ಕಲ್ಲಗಂಗೂರು ಗ್ರಾಮ ನಗರಕ್ಕೆ ಅಂಟಿಕೊಂಡಿದ್ದರೂ ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲ. ಇದರಿಂದ ಕೆಲಸಕ್ಕೆಂದು ಶಿವಮೊಗ್ಗಕ್ಕೆ ಬರುವ ಕಾರ್ಮಿಕರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಿದೆ. ಈ ತೊಂದರೆ ಕೂಡ ಶೀಘ್ರ ಸರಿಪಡಿಸಿ ಸಾರಿಗೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಮಹಿಳಾ ಭೋವಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಕೆ.ಬಿ. ವಿಜಯ, ಪದಾಧಿಕಾರಿಗಳಾದ ರೂಪಾ, ಶಾಂತಾ, ಅನಿಲ್ ಇದ್ದರು.