<p>ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ಆಡಳಿತ ಮಂಡಳಿಗೆ ಚುನಾವಣೆ ನಡೆಯುತ್ತಿದ್ದು, ಗೆಲುವಿಗಾಗಿ ಹಲವರು ಕಸರತ್ತು ನಡೆಸುತ್ತಿದ್ದಾರೆ.</p>.<p>ಚುನಾವಣೆಯ ಅಖಾಡಕ್ಕೆ ಘಟಾನುಘಟಿಗಳೇ ಈ ಬಾರಿ ಇಳಿದಿದ್ದಾರೆ. ಗೆಲುವಿಗಾಗಿ ಸರ್ವ ಪ್ರಯತ್ನ ನಡೆಸುತ್ತಿದ್ದಾರೆ. ಎದುರಾಳಿಯನ್ನು ಹೇಗೆ ಮಣಿಸಬೇಕು ಎಂಬುದರ ಕುರಿತಂತೆ ತೆರೆಮರೆಯಲ್ಲಿ ಲೆಕ್ಕಾಚಾರ ಮಾಡುತ್ತಿದ್ದಾರೆ. ದಿನದಿಂದ ದಿನಕ್ಕೆ ಚುನಾವಣೆಯ ಕಾವು ಪಡೆದುಕೊಳ್ಳುತ್ತಿದೆ. </p>.<p>ಜೂನ್ 28ರಂದು ಡಿಸಿಸಿ ಬ್ಯಾಂಕಿನ 13 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಒಟ್ಟು 621 ಮತದಾರರು ಇದ್ದಾರೆ. ಅವರನ್ನು ಓಲೈಸಲು ಸ್ಪರ್ಧಾಳುಗಳು ಹಲವು ರೀತಿಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. </p>.<p>ಹಾಲಿ ಪದಾಧಿಕಾರಿಗಳು ಮತ್ತೊಮ್ಮೆ ಅಖಾಡಕ್ಕೆ ಇಳಿದಿದ್ದಾರೆ. ಇನ್ನೂ ಕೆಲವರು ಹೊಸದಾಗಿ ಸ್ಪರ್ಧೆಗೆ ಇಳಿದಿದ್ದಾರೆ. ಹೇಗಾದರೂ ಮಾಡಿ ಅಧಿಕಾರ ಉಳಿಸಿಕೊಳ್ಳಬೇಕು ಎಂದು ಹಳಬರು ಭಾರಿ ಪ್ರಯತ್ನ ಮಾಡುತ್ತಿದ್ದಾರೆ. </p>.<p>ಬ್ಯಾಂಕಿನ ಹಾಲಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ಉಪಾಧ್ಯಕ್ಷ ಎಚ್.ಎಲ್. ಷಡಾಕ್ಷರಿ, ಹಿರಿಯ ನಿರ್ದೇಶಕ ಬಸವಾನಿ ವಿಜಯದೇವ್, ಅಗಡಿ ಅಶೋಕ, ಕೆ.ಪಿ. ದುಗ್ಗಪ್ಪಗೌಡ, ಜೆ.ಪಿ. ಯೋಗೀಶ್, ಎಸ್.ಪಿ. ದಿನೇಶ್, ಬಿ.ಡಿ. ಭೂಕಾಂತ್, ಜಿ.ಎನ್. ಸುಧೀರ್ ಮತ್ತೊಮ್ಮೆ ಸ್ಪರ್ಧೆ ಮಾಡಿದ್ದಾರೆ. </p>.<p>ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್ ಅವರು ಮೊದಲ ಬಾರಿ ಸ್ಪರ್ಧೆ ಮಾಡಿದ್ದಾರೆ. ಬಿಜೆಪಿಯ ದಿನೇಶ್, ಬುಳ್ಳಾಪುರ, ಜೆಡಿಎಸ್ನ ಯೋಗೇಶ್, ಶಿಮುಲ್ನ ಹಾಲಿ ನಿರ್ದೇಶಕ ಆನಂದ ಅವರೂ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. </p>.<p>ಸಹಕಾರಿ ರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅವರ ಹಿಡಿತದಲ್ಲಿ ಡಿಸಿಸಿ ಬ್ಯಾಂಕ್ ಇದೆ. ಇದರ ನಡುವೆ ಬಿಜೆಪಿಯೂ ಈ ಬಾರಿ ಆಡಳಿತ ಚುಕ್ಕಾಣಿ ಹಿಡಿಯಲು ಶತಪ್ರಯತ್ನ ನಡೆಸುತ್ತಿರುವುದು ಕುತೂಹಲ ಮೂಡಿಸಿದೆ. </p>.<p>ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ನ ಹಲವು ರಾಜಕಾರಣಿಗಳು ಅಖಾಡಕ್ಕೆ ಇಳಿದಿರುವುದರಿಂದ ಚುನಾವಣಾ ಕಣ ರಂಗೇರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ಆಡಳಿತ ಮಂಡಳಿಗೆ ಚುನಾವಣೆ ನಡೆಯುತ್ತಿದ್ದು, ಗೆಲುವಿಗಾಗಿ ಹಲವರು ಕಸರತ್ತು ನಡೆಸುತ್ತಿದ್ದಾರೆ.