ಭದ್ರಾವತಿ: ಇಲ್ಲಿನ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಗುರುವಾರ ತಡರಾತ್ರಿ ಮನೆಯ ಮುಂದೆ ರೌಡಿಶೀಟರ್ ಕೊಲೆ ಮಾಡಲಾಗಿದೆ.
ಮುಜಾಹಿದ್ದಿನ್ ಅಲಿಯಾಸ್ ಮುಜ್ಜು (35) ಕೊಲೆಯಾದವನು. ಮುಜ್ಜು ಬೊಮ್ಮನಕಟ್ಟೆ ಬಡಾವಣೆಯಲ್ಲಿನ ತನ್ನ ಎರಡನೇ ಪತ್ನಿ ಮನೆಯಲ್ಲಿದ್ದಾಗ ತಡರಾತ್ರಿ ಕೆಲವರು ಮಾತನಾಡಲು ಹೊರಗೆ ಕರೆದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಮುಜ್ಜು ವಿರುದ್ಧ ಕೊಲೆ, ಕೊಲೆ ಯತ್ನ ಸೇರಿದಂತೆ ನಾಲ್ಕು ಪ್ರಕರಣಗಳು ಭದ್ರಾವತಿಯ ವಿವಿಧ ಠಾಣೆಗಳಲ್ಲಿ ದಾಖಲಾಗಿವೆ.
ಪೇಪರ್ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆರೋಪಿಗಳು,
ಕೊಲೆಗೆ ಕಾರಣ ಪತ್ತೆಯಾಗಬೇಕಿದೆ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.