<p><strong>ಸೊರಬ</strong>: ಮೊಬೈಲ್ ಟವರ್ನಲ್ಲಿ ಅಳವಡಿಸಿದ್ದ ಬ್ಯಾಟರಿಗಳನ್ನು ಕಳವು ಮಾಡಿದ ಆರು ಆರೋಪಿಗಳನ್ನು ಗುರುವಾರ ಬಂಧಿಸುವಲ್ಲಿ ಸೊರಬ ಪೊಲೀಸರು ಯಶಸ್ವಿಯಾಗಿದ್ದಾರೆ.</p>.<p>ಸೊರಬದ ಕುದುರೆ ಗಣಿಯಗಣೇಶ, ಹಾವೇರಿಯ ಚಂದ್ರು, ಶಿರಸಿಯ ದೀಪಕ್, ಸಂದೀಪ, ಯುವರಾಜ್, ಉತ್ತರ ಪ್ರದೇಶ ಮೂಲದ ಗುಲ್ಘಾಮ್ ಮಲ್ಲಿಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ತಾಲ್ಲೂಕಿನ ಮಾವಲಿ ಗ್ರಾಮದಲ್ಲಿರುವ ಜಿಯೊ ಮೊಬೈಲ್ ಟವರ್ನಲ್ಲಿ ಅಳವಡಿಸಿದ್ದ 48 ಬ್ಯಾಟರಿಗಳನ್ನು ಮಂಗಳವಾರ ಕಳವು ಮಾಡಲಾಗಿತ್ತು. ಈ ಬಗ್ಗೆ ದೂರು ದಾಖಲಿಸಿಕೊಂಡ ಪೊಲೀಸರು ಕಳ್ಳರನ್ನು ಪತ್ತೆಹಚ್ಚಲು ಕಾರ್ಯಾಚರಣೆ ಕೈಗೊಂಡಿದ್ದರು.</p>.<p>ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಗುರುವಾರ ಪಟ್ಟಣದ ಕಾನುಕೊಪ್ಪದ ಬಳಿ 2 ಲಗೇಜ್ ಆಟೊದಲ್ಲಿ ಕಳವು ಮಾಡಿ ಸಾಗಿಸುತ್ತಿದ್ದ ಬ್ಯಾಟರಿಗಳ ಸಮೇತ 2 ಲಗೇಜ್ ಆಟೊ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಸಿಪಿಐ ಮರುಳಸಿದ್ದಪ್ಪ ಮಾರ್ಗದರ್ಶನದಲ್ಲಿ ಪಿಎಸ್ಐ ಟಿ.ಬಿ.ಪ್ರಶಾಂತ್ ಕುಮಾರ್ ನೇತೃತ್ವದಲ್ಲಿ ಎಎಸ್ಐ ಶಬ್ಬೀರ್ ಖಾನ್, ಸಿಬ್ಬಂದಿ ದಿನೇಶ್, ಸಂದೀಪ್, ಪ್ರಭಾಕರ್, ಮೋಹನ್, ಉಮೇಶ್, ಶಿವಾಜಿ, ಸಿದ್ದನಗೌಡ, ಮಂಜುನಾಥ್ ದೈವಜ್ಞ ಕಾರ್ಯಾಚರಣೆಯಲ್ಲಿ ತೊಡಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೊರಬ</strong>: ಮೊಬೈಲ್ ಟವರ್ನಲ್ಲಿ ಅಳವಡಿಸಿದ್ದ ಬ್ಯಾಟರಿಗಳನ್ನು ಕಳವು ಮಾಡಿದ ಆರು ಆರೋಪಿಗಳನ್ನು ಗುರುವಾರ ಬಂಧಿಸುವಲ್ಲಿ ಸೊರಬ ಪೊಲೀಸರು ಯಶಸ್ವಿಯಾಗಿದ್ದಾರೆ.</p>.<p>ಸೊರಬದ ಕುದುರೆ ಗಣಿಯಗಣೇಶ, ಹಾವೇರಿಯ ಚಂದ್ರು, ಶಿರಸಿಯ ದೀಪಕ್, ಸಂದೀಪ, ಯುವರಾಜ್, ಉತ್ತರ ಪ್ರದೇಶ ಮೂಲದ ಗುಲ್ಘಾಮ್ ಮಲ್ಲಿಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ತಾಲ್ಲೂಕಿನ ಮಾವಲಿ ಗ್ರಾಮದಲ್ಲಿರುವ ಜಿಯೊ ಮೊಬೈಲ್ ಟವರ್ನಲ್ಲಿ ಅಳವಡಿಸಿದ್ದ 48 ಬ್ಯಾಟರಿಗಳನ್ನು ಮಂಗಳವಾರ ಕಳವು ಮಾಡಲಾಗಿತ್ತು. ಈ ಬಗ್ಗೆ ದೂರು ದಾಖಲಿಸಿಕೊಂಡ ಪೊಲೀಸರು ಕಳ್ಳರನ್ನು ಪತ್ತೆಹಚ್ಚಲು ಕಾರ್ಯಾಚರಣೆ ಕೈಗೊಂಡಿದ್ದರು.</p>.<p>ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಗುರುವಾರ ಪಟ್ಟಣದ ಕಾನುಕೊಪ್ಪದ ಬಳಿ 2 ಲಗೇಜ್ ಆಟೊದಲ್ಲಿ ಕಳವು ಮಾಡಿ ಸಾಗಿಸುತ್ತಿದ್ದ ಬ್ಯಾಟರಿಗಳ ಸಮೇತ 2 ಲಗೇಜ್ ಆಟೊ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಸಿಪಿಐ ಮರುಳಸಿದ್ದಪ್ಪ ಮಾರ್ಗದರ್ಶನದಲ್ಲಿ ಪಿಎಸ್ಐ ಟಿ.ಬಿ.ಪ್ರಶಾಂತ್ ಕುಮಾರ್ ನೇತೃತ್ವದಲ್ಲಿ ಎಎಸ್ಐ ಶಬ್ಬೀರ್ ಖಾನ್, ಸಿಬ್ಬಂದಿ ದಿನೇಶ್, ಸಂದೀಪ್, ಪ್ರಭಾಕರ್, ಮೋಹನ್, ಉಮೇಶ್, ಶಿವಾಜಿ, ಸಿದ್ದನಗೌಡ, ಮಂಜುನಾಥ್ ದೈವಜ್ಞ ಕಾರ್ಯಾಚರಣೆಯಲ್ಲಿ ತೊಡಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>