<p><strong>ಶಿವಮೊಗ್ಗ: </strong>ಭದ್ರಾವತಿ ನಗರಸಭೆ, ತೀರ್ಥಹಳ್ಳಿಯ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಮೊಳಗಿಸಿದೆ.</p>.<p>ಭದ್ರಾವತಿ ನಗರಸಭೆಯ 34 ಸ್ಥಾನಗಳಲ್ಲಿ ಕಾಂಗ್ರೆಸ್ 18, ಜೆಡಿಎಸ್ 11, ಬಿಜೆಪಿ 4 ಹಾಗೂ ಒಬ್ಬರು ಪಕ್ಷೇತರರು ಆಯ್ಕೆಯಾಗಿದ್ದಾರೆ. ಚುನಾವಣೆ ಘೋಷಣೆಗೂ ಮೊದಲು ನಡೆದಿದ್ದ ಕಬಡ್ಡಿ ಪಂದ್ಯಾವಳಿಯ ಗಲಾಟೆಯ ನಂತರ ಬಿಜೆಪಿಗೆ ಪರಿಸ್ಥಿತಿ ಅನುಕೂಲಕರವಾಗಿತ್ತು. ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯುವ ಭರವಸೆ ಮೂಡಿಸಿತ್ತು.</p>.<p>ಶಾಸಕ ಸಂಗಮೇಶ್ವರ ಮತ್ತು ಅವರ ಕುಟುಂಬದ ಸದಸ್ಯರ ಮೇಲೆ ಪ್ರಕರಣ ದಾಖಲಿಸಿದ್ದನ್ನು ವಿರೋಧಿಸಿ ಕಾಂಗ್ರೆಸ್ ಜಿಲ್ಲೆಯಲ್ಲಿ ದೊಡ್ಡ ಆಂದೋಲನವನ್ನೇ ನಡೆಸಿತ್ತು. ಹಾಗಾಗಿ, ನಗರಸಭೆ ಚುನಾವಣೆ ತೀವ್ರ ಕುತೂಹಲ ಮೂಡಿಸಿತ್ತು. ಕೊನೆಗೂ ಮತದಾರರು ಕಾಂಗ್ರೆಸ್ ಬೆಂಬಲಿಸಿರುವುದು ಫಲಿತಾಂಶದಿಂದ ಸ್ಪಷ್ಟವಾಗಿದೆ.</p>.<p>ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯ 15 ಸ್ಥಾನಗಳಲ್ಲಿ ಕಾಂಗ್ರೆಸ್ 9, ಬಿಜೆಪಿ 6 ಸ್ಥಾನ ಗಳಿಸಿವೆ. ಆ ಮೂಲಕ ಎರಡೂವರೆ ದಶಕಗಳ ಬಿಜೆಪಿ ಅಧಿಪತ್ಯ ಅಂತ್ಯಗೊಂಡಿದೆ. ಜೆಡಿಎಸ್ ತೊರೆದು ಈಚೆಗೆ ಕಾಂಗ್ರೆಸ್ ಸೇರಿದ ಸಹಕಾರಿ ಧುರೀಣ ಆರ್.ಎಂ.ಮಂಜುನಾಥ ಗೌಡ, ಕಿಮ್ಮನೆ ರತ್ನಾಕರ ಅವರ ಒಗ್ಗಟ್ಟು ಕಾಂಗ್ರೆಸ್ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದೆ. ಮುಖ್ಯಮಂತ್ರಿ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಮುಖಭಂಗವಾಗಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಭದ್ರಾವತಿ ನಗರಸಭೆ, ತೀರ್ಥಹಳ್ಳಿಯ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಮೊಳಗಿಸಿದೆ.</p>.<p>ಭದ್ರಾವತಿ ನಗರಸಭೆಯ 34 ಸ್ಥಾನಗಳಲ್ಲಿ ಕಾಂಗ್ರೆಸ್ 18, ಜೆಡಿಎಸ್ 11, ಬಿಜೆಪಿ 4 ಹಾಗೂ ಒಬ್ಬರು ಪಕ್ಷೇತರರು ಆಯ್ಕೆಯಾಗಿದ್ದಾರೆ. ಚುನಾವಣೆ ಘೋಷಣೆಗೂ ಮೊದಲು ನಡೆದಿದ್ದ ಕಬಡ್ಡಿ ಪಂದ್ಯಾವಳಿಯ ಗಲಾಟೆಯ ನಂತರ ಬಿಜೆಪಿಗೆ ಪರಿಸ್ಥಿತಿ ಅನುಕೂಲಕರವಾಗಿತ್ತು. ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯುವ ಭರವಸೆ ಮೂಡಿಸಿತ್ತು.</p>.<p>ಶಾಸಕ ಸಂಗಮೇಶ್ವರ ಮತ್ತು ಅವರ ಕುಟುಂಬದ ಸದಸ್ಯರ ಮೇಲೆ ಪ್ರಕರಣ ದಾಖಲಿಸಿದ್ದನ್ನು ವಿರೋಧಿಸಿ ಕಾಂಗ್ರೆಸ್ ಜಿಲ್ಲೆಯಲ್ಲಿ ದೊಡ್ಡ ಆಂದೋಲನವನ್ನೇ ನಡೆಸಿತ್ತು. ಹಾಗಾಗಿ, ನಗರಸಭೆ ಚುನಾವಣೆ ತೀವ್ರ ಕುತೂಹಲ ಮೂಡಿಸಿತ್ತು. ಕೊನೆಗೂ ಮತದಾರರು ಕಾಂಗ್ರೆಸ್ ಬೆಂಬಲಿಸಿರುವುದು ಫಲಿತಾಂಶದಿಂದ ಸ್ಪಷ್ಟವಾಗಿದೆ.</p>.<p>ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯ 15 ಸ್ಥಾನಗಳಲ್ಲಿ ಕಾಂಗ್ರೆಸ್ 9, ಬಿಜೆಪಿ 6 ಸ್ಥಾನ ಗಳಿಸಿವೆ. ಆ ಮೂಲಕ ಎರಡೂವರೆ ದಶಕಗಳ ಬಿಜೆಪಿ ಅಧಿಪತ್ಯ ಅಂತ್ಯಗೊಂಡಿದೆ. ಜೆಡಿಎಸ್ ತೊರೆದು ಈಚೆಗೆ ಕಾಂಗ್ರೆಸ್ ಸೇರಿದ ಸಹಕಾರಿ ಧುರೀಣ ಆರ್.ಎಂ.ಮಂಜುನಾಥ ಗೌಡ, ಕಿಮ್ಮನೆ ರತ್ನಾಕರ ಅವರ ಒಗ್ಗಟ್ಟು ಕಾಂಗ್ರೆಸ್ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದೆ. ಮುಖ್ಯಮಂತ್ರಿ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಮುಖಭಂಗವಾಗಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>