<p>ಶಿವಮೊಗ್ಗ: ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಸಮುದಾಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ದೌರ್ಜನ್ಯ ಪ್ರತಿಬಂಧ ಕಾಯ್ದೆಯಡಿ ದಾಖಲಾದ ಪ್ರಕರಣಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಪರಿಶೀಲಿಸಿ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಬುಡಕಟ್ಟುಗಳ ಜಾಗೃತಿ ಮತ್ತು ಉಸ್ತುವಾರಿ (ದೌರ್ಜನ್ಯ ಪ್ರತಿಬಂಧ) ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಹಳ್ಳಿಗಳಲ್ಲಿನ ಸಮಸ್ಯೆಗಳ ಪಟ್ಟಿ ಮಾಡಿ ನೀಡಿ, ದಿನಾಂಕ ನಿಗದಿಪಡಿಸಿ ಅರ್ಧ ದಿನ ಬಂದು ಸಮಸ್ಯೆಗಳನ್ನು ಪರಿಹರಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.</p>.<p>‘ಪ್ರತಿ ತಿಂಗಳು ಮರಳು ಬಳಕೆ ಮಾಡಿದ ಇಲಾಖೆಗಳಿಂದ ವರದಿ ಪಡೆದು ನೀಡಬೇಕು ಹಾಗೂ ಸಿ.ಸಿ. ಟಿ.ವಿ ಫೂಟೆಜ್ ನೀಡಬೇಕು. ಒಂದು ವೇಳೆ ನೀಡದಿದ್ದರೆ ನೋಟಿಸ್ ನೀಡಲಾಗುವುದು’ ಎಂದು ಭೂವಿಜ್ಞಾನ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.</p>.<p>ಕಟ್ಟಡ ಕಾರ್ಮಿಕರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಭೋವಿ ಜನಾಂಗದವರಿಗೆ ಕಾರ್ಮಿಕ ಕಾರ್ಡ್ ಹಾಗೂ ಇತರೆ ಸೌಲಭ್ಯಗಳು ಕಾರ್ಮಿಕ ಇಲಾಖೆಯಿಂದ ಸಿಗುತ್ತಿಲ್ಲ. ಸಂತೇಕಡೂರು, ಸೋಗಾನೆ, ಮತ್ತೂರು ಪ್ರದೇಶದಲ್ಲಿ ಪ್ರಭಾವಿ ವ್ಯಕ್ತಿಗಳು ಸರ್ಕಾರಿ ಭೂಮಿ ಖರೀದಿಸಿ,<br />ಮಾರಾಟ ಮಾಡುವ ಮಾಫಿಯಾ ಹೆಚ್ಚುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ಜಿಲ್ಲಾಧಿಕಾರಿ ತಾಕೀತು ಮಾಡಿದರು.</p>.<p>‘ಶಿವಮೊಗ್ಗ ಸುತ್ತಮುತ್ತ ಇರುವ ಉದಾಹರಣೆಗೆ ಹಸೂಡಿಯಂತಹ ಗ್ರಾಮಗಳು ನಗರಕ್ಕೆ ಹತ್ತಿರವಿದ್ದರೂ ಜನರು ಸೌಲಭ್ಯದಿಂದ ವಂಚಿತರಾಗಿದ್ದಾರೆ. ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಸ್ಸ್ಸಿ, ಎಸ್ಟಿ, ತಮಿಳಿಗರು ಇತರೆ ಹಿಂದುಳಿದ ಜನಾಂಗದವರಿದ್ದು ನಿರ್ಗತಿಕರಾಗಿದ್ದಾರೆ ಎಂದು ಸಮಿತಿ ಸದಸ್ಯ ಜಗದೀಶ್ ತಿಳಿಸಿದರು.</p>.