<p><strong>ಶಿವಮೊಗ್ಗ: </strong>ಮತಾಂತರ ನಿಷೇಧ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್ವಾದಿ) ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಮತಾಂತರ ನಿಷೇಧ ಕಾಯ್ದೆ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕು ಕಸಿಯುವ ಸಂವಿಧಾನ ವಿರೋಧಿ ಕ್ರಮ. ಧಾರ್ಮಿಕ ಸ್ವಾತಂತ್ರ್ಯ ಎಂದರೆ ಈ ದೇಶದ ಪ್ರಜೆಗಳು ತನಗೆ ಇಷ್ಟ ಬಂದ ಮತ ಧರ್ಮ ಅನುಸರಿಸಬಹುದು. ಯಾವುದೇ ಧರ್ಮದ ವಿಚಾರಗಳನ್ನು ಪ್ರಚಾರ ಮಾಡಬಹುದು. ಇದು ಪ್ರತಿಯೊಬ್ಬ ಪ್ರಜೆಯ ಮೂಲಭುತ ಹಕ್ಕು ಎಂದು ಪ್ರತಿಪಾದಿಸಿದರು.</p>.<p>ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮಂಡಿಸಿದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ ಒಂದು ದೌರ್ಜನ್ಯಕಾರಿ ಸರ್ವಾಧಿಕಾರದ ಕ್ರಮ. ಸಮಾನತೆ, ಸಾಮಾಜಿಕ ನ್ಯಾಯಗಳಿಗೆ ವಿರೋಧಿಯಾಗಿದೆ. ಭಾರತವನ್ನು ಜಾತಿ ತಾರತಮ್ಯ, ಅಸಮಾನತೆಯ ಆಧಾರದ ಮನುವಾದಿ ಹಿಂದೂ ರಾಷ್ಟ್ರವನ್ನಾಗಿ ಪರಿವರ್ತಿಸುವ ಹುನ್ನಾರ ಅಡಗಿದೆ. ಈ ಕಾಯ್ದೆಯನ್ನು ಒಪ್ಪಲು ಸಾಧ್ಯವಿಲ್ಲ. ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.</p>.<p>ಯಾವುದೇ ಒಂದು ಧರ್ಮದ ಜನ ಮತ್ತೊಂದು ಧರ್ಮಕ್ಕೆ ಬದಲಾಗುತ್ತಾರೆ ಎಂದಾದರೆ ಆ ಧರ್ಮದ ಧಾರ್ಮಿಕ ಮುಖಂಡರು, ಪ್ರತಿಪಾದಕರು ತಮ್ಮ ಮತಗಳಲ್ಲಿರುವ ದೋಷ, ಸಮಸ್ಯೆ ನಿವಾರಿಸಬೇಕು. ಧರ್ಮವನ್ನೇ ಹೀಯಾಳಿಸುವುದು ಸರಿಯಲ್ಲ. ಸರ್ವಾಧಿಕಾರಿ ಕಾನೂನುಗಳ ಮೂಲಕ ಜಾರಿಗೆ ತರುವುದು ನ್ಯಾಯವಲ್ಲ. ರಾಜ್ಯಪಾಲರು ಈ ಕಾಯ್ದೆಗೆ ಅಂಕಿತ ಹಾಕಬಾರದು ಎಂದು ಒತ್ತಾಯಿಸಿದರು.</p>.