<p><strong>ಶಿವಮೊಗ್ಗ: </strong>ಎಲ್ಲ ಧರ್ಮದವರಲ್ಲೂ ಸ್ವಾಭಿಮಾನದಿಂದ ಬದುಕುವಂತಹ ವಾತಾವರಣ ನಿರ್ಮಾಣವಾಗಬೇಕು ಎಂದು ಸೂಡಾ ಮಾಜಿ ಅಧ್ಯಕ್ಷ ಎನ್.ರಮೇಶ್ ಹೇಳಿದರು.</p>.<p>ಮುಸ್ಲಿಂ ಹಾಸ್ಟೆಲ್ ಸಭಾಂಗಣದಲ್ಲಿ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಮೌಲಾನಾ ಅಬುಲ್ ಕಲಂ ಆಜಾದ್ ದಿನಾಚರಣೆ ಪ್ರಯುಕ್ತ ಬುಧವಾರ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಭಾರತದಲ್ಲಿ ಅಲ್ಪಸಂಖ್ಯಾತರ ಬಗ್ಗೆ ಅಪಸ್ವರಗಳು ಕೇಳಿಬರುತ್ತಿವೆ. ಎಲ್ಲ ಧರ್ಮದ ಬಡವರು ಸ್ವಾಭಿಮಾನದಿಂದ ಬದುಕುವಂತೆ ಆದಾಗ ಮಾತ್ರ ಆ ದೇಶ ಸುಸಂಸ್ಕೃತ ದೇಶವಾಗುತ್ತದೆ. ಶಿಕ್ಷಣಕ್ಕೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು. ಶಿಕ್ಷಣದಿಂದ ಮಾತ್ರ ದುಷ್ಟ ಶಕ್ತಿಗಳನ್ನು ಓಡಿಸಲು ಸಾಧ್ಯ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಆಶಯ ಕೂಡ ಇದೇ ಆಗಿತ್ತು ಎಂದರು.</p>.<p>ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ‘ವಿದ್ಯೆ ಕಾಯಂ ಆಸ್ತಿ. ಇದು ಸಮಾಜಕ್ಕೆ ಒಳ್ಳೆಯ ಕೊಡುಗೆಯಾಗಬೇಕು. ಎಲ್ಲ ಶಿಕ್ಷಣ ವಂಚಿತರಿಗೂ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಸಾಮಾಜಿಕ ನ್ಯಾಯ ಪಡೆಯಲು ಶಿಕ್ಷಣ ಬೇಕೇ ಬೇಕು’ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿರುವ ಹಲವರನ್ನು ಗುರುತಿಸಿ ಸನ್ಮಾನಿಸಲಾಯಿತು.</p>.<p>ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಮೊಹಮ್ಮದ್ ನಿಹಾಲ್, ಎನ್ಎಸ್ಯುಐನ ರಾಜ್ಯ ಉಪಾಧ್ಯಕ್ಷ ಕೆ.ಚೇತನ್, ಮಾಜಿ ಪಾಲಿಕೆ ಸದಸ್ಯ ಆಸೀಫ್, ಅಫ್ತಾಬ್, ಸನಾವುಲ್ಲಾ ಖಾನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಎಲ್ಲ ಧರ್ಮದವರಲ್ಲೂ ಸ್ವಾಭಿಮಾನದಿಂದ ಬದುಕುವಂತಹ ವಾತಾವರಣ ನಿರ್ಮಾಣವಾಗಬೇಕು ಎಂದು ಸೂಡಾ ಮಾಜಿ ಅಧ್ಯಕ್ಷ ಎನ್.ರಮೇಶ್ ಹೇಳಿದರು.</p>.<p>ಮುಸ್ಲಿಂ ಹಾಸ್ಟೆಲ್ ಸಭಾಂಗಣದಲ್ಲಿ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಮೌಲಾನಾ ಅಬುಲ್ ಕಲಂ ಆಜಾದ್ ದಿನಾಚರಣೆ ಪ್ರಯುಕ್ತ ಬುಧವಾರ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಭಾರತದಲ್ಲಿ ಅಲ್ಪಸಂಖ್ಯಾತರ ಬಗ್ಗೆ ಅಪಸ್ವರಗಳು ಕೇಳಿಬರುತ್ತಿವೆ. ಎಲ್ಲ ಧರ್ಮದ ಬಡವರು ಸ್ವಾಭಿಮಾನದಿಂದ ಬದುಕುವಂತೆ ಆದಾಗ ಮಾತ್ರ ಆ ದೇಶ ಸುಸಂಸ್ಕೃತ ದೇಶವಾಗುತ್ತದೆ. ಶಿಕ್ಷಣಕ್ಕೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು. ಶಿಕ್ಷಣದಿಂದ ಮಾತ್ರ ದುಷ್ಟ ಶಕ್ತಿಗಳನ್ನು ಓಡಿಸಲು ಸಾಧ್ಯ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಆಶಯ ಕೂಡ ಇದೇ ಆಗಿತ್ತು ಎಂದರು.</p>.<p>ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ‘ವಿದ್ಯೆ ಕಾಯಂ ಆಸ್ತಿ. ಇದು ಸಮಾಜಕ್ಕೆ ಒಳ್ಳೆಯ ಕೊಡುಗೆಯಾಗಬೇಕು. ಎಲ್ಲ ಶಿಕ್ಷಣ ವಂಚಿತರಿಗೂ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಸಾಮಾಜಿಕ ನ್ಯಾಯ ಪಡೆಯಲು ಶಿಕ್ಷಣ ಬೇಕೇ ಬೇಕು’ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿರುವ ಹಲವರನ್ನು ಗುರುತಿಸಿ ಸನ್ಮಾನಿಸಲಾಯಿತು.</p>.<p>ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಮೊಹಮ್ಮದ್ ನಿಹಾಲ್, ಎನ್ಎಸ್ಯುಐನ ರಾಜ್ಯ ಉಪಾಧ್ಯಕ್ಷ ಕೆ.ಚೇತನ್, ಮಾಜಿ ಪಾಲಿಕೆ ಸದಸ್ಯ ಆಸೀಫ್, ಅಫ್ತಾಬ್, ಸನಾವುಲ್ಲಾ ಖಾನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>