<p><strong>ಸಾಗರ:</strong> ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯುವುದರಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸುತ್ತದೆ ಎಂದು ಲೆಕ್ಕ ಪರಿಶೋಧಕ ಬಿ.ವಿ.ರವೀಂದ್ರನಾಥ್ ಹೇಳಿದರು.</p>.<p>ಇಲ್ಲಿನ ನಗರಸಭೆ ರಂಗ ಮಂದಿರದಲ್ಲಿ ಗೀತಾಂಜಲಿ ಕಲಾ ಕೇಂದ್ರ ಶುಕ್ರವಾರ ಹಮ್ಮಿಕೊಂಡಿದ್ದ ನೃತ್ಯ ಸೌರಭ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ನೃತ್ಯ, ಸಂಗೀತ, ಸಾಹಿತ್ಯ, ರಂಗಭೂಮಿ ಸೇರಿದಂತೆ ಹಲವು ಕಲಾ ಪ್ರಕಾರಗಳಲ್ಲಿ ತೊಡಗಿಸಿಕೊಂಡಿರುವ ಅನೇಕ ಕಲಾವಿದರು ಈ ಭಾಗದಲ್ಲಿದ್ದಾರೆ. ಅವರುಗಳ ನಡುವೆ ಸಾಮರಸ್ಯದ ಭಾವ ಇರುವುದು ಈ ಪ್ರದೇಶದ ವಿಶೇಷತೆಯಾಗಿದೆ ಎಂದರು.</p>.<p>ಯುವ ಸಂಗೀತ ಕಲಾವಿದ ಸಂವತ್ಸರ ಅವರಿಗೆ ‘ಯುವ ಸೌರಭ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹೈದರಾಬಾದ್ನ ಶ್ರೀನಿಧಿ ವಿಶ್ವವಿದ್ಯಾಲಯದ ನಿರ್ದೇಶಕ ಬಾಲಚಂದ್ರ ಬಿ.ರಾವ್, ರಂಗ ಕಲಾವಿದ ರವಿಶಂಕರ್ ಕೋಳಿವಾಡ, ವಿಜಯಲಕ್ಷ್ಮಿ ಹೆಗಡೆ ಇದ್ದರು.</p>.<p>ಗೀತಾಂಜಲಿ ಕಲಾ ಕೇಂದ್ರದ ಅಧ್ಯಕ್ಷ ಶ್ರೀಪಾದ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯುವುದರಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸುತ್ತದೆ ಎಂದು ಲೆಕ್ಕ ಪರಿಶೋಧಕ ಬಿ.ವಿ.ರವೀಂದ್ರನಾಥ್ ಹೇಳಿದರು.</p>.<p>ಇಲ್ಲಿನ ನಗರಸಭೆ ರಂಗ ಮಂದಿರದಲ್ಲಿ ಗೀತಾಂಜಲಿ ಕಲಾ ಕೇಂದ್ರ ಶುಕ್ರವಾರ ಹಮ್ಮಿಕೊಂಡಿದ್ದ ನೃತ್ಯ ಸೌರಭ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ನೃತ್ಯ, ಸಂಗೀತ, ಸಾಹಿತ್ಯ, ರಂಗಭೂಮಿ ಸೇರಿದಂತೆ ಹಲವು ಕಲಾ ಪ್ರಕಾರಗಳಲ್ಲಿ ತೊಡಗಿಸಿಕೊಂಡಿರುವ ಅನೇಕ ಕಲಾವಿದರು ಈ ಭಾಗದಲ್ಲಿದ್ದಾರೆ. ಅವರುಗಳ ನಡುವೆ ಸಾಮರಸ್ಯದ ಭಾವ ಇರುವುದು ಈ ಪ್ರದೇಶದ ವಿಶೇಷತೆಯಾಗಿದೆ ಎಂದರು.</p>.<p>ಯುವ ಸಂಗೀತ ಕಲಾವಿದ ಸಂವತ್ಸರ ಅವರಿಗೆ ‘ಯುವ ಸೌರಭ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹೈದರಾಬಾದ್ನ ಶ್ರೀನಿಧಿ ವಿಶ್ವವಿದ್ಯಾಲಯದ ನಿರ್ದೇಶಕ ಬಾಲಚಂದ್ರ ಬಿ.ರಾವ್, ರಂಗ ಕಲಾವಿದ ರವಿಶಂಕರ್ ಕೋಳಿವಾಡ, ವಿಜಯಲಕ್ಷ್ಮಿ ಹೆಗಡೆ ಇದ್ದರು.</p>.<p>ಗೀತಾಂಜಲಿ ಕಲಾ ಕೇಂದ್ರದ ಅಧ್ಯಕ್ಷ ಶ್ರೀಪಾದ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>