<p><strong>ಶಿವಮೊಗ್ಗ:</strong> ಡಿಸಿಸಿ ಬ್ಯಾಂಕ್ನ ಗಾಂಧಿ ಬಜಾರ್ ಶಾಖೆಯಲ್ಲಿ 2014ರಲ್ಲಿ ನಡೆದ ₹ 62.77 ಕೋಟಿ ಬಂಗಾರ ಅಡಮಾನ ಸಾಲ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಬ್ಯಾಂಕ್ನ ಆಡಳಿತ ಮಂಡಳಿ ಸರ್ಕಾರಕ್ಕೆ ಪತ್ರ ಬರೆದಿದೆ.</p>.<p>‘ಹಗರಣದಲ್ಲಿ ಡಿಸಿಸಿ ಬ್ಯಾಂಕ್ನ ಅಂದಿನ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಸೇರಿ 18 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಸಿಐಡಿ ತನಿಖೆ ನಡೆದು ಮಂಜುನಾಥ್ ಗೌಡರನ್ನು ಆರೋಪಮುಕ್ತಗೊಳಿಸಲಾಗಿತ್ತು. ಸಿಐಡಿ ಅಧಿಕಾರಿಗಳು ನಡೆಸಿದ ತನಿಖೆ ಸಮರ್ಪಕವಾಗಿಲ್ಲ ಎನ್ನುವ ಭಾವನೆ ಇದೆ. ಹೀಗಾಗಿ, ಕೂಲಂಕಷ ತನಿಖೆಗಾಗಿ ಸಿಬಿಐಗೆ ವಹಿಸಲು ಆಡಳಿತ ಮಂಡಳಿ ಸಭೆಯಲ್ಲಿ ಸರ್ವಾನುಮತದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಉಳಿದ 17 ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ನಿರ್ಧರಿಸಲಾಗಿದೆ’ ಎಂದು ಬ್ಯಾಂಕ್ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಡಿಸಿಸಿ ಬ್ಯಾಂಕ್ ರಾಜ್ಯದ ವಿಜಯಪುರ, ಬಾಗಲಕೋಟೆ, ಚನ್ನರಾಯಪಟ್ಟಣದ ಸಕ್ಕರೆ ಕಾರ್ಖಾನೆಗಳಿಗೆ ಸುಮಾರು ₹ 90 ಕೋಟಿ ಸಾಲ ನೀಡಿದೆ. ಹಿಂದಿನ ಆಡಳಿತ ಮಂಡಳಿ ನಿಯಮಬಾಹಿರವಾಗಿ ಸಾಲ ನೀಡಿದೆ ಎಂದು ಬ್ಯಾಂಕಿನ 11 ನಿರ್ದೇಶಕರು ದೂರು ನೀಡಿದ್ದಾರೆ. ಈ ಕುರಿತು ತನಿಖೆಗೆ ಒತ್ತಾಯಿಸಲಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕರಾದ ದುಗ್ಗಪ್ಪಗೌಡ, ಯೋಗೀಶ್, ಎಸ್.ಪಿ.ದಿನೇಶ್ ಪರಸ್ಪರ ವಾಗ್ವಾದ ನಡೆಸಿದರು. ಆರೋಪ, ಪ್ರತ್ಯಾರೋಪಗಳೂ ಕೇಳಿಬಂದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಡಿಸಿಸಿ ಬ್ಯಾಂಕ್ನ ಗಾಂಧಿ ಬಜಾರ್ ಶಾಖೆಯಲ್ಲಿ 2014ರಲ್ಲಿ ನಡೆದ ₹ 62.77 ಕೋಟಿ ಬಂಗಾರ ಅಡಮಾನ ಸಾಲ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಬ್ಯಾಂಕ್ನ ಆಡಳಿತ ಮಂಡಳಿ ಸರ್ಕಾರಕ್ಕೆ ಪತ್ರ ಬರೆದಿದೆ.</p>.<p>‘ಹಗರಣದಲ್ಲಿ ಡಿಸಿಸಿ ಬ್ಯಾಂಕ್ನ ಅಂದಿನ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಸೇರಿ 18 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಸಿಐಡಿ ತನಿಖೆ ನಡೆದು ಮಂಜುನಾಥ್ ಗೌಡರನ್ನು ಆರೋಪಮುಕ್ತಗೊಳಿಸಲಾಗಿತ್ತು. ಸಿಐಡಿ ಅಧಿಕಾರಿಗಳು ನಡೆಸಿದ ತನಿಖೆ ಸಮರ್ಪಕವಾಗಿಲ್ಲ ಎನ್ನುವ ಭಾವನೆ ಇದೆ. ಹೀಗಾಗಿ, ಕೂಲಂಕಷ ತನಿಖೆಗಾಗಿ ಸಿಬಿಐಗೆ ವಹಿಸಲು ಆಡಳಿತ ಮಂಡಳಿ ಸಭೆಯಲ್ಲಿ ಸರ್ವಾನುಮತದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಉಳಿದ 17 ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ನಿರ್ಧರಿಸಲಾಗಿದೆ’ ಎಂದು ಬ್ಯಾಂಕ್ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಡಿಸಿಸಿ ಬ್ಯಾಂಕ್ ರಾಜ್ಯದ ವಿಜಯಪುರ, ಬಾಗಲಕೋಟೆ, ಚನ್ನರಾಯಪಟ್ಟಣದ ಸಕ್ಕರೆ ಕಾರ್ಖಾನೆಗಳಿಗೆ ಸುಮಾರು ₹ 90 ಕೋಟಿ ಸಾಲ ನೀಡಿದೆ. ಹಿಂದಿನ ಆಡಳಿತ ಮಂಡಳಿ ನಿಯಮಬಾಹಿರವಾಗಿ ಸಾಲ ನೀಡಿದೆ ಎಂದು ಬ್ಯಾಂಕಿನ 11 ನಿರ್ದೇಶಕರು ದೂರು ನೀಡಿದ್ದಾರೆ. ಈ ಕುರಿತು ತನಿಖೆಗೆ ಒತ್ತಾಯಿಸಲಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕರಾದ ದುಗ್ಗಪ್ಪಗೌಡ, ಯೋಗೀಶ್, ಎಸ್.ಪಿ.ದಿನೇಶ್ ಪರಸ್ಪರ ವಾಗ್ವಾದ ನಡೆಸಿದರು. ಆರೋಪ, ಪ್ರತ್ಯಾರೋಪಗಳೂ ಕೇಳಿಬಂದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>