<p>ಸಮಿತಿ ಸದಸ್ಯ ನಾಗರಾಜ, ‘ವಿದ್ಯಾನಗರದ ಸರ್ಕಾರಿ ಶಾಲೆಗೆ ಸೇರಿದ ಜಾಗವನ್ನು ಪ್ರಭಾವಿ ವ್ಯಕ್ತಿ ಕಬಳಿಸುವ ಯತ್ನ ಮಾಡುತ್ತಿದ್ದು, ಎಸ್ಡಿಎಂಸಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪಾಲಿಕೆ ಆಯುಕ್ತರು ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದು, ಅವರ ಹೆಸರಿನಲ್ಲಿರುವ ಖಾತೆಯನ್ನು ರದ್ದುಪಡಿಸಿ ಶಾಲೆಗೆ ನ್ಯಾಯ ಒದಗಿಸಬೇಕು. ಹಾರನಹಳ್ಳಿ ಹಾಗೂ ಇತರೆಡೆ ಪರವಾನಗಿ ಇಲ್ಲದೇ<br />ಬಾರ್ ಮತ್ತು ವೈನ್ ಶಾಪ್ಗಳನ್ನು ಪ್ರಭಾವಿ ವ್ಯಕ್ತಿಗಳು ನಡೆಸುತ್ತಿದ್ದಾರೆ’ ಎಂದು ಜಿಲ್ಲಾಧಿಕಾರಿಯ ಗಮನ ಸೆಳೆದರು.</p>.<p>ಸಮಿತಿ ಸದಸ್ಯ ರಾಜಕುಮಾರ್, ‘ಪೊಲೀಸ್ ಕ್ವಾಟ್ರಸ್ ಹಿಂಭಾಗ ಶೋಷಿತ ಸಮುದಾಯದ ಅಭಿವೃದ್ಧಿಗಾಗಿ ಮೀಸಲಾಗಿದ್ದ ಜಾಗವನ್ನು ನೀಡಬೇಕು. ರಾಮಿನಕೊಪ್ಪದಲ್ಲಿ ಬಡವರಿಂದ ಮೇಲ್ವರ್ಗದವರಿಗೆ ಭೂಮಿಯನ್ನು ಬಿಡಿಸಿಕೊಡಲಾಗುತ್ತಿದ್ದು, ಈ ಬಗ್ಗೆ ಕ್ರಮ ವಹಿಸಬೇಕು. ವಿದ್ಯಾನಗರದ ದಲಿತ ಹುಡುಗನ ಮೇಲಿನ ದೌರ್ಜನ್ಯ ಪ್ರಕರಣ ದಾಖಲಾಗಿ ಒಂದು ವರ್ಷ ಕಳೆದರೂ ಪರಿಹಾರ ದೊರೆತಿಲ್ಲ. ಸೊರಬ ತಾಲ್ಲೂಕಿನ ಚೌಟಿ ಗ್ರಾಮದಲ್ಲಿ ₹1 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣವಾಗಿದ್ದು, ಹಾಳಾಗಿದೆ. ಈ ಬಗ್ಗೆ ವಿಚಾರಣೆ ನಡೆಸಬೇಕು’ ಎಂದು ಮನವಿ ಮಾಡಿದರು.</p>.<p>ಸಮಿತಿ ಸದಸ್ಯ ಬಸವರಾಜ ಹಸ್ವಿ, ‘ಸೊರಬ ತಾಲ್ಲೂಕಿನ ಗ್ರಾಮವೊಂದರಲ್ಲೇ 16 ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಕೂಡಲೇ ಕ್ರಮ ವಹಿಸಬೇಕು. ಇನ್ನೊಂದು ಗ್ರಾಮದಲ್ಲಿ ಭೂ ಮಾಲಿಕನಿಂದ ಗೇಣಿದಾರನನ್ನು ಒಕ್ಕಲೆಬ್ಬಿಸುವ ಪ್ರಯತ್ನ ನಡೆಯುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಬಿ.ಎಂ, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಸಾಗರ ಉಪವಿಭಾಗದ ತಹಶೀಲ್ದಾರ್ ನಾಗರಾಜ್, ಶಿವಮೊಗ್ಗ ತಹಶೀಲ್ದಾರ್ ಡಾ.ನಾಗರಾಜ್ ಹಾಜರಿದ್ದರು.</p>.<p>***</p>.<p>2022ನೇ ಸಾಲಿನಲ್ಲಿ ದೌರ್ಜನ್ಯ ಪ್ರತಿಬಂಧ ಕಾಯ್ದೆಯಡಿ ಒಟ್ಟು 41 ಪ್ರಕರಣ ದಾಖಲಾಗಿದ್ದು, 27 ಪ್ರಕರಣಗಳಿಗೆ ಪರಿಹಾರ ಮಂಜೂರು ಮಾಡಲಾಗಿದೆ. 6 ಪ್ರಕರಣ ಬಾಕಿ ಇದ್ದು, ಸುಳ್ಳು ಜಾತಿಯವು 8 ಪ್ರಕರಣಗಳಾಗಿವೆ. ಒಟ್ಟು ₹ 82 ಲಕ್ಷ ಪರಿಹಾರ ನೀಡಲಾಗಿದೆ.</p>.