<p><strong>ಶಿವಮೊಗ್ಗ: </strong>ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಗುರುವಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಪಾಲಿಕೆ ವಿರೋಧ ಪಕ್ಷದ ನಾಯಕ ಎಚ್.ಸಿ.ಯೋಗೀಶ್ ಭೇಟಿ ನೀಡಿ ಜನರ ಅಹವಾಲು ಆಲಿಸಿದರು.</p>.<p>ಜೆ.ಸಿ.ನಗರ, ಅಶೋಕ ನಗರ, ರಾಜೀವ್ಗಾಂಧಿ ಬಡಾವಣೆ, ಚೌಡೇಶ್ವರಿ ಕಾಲೊನಿ ಪ್ರದೇಶಗಳಿಗೆ ಭೇಟಿ ನೀಡಿದರು. ಪಾಲಿಕೆಕೈಗೊಂಡ ಕ್ರಮಗಳ ಮಾಹಿತಿ ಪಡೆದರು. ಬಿದ್ದ ಮನೆಗಳ ಅವಶೇಷ ವೀಕ್ಷಿಸಿದರು.</p>.<p>ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ನೀಡುತ್ತಿದ್ದಾರೆ. ಶೇ 75ಕ್ಕಿಂತ ಹೆಚ್ಚು ಹಾನಿಗೆ ₹ 5 ಲಕ್ಷ, ಭಾಗಶಃ ಮನೆಗಳಿಗೆ ₹ 3 ಲಕ್ಷ, ಶೇ 25ಕ್ಕಿಂತ ಕಡಿಮೆ ಹಾನಿಗೆ ₹ 50 ಸಾವಿರ ನೀಡಲಾಗುತ್ತಿದೆ. ಪರಿಹಾರ ನೀಡುವ ಪ್ರಕ್ರಿಯೆ ಹಲವು ಹಂತಗಳನ್ನು ದಾಟಬೇಕಿದೆ. ಈ ಪ್ರಕ್ರಿಯೆ ಸರಳಗೊಳಿಸಬೇಕು ಎಂದು ಯೋಗೀಶ್ ಒತ್ತಾಯಿಸಿದರು.</p>.<p>ಖಾತೆ ಇಲ್ಲದ ಕುಟುಂಬಗಳಿಗೆ ನೆರವು ನೀಡುತ್ತಿಲ್ಲ. ಇದು ತಾರತಮ್ಯ. ಅಂತಹ ಬಡವರ ಸ್ಥಿತಿ ಶೋಚನೀಯವಾಗಿದೆ. ಅವರಿಗೂ ಮಾನವೀಯತೆ ಆಧಾರದಲ್ಲಿ ನೆರವು ನೀಡಬೇಕು. ಹಿಂದಿನ ಮಳೆಗಾಲದಲ್ಲಿ ಮನೆ ಕಳೆದುಕೊಂಡವರಿಗೆ ಬಾಕಿ ಇರುವಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್, ಯಮುನಾ ರಂಗೇಗೌಡ, ಮೆಹಕ್ ಷರೀಫ್, ಪಿ.ವಿ.ವಿಶ್ವನಾಥ್, ಕೆ.ರಂಗನಾಥ್, ಪ್ರವೀಣ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಗುರುವಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಪಾಲಿಕೆ ವಿರೋಧ ಪಕ್ಷದ ನಾಯಕ ಎಚ್.ಸಿ.ಯೋಗೀಶ್ ಭೇಟಿ ನೀಡಿ ಜನರ ಅಹವಾಲು ಆಲಿಸಿದರು.</p>.<p>ಜೆ.ಸಿ.ನಗರ, ಅಶೋಕ ನಗರ, ರಾಜೀವ್ಗಾಂಧಿ ಬಡಾವಣೆ, ಚೌಡೇಶ್ವರಿ ಕಾಲೊನಿ ಪ್ರದೇಶಗಳಿಗೆ ಭೇಟಿ ನೀಡಿದರು. ಪಾಲಿಕೆಕೈಗೊಂಡ ಕ್ರಮಗಳ ಮಾಹಿತಿ ಪಡೆದರು. ಬಿದ್ದ ಮನೆಗಳ ಅವಶೇಷ ವೀಕ್ಷಿಸಿದರು.</p>.<p>ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ನೀಡುತ್ತಿದ್ದಾರೆ. ಶೇ 75ಕ್ಕಿಂತ ಹೆಚ್ಚು ಹಾನಿಗೆ ₹ 5 ಲಕ್ಷ, ಭಾಗಶಃ ಮನೆಗಳಿಗೆ ₹ 3 ಲಕ್ಷ, ಶೇ 25ಕ್ಕಿಂತ ಕಡಿಮೆ ಹಾನಿಗೆ ₹ 50 ಸಾವಿರ ನೀಡಲಾಗುತ್ತಿದೆ. ಪರಿಹಾರ ನೀಡುವ ಪ್ರಕ್ರಿಯೆ ಹಲವು ಹಂತಗಳನ್ನು ದಾಟಬೇಕಿದೆ. ಈ ಪ್ರಕ್ರಿಯೆ ಸರಳಗೊಳಿಸಬೇಕು ಎಂದು ಯೋಗೀಶ್ ಒತ್ತಾಯಿಸಿದರು.</p>.<p>ಖಾತೆ ಇಲ್ಲದ ಕುಟುಂಬಗಳಿಗೆ ನೆರವು ನೀಡುತ್ತಿಲ್ಲ. ಇದು ತಾರತಮ್ಯ. ಅಂತಹ ಬಡವರ ಸ್ಥಿತಿ ಶೋಚನೀಯವಾಗಿದೆ. ಅವರಿಗೂ ಮಾನವೀಯತೆ ಆಧಾರದಲ್ಲಿ ನೆರವು ನೀಡಬೇಕು. ಹಿಂದಿನ ಮಳೆಗಾಲದಲ್ಲಿ ಮನೆ ಕಳೆದುಕೊಂಡವರಿಗೆ ಬಾಕಿ ಇರುವಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್, ಯಮುನಾ ರಂಗೇಗೌಡ, ಮೆಹಕ್ ಷರೀಫ್, ಪಿ.ವಿ.ವಿಶ್ವನಾಥ್, ಕೆ.ರಂಗನಾಥ್, ಪ್ರವೀಣ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>