<p><strong>ಸಾಗರ: </strong>ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದ್ದು ಮೊಬೈಲ್ ಬಳಕೆದಾರರು ಎಚ್ಚರ ವಹಿಸಬೇಕು ಎಂದು ಶಿವಮೊಗ್ಗದ ಸೈಬರ್ ಅಪರಾಧ ಠಾಣೆ ಎಎಸ್ಐ ಪ್ರಕಾಶ್ ಜೆ.ಕೆ.ಹೇಳಿದರು. </p>.<p>ಸಮೀಪದ ಉಳ್ಳೂರು ಗ್ರಾಮದ ಸಿಗಂದೂರೇಶ್ವರಿ ಶಿಕ್ಷಣ ಸಂಸ್ಥೆಯಲ್ಲಿ ಸಾಗರ ಗಂಗೋತ್ರಿ ಕಾನೂನು ಮಹಾ ವಿದ್ಯಾಲಯ, ಸೈಬರ್ ಅಪರಾಧ ಪೊಲೀಸ್ ಠಾಣೆಯ ಆಶ್ರಯದಲ್ಲಿ ಗುರುವಾರ ನಡೆದ ಸೈಬರ್ ಅಪರಾಧ ತಡೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಅಪರಿಚಿತರು ಮೊಬೈಲ್ ಫೋನ್ಗೆ ಕರೆ ಮಾಡಿ ನಿಮ್ಮ ಬ್ಯಾಂಕ್ ಖಾತೆಯ ವಿವರ ಕೇಳಿದರೆ ಯಾವುದೇ ಕಾರಣಕ್ಕೂ ಅದನ್ನು ನೀಡಬಾರದು. 24 ಗಂಟೆಯೊಳಗೆ ವಿವರ ನೀಡದಿದ್ದರೆ ಬ್ಯಾಂಕ್ ಖಾತೆ ರದ್ದಾಗುವುದು ಎಂದು ಬೆದರಿಕೆ ಹಾಕುವ ಸಂದೇಶಗಳನ್ನು ನಿರ್ಲಕ್ಷಿಸಬೇಕು’ ಎಂದರು.</p>.<p>ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಒಟಿಪಿ ಕಳಿಸುವಂತೆ ಕೇಳಿದರೆ ಸಂಬಂಧಪಟ್ಟ ಬ್ಯಾಂಕ್ ಶಾಖೆಗೆ ಫೋನ್ ಮಾಡಿ, ಖಾತರಿ ಪಡಿಸಿಕೊಳ್ಳಬೇಕು. ಈ ರೀತಿ ಒಟಿಪಿ, ಪಾಸ್ವರ್ಡ್ ಕೇಳಿ ಬ್ಯಾಂಕ್ ಖಾತೆಯಿಂದ ಹಣ ಎಗರಿಸುವ ವಂಚಕರ ಜಾಲ ಇದ್ದು, ಈ ಬಗ್ಗೆ ಎಚ್ಚರ ವಹಿಸಬೇಕು ಎಂದು ಕಿವಿಮಾತು ಹೇಳಿದರು.</p>.<p>ವಿವಿಧ ಅಂತರ್ಜಾಲ ಅಪರಾಧಗಳ ಕುರಿತು ಮಾಹಿತಿ ನೀಡಿದ ಸೈಬರ್ ಪೊಲೀಸ್ ಠಾಣೆ ಸಿಬ್ಬಂದಿ ಅರವಿಂದ್, ಯಾವುದೇ ವಂಚನೆಗೆ ಒಳಗಾದಲ್ಲಿ ಹಿಂಜರಿಕೆ ಮಾಡದೆ ತಕ್ಷಣ ಪೊಲೀಸರಿಗೆ ದೂರು ನೀಡಬೇಕು ಎಂದರು.</p>.<p>ದಿನಪತ್ರಿಕೆಗಳ ಓದಿನ ಮಹತ್ವದ ಕುರಿತು ‘ಪ್ರಜಾವಾಣಿ’ಯ ಹುಬ್ಬಳ್ಳಿಯ ಪ್ರಸರಣ ವಿಭಾಗದ ಪ್ರಾದೇಶಿಕ ವ್ಯವಸ್ಥಾಪಕ ಪ್ರಕಾಶ್ ನಾಯ್ಕ್ ಮಾತನಾಡಿದರು. </p>.<p>ಸಿಗಂದೂರೇಶ್ವರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೃಷ್ಣಮೂರ್ತಿ ಎನ್. ಬಿಳಗಲ್ಲೂರು ಅಧ್ಯಕ್ಷತೆ ವಹಿಸಿದ್ದರು. ಪ್ರಜಾವಾಣಿಯ ಪ್ರಸರಣ ವಿಭಾಗದ ನಂದಗೋಪಾಲ್, ನಾಗರಾಜ್ ಕೆ. ನಟೇಶ್ ಬಾಯರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದ್ದು ಮೊಬೈಲ್ ಬಳಕೆದಾರರು ಎಚ್ಚರ ವಹಿಸಬೇಕು ಎಂದು ಶಿವಮೊಗ್ಗದ ಸೈಬರ್ ಅಪರಾಧ ಠಾಣೆ ಎಎಸ್ಐ ಪ್ರಕಾಶ್ ಜೆ.