ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾತನಾಡಿ, ಶುಶ್ರೂಷಕಿಯರ ಸಮರ್ಪಕ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿ, ವರದಿ ಸಲ್ಲಿಸಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಲಾಗಿದೆ. ಇದೇ ರೀತಿ ಕರ್ತವ್ಯಕ್ಕೆ ನಿಯೋಜಿಸಲಾಗುವ ವಿವಿಧ ವಿಭಾಗಗಳ ಮುಖ್ಯಸ್ಥರು ಪ್ರತಿ ದಿನವೂ ವರದಿ ಸಲ್ಲಿಸಬೇಕು. ಈ ಆದೇಶ ಉಲ್ಲಂಘಿಸುವುದು ಕ್ರಿಮಿನಲ್ ಅಪರಾಧ. ಅಂತಹವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.