ಬಿಇ ಪದವೀದರ ಆಕರ್ಷ ರಾಜ್ ಗುತ್ತಿಗೆ ವೃತ್ತಿ ನಿರ್ವಹಿಸುತ್ತಿದ್ದರು. ಭಾನುವಾರ ಸಂಜೆ ಕವಲೇದುರ್ಗಕ್ಕೆ ಹೋಗುವ ಮಾರ್ಗ ಮಧ್ಯೆ ಕಾರು ವಿದ್ಯುತ್ ಕಂಬಕ್ಕೆ ತಗಲಿ ಅಪಘಾತವಾಗಿತ್ತು. ಅದೇ ದಿನ ಸಂಜೆಯಿಂದ ಕಾಣೆಯಾಗಿದ್ದರು. ಮಂಗಳವಾರ ಅವರ ಶವ ಪತ್ತೆಯಾಗಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ತೀರ್ಥಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.