<p><strong>ಭದ್ರಾವತಿ</strong>: ಧಾರವಾಡ ಜಿಲ್ಲೆ ಇನಾಂ ವೀರಾಪುರದಲ್ಲಿ ಮಾನ್ಯ ಎಂಬ ಹೆಣ್ಣು ಮಗಳು ದಲಿತ ಹುಡುಗನನ್ನು ಮದುವೆ ಆದಳು ಎಂಬ ಕಾರಣಕ್ಕಾಗಿ ತಂದೆಯೇ ಗರ್ಭಿಣಿ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವುದನ್ನು ನಗರದ ಅಂಬೇಡ್ಕರ್ ವೈಚಾರಿಕ ವೇದಿಕೆ ತೀವ್ರವಾಗಿ ಖಂಡಿಸಿದೆ.</p>.<p>ಈ ಸಂಬಂಧ ವೇದಿಕೆ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ಲಿಂಗಾಯತ ಜಾತಿಗೆ ಸೇರಿದ ಯುವತಿ ದಲಿತ ಜಾತಿಯ ಯುವಕನನ್ನು ವಿವಾಹವಾಗಿದ್ದು, 7 ತಿಂಗಳ ಗರ್ಭಿಣಿಯನ್ನು ಹೆತ್ತ ತಂದೆಯೇ ಕೊಡಲಿಯಿಂದ ಕೊಚ್ಚಿ ಕೊಲೆಮಾಡಿರುವುದು ನೋವಿನ ವಿಚಾರವಾಗಿದೆ. ಇದೆ ರೀತಿ ವಿಜಯಪುರದಲ್ಲಿ ದೇವಸ್ಥಾನ ಕಟ್ಟೆಯ ಮೇಲೆ ಮೇಲ್ಜಾತಿಯವರ ಸಮನಾಗಿ ಒಬ್ಬ ದಲಿತ ಯುವಕ ಕುಳಿತ ಎಂದು ಆತನನ್ನು ಕೊಲೆ ಮಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸುವ ಸಂಗತಿಯಾಗಿದ್ದು, ಈ ಕೃತ್ಯವನ್ನು ಸಹ ವೇದಿಕೆ ಖಂಡಿಸಿದೆ ಎಂದು ತಿಳಿಸಲಾಗಿದೆ.</p>.<p>ಸಮಾಜದಲ್ಲಿ ಜಾತಿ ತಾರತಮ್ಮ ಇನ್ನೂ ಗಾಢವಾಗಿರುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದು ಕಿಡಿಕಾರಲಾಗಿದೆ.</p>.<p>‘ಹಿಂದೂ ನಾವೆಲ್ಲ ಒಂದು’ ಎನ್ನುವ ಹಿಂದತ್ವವಾದಿಗಳು ಈ ಘಟನೆಗೂ ತಮಗೂ ಸಂಬಂಧವಿಲ್ಲ ಎನ್ನುವಂತಿದ್ದಾರೆ. ಆದರೆ ಬುದ್ಧ, ಬಸವ, ಅಂಬೇಡ್ಕರ್ ವಾದಿಗಳು ಘಟನೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹೋರಾಟ ಮತ್ತಷ್ಟು ಚುರುಕುಗೊಳ್ಳಬೇಕು. ಮರ್ಯಾದಾ ಹತ್ಯೆ ನಡೆಸಿದ ಅರೋಪಿಗಳಿಗೆ ಶಿಕ್ಷೆ ನೀಡಬೇಕೆಂದು ವೇದಿಕೆಯ ಸಂಚಾಲಕರುಗಳಾದ ಪಿ. ಮೂರ್ತಿ ಮತ್ತು ಜಯರಾಮ್ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ</strong>: ಧಾರವಾಡ ಜಿಲ್ಲೆ ಇನಾಂ ವೀರಾಪುರದಲ್ಲಿ ಮಾನ್ಯ ಎಂಬ ಹೆಣ್ಣು ಮಗಳು ದಲಿತ ಹುಡುಗನನ್ನು ಮದುವೆ ಆದಳು ಎಂಬ ಕಾರಣಕ್ಕಾಗಿ ತಂದೆಯೇ ಗರ್ಭಿಣಿ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವುದನ್ನು ನಗರದ ಅಂಬೇಡ್ಕರ್ ವೈಚಾರಿಕ ವೇದಿಕೆ ತೀವ್ರವಾಗಿ ಖಂಡಿಸಿದೆ.</p>.<p>ಈ ಸಂಬಂಧ ವೇದಿಕೆ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ಲಿಂಗಾಯತ ಜಾತಿಗೆ ಸೇರಿದ ಯುವತಿ ದಲಿತ ಜಾತಿಯ ಯುವಕನನ್ನು ವಿವಾಹವಾಗಿದ್ದು, 7 ತಿಂಗಳ ಗರ್ಭಿಣಿಯನ್ನು ಹೆತ್ತ ತಂದೆಯೇ ಕೊಡಲಿಯಿಂದ ಕೊಚ್ಚಿ ಕೊಲೆಮಾಡಿರುವುದು ನೋವಿನ ವಿಚಾರವಾಗಿದೆ. ಇದೆ ರೀತಿ ವಿಜಯಪುರದಲ್ಲಿ ದೇವಸ್ಥಾನ ಕಟ್ಟೆಯ ಮೇಲೆ ಮೇಲ್ಜಾತಿಯವರ ಸಮನಾಗಿ ಒಬ್ಬ ದಲಿತ ಯುವಕ ಕುಳಿತ ಎಂದು ಆತನನ್ನು ಕೊಲೆ ಮಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸುವ ಸಂಗತಿಯಾಗಿದ್ದು, ಈ ಕೃತ್ಯವನ್ನು ಸಹ ವೇದಿಕೆ ಖಂಡಿಸಿದೆ ಎಂದು ತಿಳಿಸಲಾಗಿದೆ.</p>.<p>ಸಮಾಜದಲ್ಲಿ ಜಾತಿ ತಾರತಮ್ಮ ಇನ್ನೂ ಗಾಢವಾಗಿರುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದು ಕಿಡಿಕಾರಲಾಗಿದೆ.</p>.<p>‘ಹಿಂದೂ ನಾವೆಲ್ಲ ಒಂದು’ ಎನ್ನುವ ಹಿಂದತ್ವವಾದಿಗಳು ಈ ಘಟನೆಗೂ ತಮಗೂ ಸಂಬಂಧವಿಲ್ಲ ಎನ್ನುವಂತಿದ್ದಾರೆ. ಆದರೆ ಬುದ್ಧ, ಬಸವ, ಅಂಬೇಡ್ಕರ್ ವಾದಿಗಳು ಘಟನೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹೋರಾಟ ಮತ್ತಷ್ಟು ಚುರುಕುಗೊಳ್ಳಬೇಕು. ಮರ್ಯಾದಾ ಹತ್ಯೆ ನಡೆಸಿದ ಅರೋಪಿಗಳಿಗೆ ಶಿಕ್ಷೆ ನೀಡಬೇಕೆಂದು ವೇದಿಕೆಯ ಸಂಚಾಲಕರುಗಳಾದ ಪಿ. ಮೂರ್ತಿ ಮತ್ತು ಜಯರಾಮ್ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>