</p>.<p>ಚುನಾವಣೆಯ ಅಖಾಡಕ್ಕೆ ಘಟಾನುಘಟಿಗಳೇ ಈ ಬಾರಿ ಇಳಿದಿದ್ದಾರೆ. ಗೆಲುವಿಗಾಗಿ ಸರ್ವ ಪ್ರಯತ್ನ ನಡೆಸುತ್ತಿದ್ದಾರೆ. ಎದುರಾಳಿಯನ್ನು ಹೇಗೆ ಮಣಿಸಬೇಕು ಎಂಬುದರ ಕುರಿತಂತೆ ತೆರೆಮರೆಯಲ್ಲಿ ಲೆಕ್ಕಾಚಾರ ಮಾಡುತ್ತಿದ್ದಾರೆ. ದಿನದಿಂದ ದಿನಕ್ಕೆ ಚುನಾವಣೆಯ ಕಾವು ಪಡೆದುಕೊಳ್ಳುತ್ತಿದೆ. </p>.<p>ಜೂನ್ 28ರಂದು ಡಿಸಿಸಿ ಬ್ಯಾಂಕಿನ 13 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಒಟ್ಟು 621 ಮತದಾರರು ಇದ್ದಾರೆ. ಅವರನ್ನು ಓಲೈಸಲು ಸ್ಪರ್ಧಾಳುಗಳು ಹಲವು ರೀತಿಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. </p>.<p>ಹಾಲಿ ಪದಾಧಿಕಾರಿಗಳು ಮತ್ತೊಮ್ಮೆ ಅಖಾಡಕ್ಕೆ ಇಳಿದಿದ್ದಾರೆ. ಇನ್ನೂ ಕೆಲವರು ಹೊಸದಾಗಿ ಸ್ಪರ್ಧೆಗೆ ಇಳಿದಿದ್ದಾರೆ. ಹೇಗಾದರೂ ಮಾಡಿ ಅಧಿಕಾರ ಉಳಿಸಿಕೊಳ್ಳಬೇಕು ಎಂದು ಹಳಬರು ಭಾರಿ ಪ್ರಯತ್ನ ಮಾಡುತ್ತಿದ್ದಾರೆ. </p>.<p>ಬ್ಯಾಂಕಿನ ಹಾಲಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ಉಪಾಧ್ಯಕ್ಷ ಎಚ್.ಎಲ್. ಷಡಾಕ್ಷರಿ, ಹಿರಿಯ ನಿರ್ದೇಶಕ ಬಸವಾನಿ ವಿಜಯದೇವ್, ಅಗಡಿ ಅಶೋಕ, ಕೆ.ಪಿ. ದುಗ್ಗಪ್ಪಗೌಡ, ಜೆ.ಪಿ. ಯೋಗೀಶ್, ಎಸ್.ಪಿ. ದಿನೇಶ್, ಬಿ.ಡಿ. ಭೂಕಾಂತ್, ಜಿ.ಎನ್. ಸುಧೀರ್ ಮತ್ತೊಮ್ಮೆ ಸ್ಪರ್ಧೆ ಮಾಡಿದ್ದಾರೆ. </p>.<p>ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್ ಅವರು ಮೊದಲ ಬಾರಿ ಸ್ಪರ್ಧೆ ಮಾಡಿದ್ದಾರೆ. ಬಿಜೆಪಿಯ ದಿನೇಶ್, ಬುಳ್ಳಾಪುರ, ಜೆಡಿಎಸ್ನ ಯೋಗೇಶ್, ಶಿಮುಲ್ನ ಹಾಲಿ ನಿರ್ದೇಶಕ ಆನಂದ ಅವರೂ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. </p>.<p>ಸಹಕಾರಿ ರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅವರ ಹಿಡಿತದಲ್ಲಿ ಡಿಸಿಸಿ ಬ್ಯಾಂಕ್ ಇದೆ. ಇದರ ನಡುವೆ ಬಿಜೆಪಿಯೂ ಈ ಬಾರಿ ಆಡಳಿತ ಚುಕ್ಕಾಣಿ ಹಿಡಿಯಲು ಶತಪ್ರಯತ್ನ ನಡೆಸುತ್ತಿರುವುದು ಕುತೂಹಲ ಮೂಡಿಸಿದೆ. </p>.<p>ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ನ ಹಲವು ರಾಜಕಾರಣಿಗಳು ಅಖಾಡಕ್ಕೆ ಇಳಿದಿರುವುದರಿಂದ ಚುನಾವಣಾ ಕಣ ರಂಗೇರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>