಿಲ್ಲಾ ಕೇಂದ್ರದಲ್ಲಿ 500ಹಾಸಿಗೆ, ಪ್ರತಿ ತಾಲ್ಲೂಕಿನಲ್ಲೂ50 ಹಾಸಿಗೆಗಳ ಕೇಮದ್ರಗಳು ಸಿದ್ಧವಿರಬೇಕು ಎಂದು ಸಲಹೆ ನೀಡಿದರು.