ತಾವು ಬಯಸಿದ ವಿಧಾನದಲ್ಲೇಚಿಕಿತ್ಸೆ ನೀಡಬೇಕು ಎಂದು ಕೋರಿ ಸ್ವಾಮೀಜಿ, ಜಿಲ್ಲಾಧಿಕಾರಿ, ಡಿಎಚ್ಒ, ಮುಖ್ಯಮಂತ್ರಿ, ಪ್ರಧಾನಮಂತ್ರಿಗೆ ಪತ್ರವನ್ನೂ ಬರೆದಿದ್ದರು. ಪ್ರಸ್ತುತ ಸನ್ನಿವೇಶಕ್ಕೆ ಅಲೋಪತಿ ಸರಿ ಎನಿಸಿದರೂ, ಬಾಲ್ಯದಿಂದಲೂ ದೇಹ ಆಯುರ್ವೇದ ಚಿಕಿತ್ಸೆಗೆ ಒಗ್ಗಿದೆ. ಕೊರೊನಾಗೆ ಸೂಕ್ತ ಮತ್ತು ನಿರ್ದಿಷ್ಟವಾದ ಚಿಕಿತ್ಸೆ ಅಲೋಪತಿಯಲ್ಲೂ ಇಲ್ಲ. ರೋಗ ಲಕ್ಷಣ ಆಧರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗಾಗಿ, ತಮ್ಮ ಇಚ್ಚಿಗೆ ಅವಕಾಶ ನೀಡಬೇಕು ಎಂದು ಕೋರಿದ್ದರು. ಶನಿವಾರ ಬಾಬಾ ಒಬ್ಬರು ಚಿಕಿತ್ಸೆ ನೀಡಲು ಬರುತ್ತಿದ್ದಾರೆ. ಅವಕಾಶ ಕೊಡಿ ಎಂದು ಮತ್ತೆ ಮನವಿ ಮಾಡಿದ್ದರು.