ಪ್ರತಿ ದಿನವೂ ನೂರಕ್ಕೂ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗುತ್ತಿವೆ. ಸಾವಿನ ಸಂಖ್ಯೆಯೂ 358ಕ್ಕೆ ಏರಿದೆ. ಇದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ. ಹಾಗಾಗಿ, ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಪ್ರಮುಖ ರಸ್ತೆಗಳು, ವೃತ್ತ, ಮಾರುಕಟ್ಟೆ, ವಾಣಿಜ್ಯ ಕೇಂದ್ರಗಳನ್ನು ಮಧ್ಯಾಹ್ನದ ವೇಳೆಗೆ ದಿಢೀರ್ ಮುಚ್ಚಿಸಿದ ಪರಿಣಾಮ ಬಂದ್ ವಾತಾವರಣ ನಿರ್ಮಾಣವಾಗಿತ್ತು.