ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯ 15 ಸ್ಥಾನಗಳಲ್ಲಿ ಕಾಂಗ್ರೆಸ್ 9, ಬಿಜೆಪಿ 6 ಸ್ಥಾನ ಗಳಿಸಿವೆ. ಆ ಮೂಲಕ ಎರಡೂವರೆ ದಶಕಗಳ ಬಿಜೆಪಿ ಅಧಿಪತ್ಯ ಅಂತ್ಯಗೊಂಡಿದೆ. ಜೆಡಿಎಸ್ ತೊರೆದು ಈಚೆಗೆ ಕಾಂಗ್ರೆಸ್ ಸೇರಿದ ಸಹಕಾರಿ ಧುರೀಣ ಆರ್.ಎಂ.ಮಂಜುನಾಥ ಗೌಡ, ಕಿಮ್ಮನೆ ರತ್ನಾಕರ ಅವರ ಒಗ್ಗಟ್ಟು ಕಾಂಗ್ರೆಸ್ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದೆ. ಮುಖ್ಯಮಂತ್ರಿ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಮುಖಭಂಗವಾಗಿದೆ.