<p>ಸಿಪಿಐ(ಎಂ) ಜಿಲ್ಲಾ ಸಮಿತಿ ಕಾರ್ಯದರ್ಶಿ ಎಂ. ನಾರಾಯಣ, ಮುಖಂಡರಾದ ಅನಂತರಾಮು, ಹನುಮಮ್ಮ, ಲಕ್ಷ್ಮಿ ನಾರಾಯಣ್, ಶಿವಣ್ಣ, ಪ್ರಭಾಕರ್, ಕೃಷ್ಣೋಜಿರಾವ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಮತಾಂತರ ನಿಷೇಧ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್ವಾದಿ) ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಮತಾಂತರ ನಿಷೇಧ ಕಾಯ್ದೆ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕು ಕಸಿಯುವ ಸಂವಿಧಾನ ವಿರೋಧಿ ಕ್ರಮ. ಧಾರ್ಮಿಕ ಸ್ವಾತಂತ್ರ್ಯ ಎಂದರೆ ಈ ದೇಶದ ಪ್ರಜೆಗಳು ತನಗೆ ಇಷ್ಟ ಬಂದ ಮತ ಧರ್ಮ ಅನುಸರಿಸಬಹುದು. ಯಾವುದೇ ಧರ್ಮದ ವಿಚಾರಗಳನ್ನು ಪ್ರಚಾರ ಮಾಡಬಹುದು. ಇದು ಪ್ರತಿಯೊಬ್ಬ ಪ್ರಜೆಯ ಮೂಲಭುತ ಹಕ್ಕು ಎಂದು ಪ್ರತಿಪಾದಿಸಿದರು.</p>.<p>ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮಂಡಿಸಿದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ ಒಂದು ದೌರ್ಜನ್ಯಕಾರಿ ಸರ್ವಾಧಿಕಾರದ ಕ್ರಮ. ಸಮಾನತೆ, ಸಾಮಾಜಿಕ ನ್ಯಾಯಗಳಿಗೆ ವಿರೋಧಿಯಾಗಿದೆ. ಭಾರತವನ್ನು ಜಾತಿ ತಾರತಮ್ಯ, ಅಸಮಾನತೆಯ ಆಧಾರದ ಮನುವಾದಿ ಹಿಂದೂ ರಾಷ್ಟ್ರವನ್ನಾಗಿ ಪರಿವರ್ತಿಸುವ ಹುನ್ನಾರ ಅಡಗಿದೆ. ಈ ಕಾಯ್ದೆಯನ್ನು ಒಪ್ಪಲು ಸಾಧ್ಯವಿಲ್ಲ. ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.</p>.<p>ಯಾವುದೇ ಒಂದು ಧರ್ಮದ ಜನ ಮತ್ತೊಂದು ಧರ್ಮಕ್ಕೆ ಬದಲಾಗುತ್ತಾರೆ ಎಂದಾದರೆ ಆ ಧರ್ಮದ ಧಾರ್ಮಿಕ ಮುಖಂಡರು, ಪ್ರತಿಪಾದಕರು ತಮ್ಮ ಮತಗಳಲ್ಲಿರುವ ದೋಷ, ಸಮಸ್ಯೆ ನಿವಾರಿಸಬೇಕು. ಧರ್ಮವನ್ನೇ ಹೀಯಾಳಿಸುವುದು ಸರಿಯಲ್ಲ. ಸರ್ವಾಧಿಕಾರಿ ಕಾನೂನುಗಳ ಮೂಲಕ ಜಾರಿಗೆ ತರುವುದು ನ್ಯಾಯವಲ್ಲ. ರಾಜ್ಯಪಾಲರು ಈ ಕಾಯ್ದೆಗೆ ಅಂಕಿತ ಹಾಕಬಾರದು ಎಂದು ಒತ್ತಾಯಿಸಿದರು.</p>.<p>ಸಿಪಿಐ(ಎಂ) ಜಿಲ್ಲಾ ಸಮಿತಿ ಕಾರ್ಯದರ್ಶಿ ಎಂ. ನಾರಾಯಣ, ಮುಖಂಡರಾದ ಅನಂತರಾಮು, ಹನುಮಮ್ಮ, ಲಕ್ಷ್ಮಿ ನಾರಾಯಣ್, ಶಿವಣ್ಣ, ಪ್ರಭಾಕರ್, ಕೃಷ್ಣೋಜಿರಾವ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>