<p><strong>ಶಿವಮೊಗ್ಗ:</strong> ‘ಭದ್ರಾವತಿ ತಾಲ್ಲೂಕು ಗುಡುಮಘಟ್ಟ ಗ್ರಾಮದ ಮಂಜಪ್ಪ (40) ಅವರು ಕ್ರಿಮಿನಾಶಕ ಸೇವಿಸಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹2 ಲಕ್ಷ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.</p>.<p>ಗುಡುಮಘಟ್ಟ ನಿವಾಸಿಗಳಾದ ಚಿಕ್ಕಮಗಳೂರು ರಂಗಪ್ಪ, ಹನುಮಂತಪ್ಪ, ಕಲೀ ರಂಗಪ್ಪ ಎಂಬುವವರಿಗೆ ಶಿಕ್ಷೆಯಾಗಿದೆ.</p>.<p>ಆಸ್ತಿ ವಿಚಾರವಾಗಿ ನೀಡಲಾಗುತ್ತಿದ್ದ ಕಿರುಕುಳದಿಂದ ನೊಂದು ಮಂಜಪ್ಪ ಅವರು 2018ರ ಜನವರಿ 31ರಂದು ಕ್ರಿಮಿನಾಶಕ ಸೇವಿಸಿ ಮೃತಪಟ್ಟಿದ್ದರು. ಈ ಸಂಬಂಧ ಮೃತರ ಪತ್ನಿ ನೀಡಿದ್ದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಹೊಳೆಹೊನ್ನೂರು ಠಾಣೆ ಪೊಲೀಸರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ವಿಚಾರಣೆ ನಡೆಸಿದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ (ಪೀಠಾಸೀನ ಭದ್ರಾವತಿ) ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ ಅವರು ಅಪರಾಧಿಗಳಿಗೆ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಸರ್ಕಾರಿ ವಕೀಲರಾದ ಪಿ. ರತ್ನಮ್ಮ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ಭದ್ರಾವತಿ ತಾಲ್ಲೂಕು ಗುಡುಮಘಟ್ಟ ಗ್ರಾಮದ ಮಂಜಪ್ಪ (40) ಅವರು ಕ್ರಿಮಿನಾಶಕ ಸೇವಿಸಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹2 ಲಕ್ಷ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.</p>.<p>ಗುಡುಮಘಟ್ಟ ನಿವಾಸಿಗಳಾದ ಚಿಕ್ಕಮಗಳೂರು ರಂಗಪ್ಪ, ಹನುಮಂತಪ್ಪ, ಕಲೀ ರಂಗಪ್ಪ ಎಂಬುವವರಿಗೆ ಶಿಕ್ಷೆಯಾಗಿದೆ.</p>.<p>ಆಸ್ತಿ ವಿಚಾರವಾಗಿ ನೀಡಲಾಗುತ್ತಿದ್ದ ಕಿರುಕುಳದಿಂದ ನೊಂದು ಮಂಜಪ್ಪ ಅವರು 2018ರ ಜನವರಿ 31ರಂದು ಕ್ರಿಮಿನಾಶಕ ಸೇವಿಸಿ ಮೃತಪಟ್ಟಿದ್ದರು. ಈ ಸಂಬಂಧ ಮೃತರ ಪತ್ನಿ ನೀಡಿದ್ದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಹೊಳೆಹೊನ್ನೂರು ಠಾಣೆ ಪೊಲೀಸರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ವಿಚಾರಣೆ ನಡೆಸಿದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ (ಪೀಠಾಸೀನ ಭದ್ರಾವತಿ) ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ ಅವರು ಅಪರಾಧಿಗಳಿಗೆ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಸರ್ಕಾರಿ ವಕೀಲರಾದ ಪಿ. ರತ್ನಮ್ಮ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>