ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ದರ ಏರಿಕೆಗೆ ಕಾಂಗ್ರೆಸ್ ಖಂಡನೆ

Last Updated 18 ನವೆಂಬರ್ 2020, 10:32 IST
ಅಕ್ಷರ ಗಾತ್ರ

ಶಿವಮೊಗ್ಗ: ವಿದ್ಯುತ್ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಒಂದು ವರ್ಷದಿಂದ ಕೊರೊನಾ ಹೊಡೆತಕ್ಕೆ ಸಿಲುಕಿ ದೇಶದ ಜನರು ತಲ್ಲಣಗೊಂಡಿದ್ದಾರೆ. ತೀವ್ರ ಆರ್ಥಿಕ ಕುಸಿತ, ವ್ಯಾಪಕ ನಿರುದ್ಯೋಗ, ರೈತರ ಬವಣೆ, ಮುಚ್ಚುತ್ತಿರುವ ಸಣ್ಣ ಕೈಗಾರಿಕೆಗಳು, ದುಡಿಮೆ ಇಲ್ಲದೇ ಕಂಗಾಲಾಗಿರುವ ಯುವ ಸಮೂಹ. ಶ್ರಮಿಕ ವರ್ಗ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂತಹ ಪರಿಸ್ಥಿತಿಯಲ್ಲಿ ಜನರಿಗೆ ರಿಯಾಯಿತಿ ನೀಡಬೇಕಾದ ಸರ್ಕಾರವೇ ವಿದ್ಯುತ್ ದರ ಪರಿಷ್ಕರಿಸಿ, ಪ್ರತಿ ಯೂನಿಟ್‌ಗೆ 40 ಪೈಸೆಯಂತೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಜನರು ನಿತ್ಯವೂ ಸಂಕಷ್ಟ ಅನುಭವಿಸುತ್ತಿರುವ ಈ ಸಮಯದಲ್ಲಿ ವಿದ್ಯುತ್ ದರ ಏರಿಕೆ ಅಕ್ಷಮ್ಯ, ಜನವಿರೋಧಿ ಮತ್ತು ಅಮಾನವೀಯ ಕ್ರಮ ಎಂದು ದೂರಿದರು.

ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಜನಪರವಾಗಿತ್ತು. ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿತ್ತು. ಅಂತಹ ಯೋಜನೆಗಳನ್ನು ಜಾರಿಗೊಳಿಸಿತ್ತು. ಸಂಕಷ್ಟದ ಸ್ಥಿತಿಗಳಲ್ಲಿ ಜನರಿಗೆ ಪರಿಹಾರ ನೀಡಿತ್ತು. ಈಗ ವಿರೋಧ ಪಕ್ಷವಾಗಿ ಜನ ವಿರೋಧಿ ಕೃತ್ಯ ಸಹಿಸಲು ಸಾಧ್ಯವಿಲ್ಲ. ತಕ್ಷಣ ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಆದೇಶ ಹಿಂಪಡೆಯಬೇಕು. ರಾಜ್ಯಪಾಲರು ಮಧ್ಯ ಪ್ರವೇಶಿಸಿ, ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್‌, ಪಾಲಿಕೆ ಸದಸ್ಯರಾದ ರಮೇಶ್ ಹೆಗ್ಡೆ, ಎಚ್.ಸಿ.ಯೋಗೀಶ್, ಯಮುನಾ ರಂಗೇಗೌಡ, ಮೆಹಕ್ ಷರೀಫ್, ಪಕ್ಷದ ಮುಖಂಡರಾದ ಇಸ್ಮಾಯಿಲ್ ಖಾನ್, ಎನ್.ರಮೇಶ್, ಎಸ್.ಪಿ.ಶೇಷಾದ್ರಿ, ಎಲ್.ರಾಮೇಗೌಡ, ಸಿ.ಎಸ್.ಚಂದ್ರಭೂಪಾಲ್, ಚಂದನ್, ಪಂಡಿತ್ ವಿಶ್ವನಾಥ್‌, ಯು.ಶಿವಾನಂದ್, ಸಿ.ಜೆ.ಮಧುಸೂದನ್, ಎಚ್.ಪಿ.ಗಿರೀಶ್, ಕೆ.ರಂಗನಾಥ್‌ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT