ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಮತಾಂತರ ನಿಷೇಧ ಕಾಯ್ದೆಗೆ ಸಿಪಿಐ (ಎಂ) ವಿರೋಧ

Last Updated 17 ಜನವರಿ 2022, 13:40 IST
ಅಕ್ಷರ ಗಾತ್ರ

ಶಿವಮೊಗ್ಗ: ಮತಾಂತರ ನಿಷೇಧ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮತಾಂತರ ನಿಷೇಧ ಕಾಯ್ದೆ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕು ಕಸಿಯುವ ಸಂವಿಧಾನ ವಿರೋಧಿ ಕ್ರಮ. ಧಾರ್ಮಿಕ ಸ್ವಾತಂತ್ರ್ಯ ಎಂದರೆ ಈ ದೇಶದ ಪ್ರಜೆಗಳು ತನಗೆ ಇಷ್ಟ ಬಂದ ಮತ ಧರ್ಮ ಅನುಸರಿಸಬಹುದು. ಯಾವುದೇ ಧರ್ಮದ ವಿಚಾರಗಳನ್ನು ಪ್ರಚಾರ ಮಾಡಬಹುದು. ಇದು ಪ್ರತಿಯೊಬ್ಬ ಪ್ರಜೆಯ ಮೂಲಭುತ ಹಕ್ಕು ಎಂದು ಪ್ರತಿಪಾದಿಸಿದರು.

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮಂಡಿಸಿದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ ಒಂದು ದೌರ್ಜನ್ಯಕಾರಿ ಸರ್ವಾಧಿಕಾರದ ಕ್ರಮ. ಸಮಾನತೆ, ಸಾಮಾಜಿಕ ನ್ಯಾಯಗಳಿಗೆ ವಿರೋಧಿಯಾಗಿದೆ. ಭಾರತವನ್ನು ಜಾತಿ ತಾರತಮ್ಯ, ಅಸಮಾನತೆಯ ಆಧಾರದ ಮನುವಾದಿ ಹಿಂದೂ ರಾಷ್ಟ್ರವನ್ನಾಗಿ ಪರಿವರ್ತಿಸುವ ಹುನ್ನಾರ ಅಡಗಿದೆ. ಈ ಕಾಯ್ದೆಯನ್ನು ಒಪ್ಪಲು ಸಾಧ್ಯವಿಲ್ಲ. ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಯಾವುದೇ ಒಂದು ಧರ್ಮದ ಜನ ಮತ್ತೊಂದು ಧರ್ಮಕ್ಕೆ ಬದಲಾಗುತ್ತಾರೆ ಎಂದಾದರೆ ಆ ಧರ್ಮದ ಧಾರ್ಮಿಕ ಮುಖಂಡರು, ಪ್ರತಿಪಾದಕರು ತಮ್ಮ ಮತಗಳಲ್ಲಿರುವ ದೋಷ, ಸಮಸ್ಯೆ ನಿವಾರಿಸಬೇಕು. ಧರ್ಮವನ್ನೇ ಹೀಯಾಳಿಸುವುದು ಸರಿಯಲ್ಲ. ಸರ್ವಾಧಿಕಾರಿ ಕಾನೂನುಗಳ ಮೂಲಕ ಜಾರಿಗೆ ತರುವುದು ನ್ಯಾಯವಲ್ಲ. ರಾಜ್ಯಪಾಲರು ಈ ಕಾಯ್ದೆಗೆ ಅಂಕಿತ ಹಾಕಬಾರದು ಎಂದು ಒತ್ತಾಯಿಸಿದರು.

ಸಿಪಿಐ(ಎಂ) ಜಿಲ್ಲಾ ಸಮಿತಿ ಕಾರ್ಯದರ್ಶಿ ಎಂ. ನಾರಾಯಣ, ಮುಖಂಡರಾದ ಅನಂತರಾಮು, ಹನುಮಮ್ಮ, ಲಕ್ಷ್ಮಿ ನಾರಾಯಣ್, ಶಿವಣ್ಣ, ಪ್ರಭಾಕರ್, ಕೃಷ್ಣೋಜಿರಾವ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT