<p><strong>ಶಿವಮೊಗ್ಗ:</strong> ‘ಮೈಸೂರು ಮಾದರಿಯಲ್ಲಿ 9 ದಿನಗಳ ಕಾಲ ನಡೆಯುವ ಶಿವಮೊಗ್ಗ ದಸರಾದಲ್ಲಿ ಕಳೆದ ಬಾರಿ ಆದ ಸಮಸ್ಯೆಗಳು ಪುನರಾವರ್ತನೆ ಆಗದಂತೆ ಎಚ್ಚರ ವಹಿಸಬೇಕು’ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಸೂಚಿಸಿದರು.</p>.<p>ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ದಸರಾ ಪೂರ್ವಭಾವಿ ಸಭೆಯ’ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಕಳೆದ ಬಾರಿ ಪೆಂಡಾಲ್ ಹಾಕುವುದು ಸೇರಿ ಕೆಲವು ಕಡೆ ಗೊಂದಲ ಎದುರಾಗಿತ್ತು. ಆದ್ದರಿಂದ, ಜವಾಬ್ದಾರಿ ಹೊತ್ತವರು ಅದರೆಡೆಗೆ ಗಮನಹರಿಸಬೇಕು. ಉದ್ಘಾಟಕರ ಹೆಸರು, ಅತಿಥಿಗಳು, ರಂಗ ಕಲಾವಿದರು ಸೇರಿ ಅಗತ್ಯವಿರುವ ಎಲ್ಲ ಪೂರ್ವ ಸಿದ್ಧತೆಗಳನ್ನು ಮುಂಚಿತವಾಗಿ ಮಾಡಿಕೊಳ್ಳಬೇಕು’ ಎಂದರು.</p>.<p>‘ಇದರಿಂದ ಎಲ್ಲರಿಗೂ ಸಕಾಲದಲ್ಲಿ ಆಹ್ವಾನ ಪತ್ರಿಕೆ ನೀಡಲು ಸಹಕಾರಿಯಾಗಲಿದೆ. ಒಂದು ವೇಳೆ, ರಚಿಸಿದ ಸಮಿತಿಗಳೇ ಕಾರ್ಯ ನಿರ್ವಹಣೆಯಲ್ಲಿ ವಿಳಂಬ ಧೋರಣೆ ತೋರಿದರೆ ಇಡೀ ಪ್ರಕ್ರಿಯೆ ಮೇಲೆ ಪರಿಣಾಮ ಬೀರಲಿದೆ. ಆದ್ದರಿಂದ, ಎಚ್ಚರಿಕೆ ವಹಿಸಬೇಕು’ ಎಂದು ಸೂಚಿಸಿದರು.</p>.<p>‘ಚಾಮುಂಡೇಶ್ವರಿ ದೇವಿಗೆ ಪ್ರತಿ ವರ್ಷ ಚಿನ್ನದ ಒಡವೆ ನೀಡುವುದು ವಾಡಿಕೆ. ಇದನ್ನು ನಿರಂತರವಾಗಿ ಆಚರಿಸಿಕೊಂಡು ಬರಲಾಗುತ್ತಿದ್ದು, ಕಳೆದ ಬಾರಿ ಕಾಸಿನ ಸರ ನೀಡಲಾಗಿತ್ತು. ಈ ಬಾರಿ ಏನು ನೀಡಬಹುದು ಎಂದು ಮುಂಚಿತವಾಗಿಯೇ ನಿರ್ಧರಿಸಬೇಕು. ಜಂಬೂ ಸವಾರಿಗಾಗಿ ಆನೆಗಳನ್ನು ಕರೆತರುವುದರ ಆದಿಯಾಗಿ ಅದಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದರು.</p>.<p>ಈ ವೇಳೆ ಮಾತನಾಡಿದ ಸಿಬ್ಬಂದಿಯೊಬ್ಬರು, ‘ರಂಗ ದಸರಾದಲ್ಲಿ ಅಧಿಕ ಕಾರ್ಯಕ್ರಮಗಳಿದ್ದರೂ ನೀಡುವ ಅನುದಾನ ಕಡಿಮೆ. ಹೀಗಾಗಿ, ಅನುದಾನ ಹೆಚ್ಚಿಸಬೇಕು’ ಎಂದು ಮನವಿ ಮಾಡಿದರು.</p>.<p>ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ಮಾತನಾಡಿ, ‘ಗಣೇಶ ಹಬ್ಬ, ಈದ್ ಮಿಲಾದ್ಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಅದಕ್ಕಾಗಿ ವಾರ್ಡ್ವಾರು ಜವಾಬ್ದಾರಿಗಳನ್ನು ಹಂಚಲಾಗಿದ್ದು, ಇದರ ನಡುವೆ ತಮ್ಮ ಕರ್ತವ್ಯಗಳನ್ನು ಸಹ ಸರಿಯಾಗಿ ನಿರ್ವಹಿಸಬೇಕು’ ಎಂದು ಸೂಚಿಸಿದರು.</p>.<p>ದಸರಾ ಅಂಗವಾಗಿ ಒಟ್ಟು 14 ಸಮಿತಿಗಳನ್ನು ರಚಿಸಲಾಗಿದ್ದು, ಮಹಾನಗರ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿಗೆ ಇದರ ಜವಾಬ್ದಾರಿ ನೀಡಲಾಯಿತು. </p>.<p><strong>ಅನುದಾನ ಕೋರಿ ಸಿಎಂ ಭೇಟಿ: ಚನ್ನಿ</strong> </p><p>‘ರಾಜ್ಯದಲ್ಲಿಯೇ ಶಿವಮೊಗ್ಗ ದಸರಾಕ್ಕೆ ಉತ್ತಮ ಅಭಿಪ್ರಾಯ ಇದೆ. ಕಳೆದ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದಾಗ ಅವರು ಕೂಡ ಇದನ್ನೇ ಹೇಳಿದ್ದರು. ಇದು ಎಲ್ಲರೂ ಸೇರಿ ಕಾರ್ಯಕ್ರಮ ಆಯೋಜನೆ ಮಾಡುತ್ತಿರುವುದರ ಪ್ರತಿಫಲವಾಗಿದೆ. ಈ ಸಲವೂ ಅನುದಾನಕ್ಕಾಗಿ ಸಿಎಂ ಭೇಟಿ ಮಾಡುತ್ತೇನೆ. ಪಾಲಿಕೆಯಿಂದ ಅಗತ್ಯ ಅನುದಾನಕ್ಕಾಗಿ ಪ್ರಸ್ತಾವ ಸಲ್ಲಿಸಿ’ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ಮೈಸೂರು ಮಾದರಿಯಲ್ಲಿ 9 ದಿನಗಳ ಕಾಲ ನಡೆಯುವ ಶಿವಮೊಗ್ಗ ದಸರಾದಲ್ಲಿ ಕಳೆದ ಬಾರಿ ಆದ ಸಮಸ್ಯೆಗಳು ಪುನರಾವರ್ತನೆ ಆಗದಂತೆ ಎಚ್ಚರ ವಹಿಸಬೇಕು’ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಸೂಚಿಸಿದರು.</p>.<p>ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ದಸರಾ ಪೂರ್ವಭಾವಿ ಸಭೆಯ’ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಕಳೆದ ಬಾರಿ ಪೆಂಡಾಲ್ ಹಾಕುವುದು ಸೇರಿ ಕೆಲವು ಕಡೆ ಗೊಂದಲ ಎದುರಾಗಿತ್ತು. ಆದ್ದರಿಂದ, ಜವಾಬ್ದಾರಿ ಹೊತ್ತವರು ಅದರೆಡೆಗೆ ಗಮನಹರಿಸಬೇಕು. ಉದ್ಘಾಟಕರ ಹೆಸರು, ಅತಿಥಿಗಳು, ರಂಗ ಕಲಾವಿದರು ಸೇರಿ ಅಗತ್ಯವಿರುವ ಎಲ್ಲ ಪೂರ್ವ ಸಿದ್ಧತೆಗಳನ್ನು ಮುಂಚಿತವಾಗಿ ಮಾಡಿಕೊಳ್ಳಬೇಕು’ ಎಂದರು.</p>.<p>‘ಇದರಿಂದ ಎಲ್ಲರಿಗೂ ಸಕಾಲದಲ್ಲಿ ಆಹ್ವಾನ ಪತ್ರಿಕೆ ನೀಡಲು ಸಹಕಾರಿಯಾಗಲಿದೆ. ಒಂದು ವೇಳೆ, ರಚಿಸಿದ ಸಮಿತಿಗಳೇ ಕಾರ್ಯ ನಿರ್ವಹಣೆಯಲ್ಲಿ ವಿಳಂಬ ಧೋರಣೆ ತೋರಿದರೆ ಇಡೀ ಪ್ರಕ್ರಿಯೆ ಮೇಲೆ ಪರಿಣಾಮ ಬೀರಲಿದೆ. ಆದ್ದರಿಂದ, ಎಚ್ಚರಿಕೆ ವಹಿಸಬೇಕು’ ಎಂದು ಸೂಚಿಸಿದರು.