<p><strong>ಶಿವಮೊಗ್ಗ</strong>: ಇಡೀ ದೇಶದಲ್ಲಿಯೇ ಪ್ರಾಕೃತಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಅತ್ಯಂತ ಶ್ರೀಮಂತ ಪರಂಪರೆಯನ್ನು ಮಾತ್ರ ಶಿವಮೊಗ್ಗ ಜಿಲ್ಲೆ ಹೊಂದಿಲ್ಲ. ಇಲ್ಲಿ ಅಭಿವೃದ್ಧಿಗೂ ವಿಫುಲ ಅವಕಾಶವಿದೆ ಎಂದು ಉದ್ಯಮಿ ಕಿಮ್ಮನೆ ಜಯರಾಮ್ ಹೇಳಿದರು.</p>.<p>ಇಲ್ಲಿನ ರಾಮಣ್ಣ ಶ್ರೇಷ್ಠಿ ಪಾರ್ಕ್ನಲ್ಲಿ ಕರ್ಣಾಟಕ ಬ್ಯಾಂಕಿನ 963ನೇ ಶಾಖೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕರ್ಣಾಟಕ ಬ್ಯಾಂಕ್ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಸಾಧಿಸುತ್ತಿದೆ. ಇದಕ್ಕೆ ಬ್ಯಾಂಕಿನ ಸಿಬ್ಬಂದಿ ವರ್ಗ, ಅಧಿಕಾರಿ ವರ್ಗ ಮತ್ತು ಆಡಳಿತ ಮಂಡಳಿಯೇ ನೇರ ಕಾರಣ. ಅವರು ಗ್ರಾಹಕರ ಜೊತೆ ಅತ್ಯಂತ ನಿಕಟವಾದ ಸಂಪರ್ಕ, ಸಂವಹನ ಹೊಂದಿದೆ ಎಂದು ಶ್ಲಾಘಿಸಿದರು.</p>.<p>ಹಿರಿಯ ಗ್ರಾಹಕ ಡಾ.ಪಿ. ನಾರಾಯಣ್ ಮಾತನಾಡಿ, ಕರ್ಣಾಟಕ ಬ್ಯಾಂಕ್ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಬ್ಯಾಂಕ್ ವ್ಯವಸ್ಥೆಯಲ್ಲಿನ ಮಾನವೀಯ ಸಂಬಂಧವೇ ಇದಕ್ಕೆ ಮುಖ್ಯ ಕಾರಣ ಎಂದು ಹೇಳಿದರು.</p>.<p>ಬ್ಯಾಂಕಿನ ಜನರಲ್ ಮ್ಯಾನೇಜರ್ ಎಸ್.ರವಿಚಂದ್ರನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ₹1.80 ಲಕ್ಷ ಕೋಟಿ ವಹಿವಾಟು ದಾಟಿ ಮುಂದಡಿ ಇಡುತ್ತಿದೆ. ಇದು ಶಿವಮೊಗ್ಗ ವಿಭಾಗದಲ್ಲಿ 85ನೇ ಶಾಖೆಯಾಗಿದೆ ಎಂದರು.</p>.<p>ಶಿವಮೊಗ್ಗ ವಿಭಾಗೀಯ ಎಜಿಎಂ ಎಚ್.ಎ. ನಾಗರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಲಸ್ಟರ್ ಹೆಡ್ ಜಿ.ಎಸ್. ಗಣೇಶ್ ಕುಮಾರ್ ನಿರೂಪಿಸಿದರು. ಶಾಖಾ ವ್ಯವಸ್ಥಾಪಕ ಎಸ್. ನಾಗೇಂದ್ರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಇಡೀ ದೇಶದಲ್ಲಿಯೇ ಪ್ರಾಕೃತಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಅತ್ಯಂತ ಶ್ರೀಮಂತ ಪರಂಪರೆಯನ್ನು ಮಾತ್ರ ಶಿವಮೊಗ್ಗ ಜಿಲ್ಲೆ ಹೊಂದಿಲ್ಲ. ಇಲ್ಲಿ ಅಭಿವೃದ್ಧಿಗೂ ವಿಫುಲ ಅವಕಾಶವಿದೆ ಎಂದು ಉದ್ಯಮಿ ಕಿಮ್ಮನೆ ಜಯರಾಮ್ ಹೇಳಿದರು.</p>.<p>ಇಲ್ಲಿನ ರಾಮಣ್ಣ ಶ್ರೇಷ್ಠಿ ಪಾರ್ಕ್ನಲ್ಲಿ ಕರ್ಣಾಟಕ ಬ್ಯಾಂಕಿನ 963ನೇ ಶಾಖೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕರ್ಣಾಟಕ ಬ್ಯಾಂಕ್ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಸಾಧಿಸುತ್ತಿದೆ. ಇದಕ್ಕೆ ಬ್ಯಾಂಕಿನ ಸಿಬ್ಬಂದಿ ವರ್ಗ, ಅಧಿಕಾರಿ ವರ್ಗ ಮತ್ತು ಆಡಳಿತ ಮಂಡಳಿಯೇ ನೇರ ಕಾರಣ. ಅವರು ಗ್ರಾಹಕರ ಜೊತೆ ಅತ್ಯಂತ ನಿಕಟವಾದ ಸಂಪರ್ಕ, ಸಂವಹನ ಹೊಂದಿದೆ ಎಂದು ಶ್ಲಾಘಿಸಿದರು.</p>.<p>ಹಿರಿಯ ಗ್ರಾಹಕ ಡಾ.ಪಿ. ನಾರಾಯಣ್ ಮಾತನಾಡಿ, ಕರ್ಣಾಟಕ ಬ್ಯಾಂಕ್ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಬ್ಯಾಂಕ್ ವ್ಯವಸ್ಥೆಯಲ್ಲಿನ ಮಾನವೀಯ ಸಂಬಂಧವೇ ಇದಕ್ಕೆ ಮುಖ್ಯ ಕಾರಣ ಎಂದು ಹೇಳಿದರು.</p>.<p>ಬ್ಯಾಂಕಿನ ಜನರಲ್ ಮ್ಯಾನೇಜರ್ ಎಸ್.ರವಿಚಂದ್ರನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ₹1.80 ಲಕ್ಷ ಕೋಟಿ ವಹಿವಾಟು ದಾಟಿ ಮುಂದಡಿ ಇಡುತ್ತಿದೆ. ಇದು ಶಿವಮೊಗ್ಗ ವಿಭಾಗದಲ್ಲಿ 85ನೇ ಶಾಖೆಯಾಗಿದೆ ಎಂದರು.</p>.<p>ಶಿವಮೊಗ್ಗ ವಿಭಾಗೀಯ ಎಜಿಎಂ ಎಚ್.ಎ. ನಾಗರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಲಸ್ಟರ್ ಹೆಡ್ ಜಿ.ಎಸ್. ಗಣೇಶ್ ಕುಮಾರ್ ನಿರೂಪಿಸಿದರು. ಶಾಖಾ ವ್ಯವಸ್ಥಾಪಕ ಎಸ್. ನಾಗೇಂದ್ರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>