<p><strong>ಶಿವಮೊಗ್ಗ:</strong> ‘ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಜನ್ಮದಿನ ಆಚರಿಸಿಕೊಂಡ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ವಿರುದ್ಧ ಕ್ರಮ<br />ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಎನ್ಎಸ್ಯುಐ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ನಿತ್ಯ ಹೆಚ್ಚಾಗುತ್ತಿವೆ. ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆದರೆ, ಶಾಸಕ ಕೆ.ಬಿ. ಅಶೋಕ್ ನಾಯ್ಕ ಅವರು ಸರ್ಕಾರದ ನಿಯಮಾವಳಿ ಉಲ್ಲಂಘಿಸಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ ಎಂದು<br />ದೂರಿದರು.</p>.<p>ಸವಳಂಗ ರಸ್ತೆಯಲ್ಲಿರುವ ಅಕ್ಷರ ಶಿಕ್ಷಣ ಸಂಸ್ಥೆಯಲ್ಲಿ ಫೌಂಡರ್ಸ್ ಡೇ ಹೆಸರಿನಲ್ಲಿ ಜನ್ಮದಿನಾಚರಣೆ ನಡೆದಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆಯಾಗಿದ್ದರೂ ಶಾಲೆಗೆ ಮಕ್ಕಳನ್ನು ಕರೆಸಿಕೊಂಡು ನೃತ್ಯಮಾಡಿಕುಪ್ಪಳಿಸಿದ್ದಾರೆ. ಮಕ್ಕಳಿಗೆ ಕೋವಿಡ್ ಹರಡುವ ಸಾಧ್ಯತೆ ಇದೆ. ಶಾಸಕರು ತಮ್ಮ ಜವಾಬ್ದಾರಿ ಮರೆತು ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿ, ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಎನ್ಎಸ್ಯುಐ ಮುಖಂಡರಾದ ಚೇತನ್, ಮಧುಸೂದನ್, ರವಿಕುಮಾರ್, ವಿಕ್ರಂ, ಸುಹಾಸ್, ವಿಜಯ್ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಜನ್ಮದಿನ ಆಚರಿಸಿಕೊಂಡ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ವಿರುದ್ಧ ಕ್ರಮ<br />ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಎನ್ಎಸ್ಯುಐ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ನಿತ್ಯ ಹೆಚ್ಚಾಗುತ್ತಿವೆ. ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆದರೆ, ಶಾಸಕ ಕೆ.ಬಿ. ಅಶೋಕ್ ನಾಯ್ಕ ಅವರು ಸರ್ಕಾರದ ನಿಯಮಾವಳಿ ಉಲ್ಲಂಘಿಸಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ ಎಂದು<br />ದೂರಿದರು.</p>.<p>ಸವಳಂಗ ರಸ್ತೆಯಲ್ಲಿರುವ ಅಕ್ಷರ ಶಿಕ್ಷಣ ಸಂಸ್ಥೆಯಲ್ಲಿ ಫೌಂಡರ್ಸ್ ಡೇ ಹೆಸರಿನಲ್ಲಿ ಜನ್ಮದಿನಾಚರಣೆ ನಡೆದಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆಯಾಗಿದ್ದರೂ ಶಾಲೆಗೆ ಮಕ್ಕಳನ್ನು ಕರೆಸಿಕೊಂಡು ನೃತ್ಯಮಾಡಿಕುಪ್ಪಳಿಸಿದ್ದಾರೆ. ಮಕ್ಕಳಿಗೆ ಕೋವಿಡ್ ಹರಡುವ ಸಾಧ್ಯತೆ ಇದೆ. ಶಾಸಕರು ತಮ್ಮ ಜವಾಬ್ದಾರಿ ಮರೆತು ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿ, ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಎನ್ಎಸ್ಯುಐ ಮುಖಂಡರಾದ ಚೇತನ್, ಮಧುಸೂದನ್, ರವಿಕುಮಾರ್, ವಿಕ್ರಂ, ಸುಹಾಸ್, ವಿಜಯ್ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>