<p>ನಾಗರಾಜ್, ಉಪನಿರ್ದೇಶಕ, ಸಮಾಜ ಕಲ್ಯಾಣ ಇಲಾಖೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಸಮುದಾಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ದೌರ್ಜನ್ಯ ಪ್ರತಿಬಂಧ ಕಾಯ್ದೆಯಡಿ ದಾಖಲಾದ ಪ್ರಕರಣಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಪರಿಶೀಲಿಸಿ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಬುಡಕಟ್ಟುಗಳ ಜಾಗೃತಿ ಮತ್ತು ಉಸ್ತುವಾರಿ (ದೌರ್ಜನ್ಯ ಪ್ರತಿಬಂಧ) ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಹಳ್ಳಿಗಳಲ್ಲಿನ ಸಮಸ್ಯೆಗಳ ಪಟ್ಟಿ ಮಾಡಿ ನೀಡಿ, ದಿನಾಂಕ ನಿಗದಿಪಡಿಸಿ ಅರ್ಧ ದಿನ ಬಂದು ಸಮಸ್ಯೆಗಳನ್ನು ಪರಿಹರಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.</p>.<p>‘ಪ್ರತಿ ತಿಂಗಳು ಮರಳು ಬಳಕೆ ಮಾಡಿದ ಇಲಾಖೆಗಳಿಂದ ವರದಿ ಪಡೆದು ನೀಡಬೇಕು ಹಾಗೂ ಸಿ.ಸಿ. ಟಿ.ವಿ ಫೂಟೆಜ್ ನೀಡಬೇಕು. ಒಂದು ವೇಳೆ ನೀಡದಿದ್ದರೆ ನೋಟಿಸ್ ನೀಡಲಾಗುವುದು’ ಎಂದು ಭೂವಿಜ್ಞಾನ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.</p>.<p>ಕಟ್ಟಡ ಕಾರ್ಮಿಕರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಭೋವಿ ಜನಾಂಗದವರಿಗೆ ಕಾರ್ಮಿಕ ಕಾರ್ಡ್ ಹಾಗೂ ಇತರೆ ಸೌಲಭ್ಯಗಳು ಕಾರ್ಮಿಕ ಇಲಾಖೆಯಿಂದ ಸಿಗುತ್ತಿಲ್ಲ. ಸಂತೇಕಡೂರು, ಸೋಗಾನೆ, ಮತ್ತೂರು ಪ್ರದೇಶದಲ್ಲಿ ಪ್ರಭಾವಿ ವ್ಯಕ್ತಿಗಳು ಸರ್ಕಾರಿ ಭೂಮಿ ಖರೀದಿಸಿ,<br />ಮಾರಾಟ ಮಾಡುವ ಮಾಫಿಯಾ ಹೆಚ್ಚುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ಜಿಲ್ಲಾಧಿಕಾರಿ ತಾಕೀತು ಮಾಡಿದರು.</p>.<p>‘ಶಿವಮೊಗ್ಗ ಸುತ್ತಮುತ್ತ ಇರುವ ಉದಾಹರಣೆಗೆ ಹಸೂಡಿಯಂತಹ ಗ್ರಾಮಗಳು ನಗರಕ್ಕೆ ಹತ್ತಿರವಿದ್ದರೂ ಜನರು ಸೌಲಭ್ಯದಿಂದ ವಂಚಿತರಾಗಿದ್ದಾರೆ. ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಸ್ಸ್ಸಿ, ಎಸ್ಟಿ, ತಮಿಳಿಗರು ಇತರೆ ಹಿಂದುಳಿದ ಜನಾಂಗದವರಿದ್ದು ನಿರ್ಗತಿಕರಾಗಿದ್ದಾರೆ ಎಂದು ಸಮಿತಿ ಸದಸ್ಯ ಜಗದೀಶ್ ತಿಳಿಸಿದರು.</p>.