<p><strong>ಶಿವಮೊಗ್ಗ</strong>: ‘ಸಮಕಾಲೀನ ಜ್ಞಾನ, ಕೌಶಲಗಳು ಮತ್ತು ವಿಧಾನಗಳನ್ನು ಅಳವಡಿಸಿಕೊಳ್ಳುವುದರಿಂದ ಸೃಜನಶೀಲತೆ ಹೆಚ್ಚುತ್ತದೆ’ ಎಂದು ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಚಾರ್ಯ ಟಿ.ಅವಿನಾಶ್ ತಿಳಿಸಿದರು.</p>.<p>ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರವಾಸೋದ್ಯಮ ಅಧ್ಯಯನ ವಿಷಯದ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಬದಲಾಗುತ್ತಿರುವ ಜಗತ್ತಿನಲ್ಲಿ ಜ್ಞಾನ, ತಂತ್ರಜ್ಞಾನ, ಉದ್ಯೋಗ ಕ್ಷೇತ್ರ ಹಾಗೂ ಸಾಮಾಜಿಕ ವಾತಾವರಣದಲ್ಲಿ ನಿರಂತರ ಪರಿವರ್ತನೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರಂಪರೆಯ ಕಲಿಕೆಯ ವಿಧಾನಗಳಲ್ಲಿ ಮಾತ್ರ ಸೀಮಿತವಾಗಬಾರದು’ ಎಂದು</p>.<p>‘ಪುಸ್ತಕಾಧಾರಿತ ಜ್ಞಾನ ಸಾಕಾಗುವುದಿಲ್ಲ. ಡಿಜಿಟಲ್ ಸಾಹಿತ್ಯಕತೆ. ತಂತ್ರಜ್ಞಾನ ಬಳಕೆ ಮತ್ತು ಮಾಹಿತಿಯನ್ನು ಸಂಗ್ರಹಿಸಿ ವಿಶ್ಲೇಷಿಸುವ ಕೌಶಲಗಳ ಅಗತ್ಯ ಹೆಚ್ಚಾಗಿದೆ’ ಎಂದರು.</p>.<p>ಕಾಲೇಜಿನ ಪ್ರಾಧ್ಯಾಪಕ ಕುಂದನ್ ಬಸವರಾಜ್, ಸರಳಾ ಕೆ.ಎಸ್, ಗಿರಿಧರ್ ಕೆ.ವಿ, ವೀರಶೆಟ್ಟಿ ಜಿ. ರಾಠೋಡ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ‘ಸಮಕಾಲೀನ ಜ್ಞಾನ, ಕೌಶಲಗಳು ಮತ್ತು ವಿಧಾನಗಳನ್ನು ಅಳವಡಿಸಿಕೊಳ್ಳುವುದರಿಂದ ಸೃಜನಶೀಲತೆ ಹೆಚ್ಚುತ್ತದೆ’ ಎಂದು ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಚಾರ್ಯ ಟಿ.ಅವಿನಾಶ್ ತಿಳಿಸಿದರು.</p>.<p>ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರವಾಸೋದ್ಯಮ ಅಧ್ಯಯನ ವಿಷಯದ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಬದಲಾಗುತ್ತಿರುವ ಜಗತ್ತಿನಲ್ಲಿ ಜ್ಞಾನ, ತಂತ್ರಜ್ಞಾನ, ಉದ್ಯೋಗ ಕ್ಷೇತ್ರ ಹಾಗೂ ಸಾಮಾಜಿಕ ವಾತಾವರಣದಲ್ಲಿ ನಿರಂತರ ಪರಿವರ್ತನೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರಂಪರೆಯ ಕಲಿಕೆಯ ವಿಧಾನಗಳಲ್ಲಿ ಮಾತ್ರ ಸೀಮಿತವಾಗಬಾರದು’ ಎಂದು</p>.<p>‘ಪುಸ್ತಕಾಧಾರಿತ ಜ್ಞಾನ ಸಾಕಾಗುವುದಿಲ್ಲ. ಡಿಜಿಟಲ್ ಸಾಹಿತ್ಯಕತೆ. ತಂತ್ರಜ್ಞಾನ ಬಳಕೆ ಮತ್ತು ಮಾಹಿತಿಯನ್ನು ಸಂಗ್ರಹಿಸಿ ವಿಶ್ಲೇಷಿಸುವ ಕೌಶಲಗಳ ಅಗತ್ಯ ಹೆಚ್ಚಾಗಿದೆ’ ಎಂದರು.</p>.<p>ಕಾಲೇಜಿನ ಪ್ರಾಧ್ಯಾಪಕ ಕುಂದನ್ ಬಸವರಾಜ್, ಸರಳಾ ಕೆ.ಎಸ್, ಗಿರಿಧರ್ ಕೆ.ವಿ, ವೀರಶೆಟ್ಟಿ ಜಿ. ರಾಠೋಡ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>