<p>ಶಿವಮೊಗ್ಗ: ಆಹಾರ ಸುರಕ್ಷತಾ ಅಂಕಿತ ಅಧಿಕಾರಿಯ ಅಧಿಕೃತ ಜೀಪಿನಲ್ಲೇ ನಕಲಿ ಅಧಿಕಾರಿಯೊಬ್ಬ ಸೋಮವಾರ ನಗರದ ವಿವಿಧೆಡೆ ಹೋಟೆಲ್ಗಳ ಮೇಲೆ ದಾಳಿ ನಡೆಸಲು ಹೋಗಿ ಸಿಕ್ಕಿಹಾಕಿಕೊಂಡಿದ್ದಾನೆ. ಈ ಬಗ್ಗೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ವಿನೋಬನಗರದಲ್ಲಿ ನೂತನವಾಗಿ ಆರಂಭವಾದ ಬೆಣ್ಣೆದೋಸೆ ಹೋಟೆಲ್ ಮತ್ತು ಮಾರ್ಟ್ಗೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಯ ಜೀಪಿನಲ್ಲಿ ಬಂದ ಗಂಗಾಧರ್ ಎಂಬ ವ್ಯಕ್ತಿ ಪರಿಶೀಲನೆಯ ನೆಪದಲ್ಲಿ ಒಳ ಪ್ರವೇಶಿಸಿ ಕೆಲವು ಲೋಪಗಳನ್ನು ತೋರಿಸಿ ದಂಡದ ರೂಪದಲ್ಲಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ₹ 12 ಸಾವಿರ ನೀಡುವಂತೆ ತಾಕೀತು ಮಾಡಿದ್ದಾರೆ.</p>.<p>ಮರು ದಿನ ಕೊಡುವುದಾಗಿ ಅಂಗಡಿ ಮಾಲೀಕ ಹೇಳಿದ್ದು, ಅಧಿಕಾರಿ ಸೋಗಿನಲ್ಲಿದ್ದ ವ್ಯಕ್ತಿ ಕೊನೆಗೆ ₹ 2 ಸಾವಿರ ಪಡೆಯುತ್ತಿರುವುದು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ.</p>.<p>ಈ ಬಗ್ಗೆ ಅನುಮಾನಗೊಂಡ ಹೋಟೆಲ್ನವರು ವಿಚಾರಿಸಿದ್ದು ತಾನು ಆ ಇಲಾಖೆಯಲ್ಲಿ ಡಾಟಾ ಎಂಟ್ರಿ ಆಪರೇಟರ್ ಆಗಿದ್ದೇನೆ. ಸಾಹೇಬರ ಅನುಮತಿ ಮೇರೆಗೆ ಬಂದಿದ್ದೇನೆ ಎಂದು ಹೇಳಿದ್ದಾನೆ. ಆ ಬಗ್ಗೆ ಸ್ಪಷ್ಟನೆ<br />ಪಡೆಯಲು ಆಹಾರ ಸುರಕ್ಷತಾ ಅಂಕಿತ ಅಧಿಕಾರಿಗೆ ಕರೆ ಮಾಡಿದಾಗ ಪರಾರಿಯಾಗಿದ್ದಾನೆ.</p>.<p>ಈ ಬಗ್ಗೆ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಸರ್ಕಾರಿ ಜೀಪನ್ನು ವಶಪಡಿಸಿಕೊಂಡಿದ್ದು, ನಕಲಿ ಅಧಿಕಾರಿಯ ಬಂಧನಕ್ಕೆ ಮುಂದಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಆಹಾರ ಸುರಕ್ಷತಾ ಅಂಕಿತ ಅಧಿಕಾರಿಯ ಅಧಿಕೃತ ಜೀಪಿನಲ್ಲೇ ನಕಲಿ ಅಧಿಕಾರಿಯೊಬ್ಬ ಸೋಮವಾರ ನಗರದ ವಿವಿಧೆಡೆ ಹೋಟೆಲ್ಗಳ ಮೇಲೆ ದಾಳಿ ನಡೆಸಲು ಹೋಗಿ ಸಿಕ್ಕಿಹಾಕಿಕೊಂಡಿದ್ದಾನೆ. ಈ ಬಗ್ಗೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ವಿನೋಬನಗರದಲ್ಲಿ ನೂತನವಾಗಿ ಆರಂಭವಾದ ಬೆಣ್ಣೆದೋಸೆ ಹೋಟೆಲ್ ಮತ್ತು ಮಾರ್ಟ್ಗೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಯ ಜೀಪಿನಲ್ಲಿ ಬಂದ ಗಂಗಾಧರ್ ಎಂಬ ವ್ಯಕ್ತಿ ಪರಿಶೀಲನೆಯ ನೆಪದಲ್ಲಿ ಒಳ ಪ್ರವೇಶಿಸಿ ಕೆಲವು ಲೋಪಗಳನ್ನು ತೋರಿಸಿ ದಂಡದ ರೂಪದಲ್ಲಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ₹ 12 ಸಾವಿರ ನೀಡುವಂತೆ ತಾಕೀತು ಮಾಡಿದ್ದಾರೆ.</p>.<p>ಮರು ದಿನ ಕೊಡುವುದಾಗಿ ಅಂಗಡಿ ಮಾಲೀಕ ಹೇಳಿದ್ದು, ಅಧಿಕಾರಿ ಸೋಗಿನಲ್ಲಿದ್ದ ವ್ಯಕ್ತಿ ಕೊನೆಗೆ ₹ 2 ಸಾವಿರ ಪಡೆಯುತ್ತಿರುವುದು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ.</p>.<p>ಈ ಬಗ್ಗೆ ಅನುಮಾನಗೊಂಡ ಹೋಟೆಲ್ನವರು ವಿಚಾರಿಸಿದ್ದು ತಾನು ಆ ಇಲಾಖೆಯಲ್ಲಿ ಡಾಟಾ ಎಂಟ್ರಿ ಆಪರೇಟರ್ ಆಗಿದ್ದೇನೆ. ಸಾಹೇಬರ ಅನುಮತಿ ಮೇರೆಗೆ ಬಂದಿದ್ದೇನೆ ಎಂದು ಹೇಳಿದ್ದಾನೆ. ಆ ಬಗ್ಗೆ ಸ್ಪಷ್ಟನೆ<br />ಪಡೆಯಲು ಆಹಾರ ಸುರಕ್ಷತಾ ಅಂಕಿತ ಅಧಿಕಾರಿಗೆ ಕರೆ ಮಾಡಿದಾಗ ಪರಾರಿಯಾಗಿದ್ದಾನೆ.</p>.<p>ಈ ಬಗ್ಗೆ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಸರ್ಕಾರಿ ಜೀಪನ್ನು ವಶಪಡಿಸಿಕೊಂಡಿದ್ದು, ನಕಲಿ ಅಧಿಕಾರಿಯ ಬಂಧನಕ್ಕೆ ಮುಂದಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>