ಕೆರೆಗಳ ಒತ್ತುವರಿ ತೆರವುಗೊಳಿಸಿದ ಬಳಿಕ, ಆ ಕೆರೆಯನ್ನು ಸಂಬಂಧಪಟ್ಟ ಇಲಾಖೆಯ ಸುಪರ್ದಿಗೆ ಒಪ್ಪಿಸಬೇಕು. ಇಲಾಖೆಯ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಬೇಕು. ತಕ್ಷಣ ಅಧಿಸೂಚನೆ ಹೊರಡಿಸಬೇಕು. ಮತ್ತೆ ಒತ್ತುವರಿಯಾದರೆ ಆಯಾ ಅಧಿಕಾರಿಯನ್ನು ಹೊಣೆಗಾರರನ್ನಾಗಿಸಿ, ಮೊಕದ್ದಮೆ ದಾಖಲಿಸಬೇಕು ಎಂದು ತಾಕೀತು ಮಾಡಿದರು.