<p><strong>ಸಾಗರ:</strong> ಭಾರತದಲ್ಲಿ ಪ್ರಜಾಪ್ರಭುತ್ವದ ಬೇರುಗಳು ಇನ್ನೂ ಗಟ್ಟಿಯಾಗಿರಲು ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನ ಕಾರಣವಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.</p>.<p>ಇಲ್ಲಿನ ನೆಹರೂ ಮೈದಾನದಲ್ಲಿ ತಾಲ್ಲೂಕು ಆಡಳಿತ ಸೋಮವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. </p>.<p>ಸಾಮಾಜಿಕ ಸಮಾನತೆಯ ಜೊತೆಗೆ ಆರ್ಥಿಕ ಸಮಾನತೆ ಸಾಧಿಸಬೇಕು ಎಂಬ ಸದಾಶಯವನ್ನು ನಮ್ಮ ಸಂವಿಧಾನ ಹೊಂದಿದೆ. ದೇಶದ ಎಲ್ಲಾ ಪ್ರಜೆಗಳಿಗೂ ಪವಿತ್ರವಾದ ಗ್ರಂಥವೆಂದರೆ ಅದು ಸಂವಿಧಾನ ಎಂಬುದು ನಿಸ್ಸಂಶಯ ಎಂದರು. </p>.<p>ಜಗತ್ತಿನ ಶ್ರೇಷ್ಟ ಸಂವಿಧಾನಗಳಲ್ಲಿ ಭಾರತದ ಸಂವಿಧಾನ ಮುಂಚೂಣಿಯಲ್ಲಿದೆ ಎಂಬುದು ನಮ್ಮೆಲ್ಲರಿಗೂ ಹೆಮ್ಮೆ ತರುವ ಸಂಗತಿಯಾಗಿದೆ. ಸಂವಿಧಾನದಲ್ಲಿ ಹೇಳಿರುವ ಹಕ್ಕು ಮತ್ತು ಕರ್ತವ್ಯಗಳನ್ನು ಅರಿತು ಆ ಪ್ರಕಾರ ನಡೆದುಕೊಂಡಾಗ ಗಣರಾಜ್ಯೋತ್ಸವ ಆಚರಣೆ ಹೆಚ್ಚು ಸಾರ್ಥಕತೆ ಪಡೆಯುತ್ತದೆ ಎಂದು ಧ್ವಜಾರೋಹಣ ನೆರವೇರಿಸಿದ ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ ಹೇಳಿದರು.</p>.<p>ವಿಜ್ಞಾನ, ವೈದ್ಯಕೀಯ, ಸಹಕಾರ ಕ್ಷೇತ್ರದಲ್ಲಿನ ಸಾಧನೆಗಾಗಿ ಜೀವನ್, ಡಾ.ವಿದ್ಯಾಶ್ರೀ, ಬಿ.ಎ.ಇಂದೂಧರ ಬೇಸೂರು ಅವರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ದಿಶಾ ಎಚ್.ಆರ್., ಮೇಘಾ ಗಣೇಶ್ ಪ್ರಸಾದ್, ರಾಹುಲ್ ಕೆ.ಎಸ್. , ತನಿಷ್ಕಾ ಅವರಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. </p>.<p>ಎಎಸ್ ಪಿ ಬೆನಕ ಪ್ರಸಾದ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿವಪ್ರಕಾಶ್, ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದಸ್ವಾಮಿ ಇದ್ದರು. ಪೊಲೀಸ್, ಗೃಹರಕ್ಷಕ ದಳ, ಅರಣ್ಯ ಇಲಾಖೆ, ಎನ್ಸಿಸಿ, ನಿವೃತ್ತ ಯೋಧರು, ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ಭಾರತದಲ್ಲಿ ಪ್ರಜಾಪ್ರಭುತ್ವದ ಬೇರುಗಳು ಇನ್ನೂ ಗಟ್ಟಿಯಾಗಿರಲು ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನ ಕಾರಣವಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.</p>.<p>ಇಲ್ಲಿನ ನೆಹರೂ ಮೈದಾನದಲ್ಲಿ ತಾಲ್ಲೂಕು ಆಡಳಿತ ಸೋಮವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. </p>.<p>ಸಾಮಾಜಿಕ ಸಮಾನತೆಯ ಜೊತೆಗೆ ಆರ್ಥಿಕ ಸಮಾನತೆ ಸಾಧಿಸಬೇಕು ಎಂಬ ಸದಾಶಯವನ್ನು ನಮ್ಮ ಸಂವಿಧಾನ ಹೊಂದಿದೆ. ದೇಶದ ಎಲ್ಲಾ ಪ್ರಜೆಗಳಿಗೂ ಪವಿತ್ರವಾದ ಗ್ರಂಥವೆಂದರೆ ಅದು ಸಂವಿಧಾನ ಎಂಬುದು ನಿಸ್ಸಂಶಯ ಎಂದರು. </p>.<p>ಜಗತ್ತಿನ ಶ್ರೇಷ್ಟ ಸಂವಿಧಾನಗಳಲ್ಲಿ ಭಾರತದ ಸಂವಿಧಾನ ಮುಂಚೂಣಿಯಲ್ಲಿದೆ ಎಂಬುದು ನಮ್ಮೆಲ್ಲರಿಗೂ ಹೆಮ್ಮೆ ತರುವ ಸಂಗತಿಯಾಗಿದೆ. ಸಂವಿಧಾನದಲ್ಲಿ ಹೇಳಿರುವ ಹಕ್ಕು ಮತ್ತು ಕರ್ತವ್ಯಗಳನ್ನು ಅರಿತು ಆ ಪ್ರಕಾರ ನಡೆದುಕೊಂಡಾಗ ಗಣರಾಜ್ಯೋತ್ಸವ ಆಚರಣೆ ಹೆಚ್ಚು ಸಾರ್ಥಕತೆ ಪಡೆಯುತ್ತದೆ ಎಂದು ಧ್ವಜಾರೋಹಣ ನೆರವೇರಿಸಿದ ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ ಹೇಳಿದರು.</p>.<p>ವಿಜ್ಞಾನ, ವೈದ್ಯಕೀಯ, ಸಹಕಾರ ಕ್ಷೇತ್ರದಲ್ಲಿನ ಸಾಧನೆಗಾಗಿ ಜೀವನ್, ಡಾ.ವಿದ್ಯಾಶ್ರೀ, ಬಿ.ಎ.ಇಂದೂಧರ ಬೇಸೂರು ಅವರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ದಿಶಾ ಎಚ್.ಆರ್., ಮೇಘಾ ಗಣೇಶ್ ಪ್ರಸಾದ್, ರಾಹುಲ್ ಕೆ.ಎಸ್. , ತನಿಷ್ಕಾ ಅವರಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. </p>.<p>ಎಎಸ್ ಪಿ ಬೆನಕ ಪ್ರಸಾದ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿವಪ್ರಕಾಶ್, ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದಸ್ವಾಮಿ ಇದ್ದರು. ಪೊಲೀಸ್, ಗೃಹರಕ್ಷಕ ದಳ, ಅರಣ್ಯ ಇಲಾಖೆ, ಎನ್ಸಿಸಿ, ನಿವೃತ್ತ ಯೋಧರು, ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>