ಕೆ.ಹೇಳಿದರು. </p>.<p>ಸಮೀಪದ ಉಳ್ಳೂರು ಗ್ರಾಮದ ಸಿಗಂದೂರೇಶ್ವರಿ ಶಿಕ್ಷಣ ಸಂಸ್ಥೆಯಲ್ಲಿ ಸಾಗರ ಗಂಗೋತ್ರಿ ಕಾನೂನು ಮಹಾ ವಿದ್ಯಾಲಯ, ಸೈಬರ್ ಅಪರಾಧ ಪೊಲೀಸ್ ಠಾಣೆಯ ಆಶ್ರಯದಲ್ಲಿ ಗುರುವಾರ ನಡೆದ ಸೈಬರ್ ಅಪರಾಧ ತಡೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಅಪರಿಚಿತರು ಮೊಬೈಲ್ ಫೋನ್ಗೆ ಕರೆ ಮಾಡಿ ನಿಮ್ಮ ಬ್ಯಾಂಕ್ ಖಾತೆಯ ವಿವರ ಕೇಳಿದರೆ ಯಾವುದೇ ಕಾರಣಕ್ಕೂ ಅದನ್ನು ನೀಡಬಾರದು. 24 ಗಂಟೆಯೊಳಗೆ ವಿವರ ನೀಡದಿದ್ದರೆ ಬ್ಯಾಂಕ್ ಖಾತೆ ರದ್ದಾಗುವುದು ಎಂದು ಬೆದರಿಕೆ ಹಾಕುವ ಸಂದೇಶಗಳನ್ನು ನಿರ್ಲಕ್ಷಿಸಬೇಕು’ ಎಂದರು.</p>.<p>ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಒಟಿಪಿ ಕಳಿಸುವಂತೆ ಕೇಳಿದರೆ ಸಂಬಂಧಪಟ್ಟ ಬ್ಯಾಂಕ್ ಶಾಖೆಗೆ ಫೋನ್ ಮಾಡಿ, ಖಾತರಿ ಪಡಿಸಿಕೊಳ್ಳಬೇಕು. ಈ ರೀತಿ ಒಟಿಪಿ, ಪಾಸ್ವರ್ಡ್ ಕೇಳಿ ಬ್ಯಾಂಕ್ ಖಾತೆಯಿಂದ ಹಣ ಎಗರಿಸುವ ವಂಚಕರ ಜಾಲ ಇದ್ದು, ಈ ಬಗ್ಗೆ ಎಚ್ಚರ ವಹಿಸಬೇಕು ಎಂದು ಕಿವಿಮಾತು ಹೇಳಿದರು.</p>.<p>ವಿವಿಧ ಅಂತರ್ಜಾಲ ಅಪರಾಧಗಳ ಕುರಿತು ಮಾಹಿತಿ ನೀಡಿದ ಸೈಬರ್ ಪೊಲೀಸ್ ಠಾಣೆ ಸಿಬ್ಬಂದಿ ಅರವಿಂದ್, ಯಾವುದೇ ವಂಚನೆಗೆ ಒಳಗಾದಲ್ಲಿ ಹಿಂಜರಿಕೆ ಮಾಡದೆ ತಕ್ಷಣ ಪೊಲೀಸರಿಗೆ ದೂರು ನೀಡಬೇಕು ಎಂದರು.</p>.<p>ದಿನಪತ್ರಿಕೆಗಳ ಓದಿನ ಮಹತ್ವದ ಕುರಿತು ‘ಪ್ರಜಾವಾಣಿ’ಯ ಹುಬ್ಬಳ್ಳಿಯ ಪ್ರಸರಣ ವಿಭಾಗದ ಪ್ರಾದೇಶಿಕ ವ್ಯವಸ್ಥಾಪಕ ಪ್ರಕಾಶ್ ನಾಯ್ಕ್ ಮಾತನಾಡಿದರು. </p>.<p>ಸಿಗಂದೂರೇಶ್ವರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೃಷ್ಣಮೂರ್ತಿ ಎನ್. ಬಿಳಗಲ್ಲೂರು ಅಧ್ಯಕ್ಷತೆ ವಹಿಸಿದ್ದರು. ಪ್ರಜಾವಾಣಿಯ ಪ್ರಸರಣ ವಿಭಾಗದ ನಂದಗೋಪಾಲ್, ನಾಗರಾಜ್ ಕೆ. ನಟೇಶ್ ಬಾಯರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>