ತ್ಯಾಗರ್ತಿ: ಭಾನುವಾರ ಸುರಿದ ಭಾರಿ ಮಳೆಗೆ ಸಮೀಪದ ನೀಚಡಿ ಗ್ರಾಮದ ಕೆ.ಕೆ.ನಾಗರಾಜ್ ಅವರ ಮನೆಗೆ ಸಿಡಿಲು ಬಡಿದಿದ್ದು, ಅಪಾರ ನಷ್ಟ ಸಂಭವಿಸಿದೆ.
ಸಿಡಿಲು ಬಡಿತದ ರಭಸಕ್ಕೆ ಮನೆಯ ಹೆಂಚುಗಳು ಮುರಿದುಬಿದ್ದಿದ್ದು, ಗೋಡೆ ಬಿರುಕು ಬಿಟ್ಟಿದೆ. ವೈರಿಂಗ್ಗೆ ಹಾನಿಯಾಗಿದೆ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಿತೀಶ್, ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.