‘ಮೃತಪಟ್ಟಿದ್ದಾರೆ ಎಂದು ತಾಲ್ಲೂಕು ವೈದ್ಯರು ಹೇಳಿಕೆ ನೀಡಿದರೆ, ನಾಪತ್ತೆಯಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಹೇಳುತ್ತಿದ್ದಾರೆ. ಅವರನ್ನು ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಕರೆದುಕೊಂಡು ಹೋದ ದಾಖಲೆಗಳು ಇವೆ. ಆಮೇಲಿನ ಯಾವ ಮಾಹಿತಿಯೂ ಇಲ್ಲ. ಹಾಗಾಗಿ, ಪೊಲೀಸರಿಗೆ ದೂರು ನೀಡಿದ್ದೇವೆ’ ಎಂದು ಅವರ ಪುತ್ರ ಪರಮೇಶ್ವರಪ್ಪ ವಿವರ ನೀಡಿದರು.