</p>.<p>‘ಚಾಮುಂಡೇಶ್ವರಿ ದೇವಿಗೆ ಪ್ರತಿ ವರ್ಷ ಚಿನ್ನದ ಒಡವೆ ನೀಡುವುದು ವಾಡಿಕೆ. ಇದನ್ನು ನಿರಂತರವಾಗಿ ಆಚರಿಸಿಕೊಂಡು ಬರಲಾಗುತ್ತಿದ್ದು, ಕಳೆದ ಬಾರಿ ಕಾಸಿನ ಸರ ನೀಡಲಾಗಿತ್ತು. ಈ ಬಾರಿ ಏನು ನೀಡಬಹುದು ಎಂದು ಮುಂಚಿತವಾಗಿಯೇ ನಿರ್ಧರಿಸಬೇಕು. ಜಂಬೂ ಸವಾರಿಗಾಗಿ ಆನೆಗಳನ್ನು ಕರೆತರುವುದರ ಆದಿಯಾಗಿ ಅದಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದರು.</p>.<p>ಈ ವೇಳೆ ಮಾತನಾಡಿದ ಸಿಬ್ಬಂದಿಯೊಬ್ಬರು, ‘ರಂಗ ದಸರಾದಲ್ಲಿ ಅಧಿಕ ಕಾರ್ಯಕ್ರಮಗಳಿದ್ದರೂ ನೀಡುವ ಅನುದಾನ ಕಡಿಮೆ. ಹೀಗಾಗಿ, ಅನುದಾನ ಹೆಚ್ಚಿಸಬೇಕು’ ಎಂದು ಮನವಿ ಮಾಡಿದರು.</p>.<p>ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ಮಾತನಾಡಿ, ‘ಗಣೇಶ ಹಬ್ಬ, ಈದ್ ಮಿಲಾದ್ಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಅದಕ್ಕಾಗಿ ವಾರ್ಡ್ವಾರು ಜವಾಬ್ದಾರಿಗಳನ್ನು ಹಂಚಲಾಗಿದ್ದು, ಇದರ ನಡುವೆ ತಮ್ಮ ಕರ್ತವ್ಯಗಳನ್ನು ಸಹ ಸರಿಯಾಗಿ ನಿರ್ವಹಿಸಬೇಕು’ ಎಂದು ಸೂಚಿಸಿದರು.</p>.<p>ದಸರಾ ಅಂಗವಾಗಿ ಒಟ್ಟು 14 ಸಮಿತಿಗಳನ್ನು ರಚಿಸಲಾಗಿದ್ದು, ಮಹಾನಗರ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿಗೆ ಇದರ ಜವಾಬ್ದಾರಿ ನೀಡಲಾಯಿತು. </p>.<p><strong>ಅನುದಾನ ಕೋರಿ ಸಿಎಂ ಭೇಟಿ: ಚನ್ನಿ</strong> </p><p>‘ರಾಜ್ಯದಲ್ಲಿಯೇ ಶಿವಮೊಗ್ಗ ದಸರಾಕ್ಕೆ ಉತ್ತಮ ಅಭಿಪ್ರಾಯ ಇದೆ. ಕಳೆದ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದಾಗ ಅವರು ಕೂಡ ಇದನ್ನೇ ಹೇಳಿದ್ದರು. ಇದು ಎಲ್ಲರೂ ಸೇರಿ ಕಾರ್ಯಕ್ರಮ ಆಯೋಜನೆ ಮಾಡುತ್ತಿರುವುದರ ಪ್ರತಿಫಲವಾಗಿದೆ. ಈ ಸಲವೂ ಅನುದಾನಕ್ಕಾಗಿ ಸಿಎಂ ಭೇಟಿ ಮಾಡುತ್ತೇನೆ. ಪಾಲಿಕೆಯಿಂದ ಅಗತ್ಯ ಅನುದಾನಕ್ಕಾಗಿ ಪ್ರಸ್ತಾವ ಸಲ್ಲಿಸಿ’ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>