ಮರಣೋತ್ತರ ಪರೀಕ್ಷೆ: ಸಾವಿಗೀಡಾದ ಆನೆಗಳ ಮರಣೋತ್ತರ ಪರೀಕ್ಷೆ ಬೆಳಿಗ್ಗೆ ಸಕ್ರೆಬೈಲು ಆನೆ ಬಿಡಾರದ ವೈದ್ಯ ಡಾ.ವಿನಯ್ ನೇತೃತ್ವದಲ್ಲಿ ನೆರವೇರಿಸಲಾಯಿತು. ನಂತರ ಅಲ್ಲಿಯೇ ಅಂತ್ಯಕ್ರಿಯೆ ನೆರವೇರಿಸಲಾಯಿತು. ಆರೋಪಿ ಹೊಲದ ಬೇಲಿಗೆ ಬೇಟೆಯ ಉದ್ದೇಶದಿಂದ ವಿದ್ಯುತ್ ಸಂಪರ್ಕ ನೀಡಿದ್ದನೇ ಇಲ್ಲವೇ ಬೆಳೆ ರಕ್ಷಣೆಗೆ ಹಾಕಿದ್ದೇ ಎಂಬುದರ ಬಗ್ಗೆ ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಟಿ. ಹನುಮಂತಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.