ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರು ಪೂರೈಕೆಗೆ ಜುಲೈ 8ರ ಗಡುವು

ಪಾಲಿಕೆ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸೂಚನೆ
Last Updated 9 ಜೂನ್ 2020, 9:24 IST
ಅಕ್ಷರ ಗಾತ್ರ

ಶಿವಮೊಗ್ಗ: ನಗರ ಪಾಲಿಕೆ ವ್ಯಾಪ್ತಿಯಕುಡಿಯುವ ನೀರಿನ ಕಾಮಗಾರಿಗಳನ್ನು ಜುಲೈ 8ರ ಒಳಗೆಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ನಗರ ಪಾಲಿಕೆ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕುಡಿಯುವ ನೀರುಸರಬರಾಜು ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ನಗರದ 35 ವಾರ್ಡ್‌ಗಳಲ್ಲಿನಡೆಯುತ್ತಿರುವ ಕುಡಿಯುವ ನೀರಿನ ಕಾಮಗಾರಿಗಳಮೇಲೆ ನಿರಂತರ ನಿಗಾ ವಹಿಸಬೇಕು. ನಿಗದಿಪಡಿಸಿದ ಅವಧಿಯ ಒಳಗೆ ನೀರು ಸರಬರಾಜು ಮಾಡಬೇಕು ಎಂದು ತಾಕೀತು ಮಾಡಿದರು.

ನಗರ ಪಾಲಿಕೆ ಸದಸ್ಯ ಎಸ್.ಎನ್.ಚನ್ನಬಸಪ್ಪ, ನಗರದ ಹಲವು ವಾರ್ಡ್‌ಗಳಲ್ಲಿಟ್ಯಾಂಕ್‌ಗಳನೀರು ಸಂಪೂರ್ಣ ತುಂಬುತ್ತಿಲ್ಲ. ಮೊದಲು ಈ ಸಮಸ್ಯೆ ಬಗೆಹರಿಸಬೇಕು. ಆಗಎಲ್ಲಾ ವಾರ್ಡ್‌ಗಳಿಗೂ ಸಮರ್ಪಕ ನೀರು ಸರಬರಾಜು ಮಾಡಲು ಸಾಧ್ಯ. ಕೂಡಲೇಅತ್ತಗಮನಹರಿಸಬೇಕುಎಂದು ಸಲಹೆ ನೀಡಿದರು.

ಸದಸ್ಯ ಶಂಕರಗನ್ನಿ, ಅಧಿಕಾರಿಗಳ ನಡುವಿನ ಸಮನ್ವಯತೆಯ ಕೊರತೆ ನೀರಿನ ಸಮಸ್ಯೆಕಾರಣ. ಅಧಿಕಾರಿಗಳಮಧ್ಯೆಹೊಂದಾಣಿಕೆ ಮುಖ್ಯ. ಕೋಟಿಗಟ್ಟಲೆ ಖರ್ಚುಮಾಡಿ ಕಾಮಗಾರಿ ನಡೆಸಿದರೆ ಯಾವುದೇ ಪ್ರಯೋಜನವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಟ್ಯಾಂಕ್‌ಗಳಲ್ಲಿನೀರು ಸಂಪೂರ್ಣ ತುಂಬಬೇಕು. ಯಾವುದೇತೊಡಕುಗಳಿದ್ದರೆ ಕೂಡಲೇ ತಿಳಿಸಬೇಕು. ಜೂನ್ 10ರಸಂಜೆ 5ರ ಒಳಗೆಅಧಿಕಾರಿಗಳ ಸಭೆ ಕರೆದುಕುಡಿಯುವ ನೀರಿನ ಮೇಲ್ವಿಚಾರಣೆ ನಡೆಸಬೇಕು ಎಂದು ಸೂಚಿಸಿದರು.

ಯಾವ ವಾರ್ಡ್‌ಗಳಲ್ಲಿಯುಜಿಡಿ ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿ ಪ್ರಗತಿಯ ಸಮಗ್ರ ವಿವರ ನೀಡಬೇಕು. ಯುಜಿಡಿ ಕಾಮಗಾರಿ ಮುಗಿದಿರುವ ಭಾಗಗಳಲ್ಲಿ ಪಾಲಿಕೆ ಸದಸ್ಯರು ಮುಂದೆ ನಿಂತು ಮನೆಗಳಿಗೆ ಸಂಪರ್ಕ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಅಶ್ವತ್ಥ ನಗರ,ಎಲ್‌ಬಿಎಸ್‌ ನಗರ,ಪಿ ಆ್ಯಂಡ್ಟಿ ಕಾಲೋನಿ, ಬಸವೇಶ್ವರ ನಗರ, ಕೃಷಿ ನಗರ, ಸಹ್ಯಾದ್ರಿ ನಗರ, ಸಹ್ಯಾದ್ರಿ ಬಡಾವಣೆ, ಅಶೋಕ ನಗರ, ಅರವಿಂದ ನಗರ, ಮಂಜುನಾಥ ಬಡಾವಣೆ, ಆನಂದರಾವ್ ಬಡಾವಣೆ, ಗೋಪಾಳ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಆಲ್ಕೋಳ, ಅಮೃತ್ ಲೇಔಟ್, ಸೂರ್ಯ ಬಡಾವಣೆಯಲ್ಲಿ ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ ಅಧಿಕಾರಿಗಳು ಮಾಹಿತಿ ನೀಡಿದರು.

ಪಾಲಿಕೆ ಉಪ ಮೇಯರ್ ಸುರೇಖಾ ಮುರಳೀಧರ್, ಆಯುಕ್ತ ಚಿದಾನಂದ ವಟಾರೆಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT