ಸಾಗರ: ತಾಲ್ಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ಅರ್ಚಕ ಶೇಷಗಿರಿ ಭಟ್ ಅವರಿಗೆ ನಿತ್ಯ ಪೂಜೆ, ವಿಶೇಷ ಪೂಜೆ, ನವರಾತ್ರಿ ಪೂಜೆ, ಚಂಡಿಕಾ ಯಾಗ, ಪ್ರಸಾದ ವಿತರಣೆ ಮೊದಲಾದ ಧಾರ್ಮಿಕ ಕಾರ್ಯಗಳಿಗೆ ಧರ್ಮದರ್ಶಿ ರಾಮಪ್ಪ ಅವರು ಅಡ್ಡಿ, ಆತಂಕ ಉಂಟು ಮಾಡಬಾರದು ಎಂದು ಇಲ್ಲಿನ ಸಿವಿಲ್ ನ್ಯಾಯಾಲಯ ಸೋಮವಾರ ನಿರ್ಬಂಧಕಾಜ್ಞೆಯ ಮಧ್ಯಂತರ ಆದೇಶ ಹೊರಡಿಸಿದೆ.