<p>ಸಮಿತಿ ಸದಸ್ಯ ನಾಗರಾಜ, ‘ವಿದ್ಯಾನಗರದ ಸರ್ಕಾರಿ ಶಾಲೆಗೆ ಸೇರಿದ ಜಾಗವನ್ನು ಪ್ರಭಾವಿ ವ್ಯಕ್ತಿ ಕಬಳಿಸುವ ಯತ್ನ ಮಾಡುತ್ತಿದ್ದು, ಎಸ್ಡಿಎಂಸಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪಾಲಿಕೆ ಆಯುಕ್ತರು ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದು, ಅವರ ಹೆಸರಿನಲ್ಲಿರುವ ಖಾತೆಯನ್ನು ರದ್ದುಪಡಿಸಿ ಶಾಲೆಗೆ ನ್ಯಾಯ ಒದಗಿಸಬೇಕು. ಹಾರನಹಳ್ಳಿ ಹಾಗೂ ಇತರೆಡೆ ಪರವಾನಗಿ ಇಲ್ಲದೇ<br />ಬಾರ್ ಮತ್ತು ವೈನ್ ಶಾಪ್ಗಳನ್ನು ಪ್ರಭಾವಿ ವ್ಯಕ್ತಿಗಳು ನಡೆಸುತ್ತಿದ್ದಾರೆ’ ಎಂದು ಜಿಲ್ಲಾಧಿಕಾರಿಯ ಗಮನ ಸೆಳೆದರು.</p>.<p>ಸಮಿತಿ ಸದಸ್ಯ ರಾಜಕುಮಾರ್, ‘ಪೊಲೀಸ್ ಕ್ವಾಟ್ರಸ್ ಹಿಂಭಾಗ ಶೋಷಿತ ಸಮುದಾಯದ ಅಭಿವೃದ್ಧಿಗಾಗಿ ಮೀಸಲಾಗಿದ್ದ ಜಾಗವನ್ನು ನೀಡಬೇಕು. ರಾಮಿನಕೊಪ್ಪದಲ್ಲಿ ಬಡವರಿಂದ ಮೇಲ್ವರ್ಗದವರಿಗೆ ಭೂಮಿಯನ್ನು ಬಿಡಿಸಿಕೊಡಲಾಗುತ್ತಿದ್ದು, ಈ ಬಗ್ಗೆ ಕ್ರಮ ವಹಿಸಬೇಕು. ವಿದ್ಯಾನಗರದ ದಲಿತ ಹುಡುಗನ ಮೇಲಿನ ದೌರ್ಜನ್ಯ ಪ್ರಕರಣ ದಾಖಲಾಗಿ ಒಂದು ವರ್ಷ ಕಳೆದರೂ ಪರಿಹಾರ ದೊರೆತಿಲ್ಲ. ಸೊರಬ ತಾಲ್ಲೂಕಿನ ಚೌಟಿ ಗ್ರಾಮದಲ್ಲಿ ₹1 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣವಾಗಿದ್ದು, ಹಾಳಾಗಿದೆ. ಈ ಬಗ್ಗೆ ವಿಚಾರಣೆ ನಡೆಸಬೇಕು’ ಎಂದು ಮನವಿ ಮಾಡಿದರು.</p>.<p>ಸಮಿತಿ ಸದಸ್ಯ ಬಸವರಾಜ ಹಸ್ವಿ, ‘ಸೊರಬ ತಾಲ್ಲೂಕಿನ ಗ್ರಾಮವೊಂದರಲ್ಲೇ 16 ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಕೂಡಲೇ ಕ್ರಮ ವಹಿಸಬೇಕು. ಇನ್ನೊಂದು ಗ್ರಾಮದಲ್ಲಿ ಭೂ ಮಾಲಿಕನಿಂದ ಗೇಣಿದಾರನನ್ನು ಒಕ್ಕಲೆಬ್ಬಿಸುವ ಪ್ರಯತ್ನ ನಡೆಯುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಬಿ.ಎಂ, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಸಾಗರ ಉಪವಿಭಾಗದ ತಹಶೀಲ್ದಾರ್ ನಾಗರಾಜ್, ಶಿವಮೊಗ್ಗ ತಹಶೀಲ್ದಾರ್ ಡಾ.ನಾಗರಾಜ್ ಹಾಜರಿದ್ದರು.</p>.<p>***</p>.<p>2022ನೇ ಸಾಲಿನಲ್ಲಿ ದೌರ್ಜನ್ಯ ಪ್ರತಿಬಂಧ ಕಾಯ್ದೆಯಡಿ ಒಟ್ಟು 41 ಪ್ರಕರಣ ದಾಖಲಾಗಿದ್ದು, 27 ಪ್ರಕರಣಗಳಿಗೆ ಪರಿಹಾರ ಮಂಜೂರು ಮಾಡಲಾಗಿದೆ. 6 ಪ್ರಕರಣ ಬಾಕಿ ಇದ್ದು, ಸುಳ್ಳು ಜಾತಿಯವು 8 ಪ್ರಕರಣಗಳಾಗಿವೆ. ಒಟ್ಟು ₹ 82 ಲಕ್ಷ ಪರಿಹಾರ ನೀಡಲಾಗಿದೆ.</p>.<p>ನಾಗರಾಜ್, ಉಪನಿರ್ದೇಶಕ, ಸಮಾಜ ಕಲ್ಯಾಣ ಇಲಾಖೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>