ತುಮರಿ:ಸಮೀಪದ ಕರೂರು ಹೋಬಳಿಯ ಎಸ್.ಎಸ್. ಭೋಗ್ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ಮಧ್ಯಾಹ್ನ ಸುರಿದ ಭಾರಿ ಮಳೆಯಿಂದ ಸಿಡಿಲು ಬಡಿದು ಇಲ್ಲಿನ ಗ್ರಾಮ ಪಂಚಾಯಿತಿ ಕಚೇರಿಯ ಪೀಠೋಪಕರಣ, ಕಂಪ್ಯೂಟರ್ ಹಾಗೂ ಇಂಟರ್ನೆಟ್ ಕೇಬಲ್ಗಳು ಸುಟ್ಟಿವೆ.
ಅವಘಡದ ಸಂದರ್ಭದಲ್ಲಿ ಪಿಡಿಒ ಸೇರಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಮಧ್ಯಾಹ್ನ ಊಟಕ್ಕೆ ತೆರಳಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪೀಠೋಪಕರಣ ಹಾನಿಯಿಂದ ಲಕ್ಷಾಂತರ ನಷ್ಟ ಸಂಭವಿಸಿದೆ. ಸ್ಥಳಕ್ಕೆಪಂಚಾಯಿತಿ ಅಧ್ಯಕ್ಷ ಮಂಜುನಾಥ, ಸದಸ್ಯರು ಭೇಟಿ ನೀಡಿದರು.