ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಗರ: ಈಶ್ವರಪ್ಪ ವಿರುದ್ಧ ಪ್ರಕರಣಕ್ಕೆ ಒತ್ತಾಯ

Last Updated 23 ಫೆಬ್ರುವರಿ 2022, 3:02 IST
ಅಕ್ಷರ ಗಾತ್ರ

ಸಾಗರ: ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ ಎಂಬ ಹೇಳಿಕೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಇಲ್ಲಿನ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮಂಗಳವಾರ ನಗರ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದರು.

ದೇಶಾಭಿಮಾನದ ಬಗ್ಗೆ ಸದಾ ಮಾತನಾಡುವ ಸಚಿವ ಕೆ.ಎಸ್. ಈಶ್ವರಪ್ಪ ಅವರು ರಾಷ್ಟ್ರಧ್ವಜದ ಕುರಿತು ನೀಡಿರುವ ಹೇಳಿಕೆ ದೇಶದ್ರೋಹದ ವ್ಯಾಪ್ತಿಗೆ ಬರುತ್ತದೆ. ತಾವೊಬ್ಬ ಸಚಿವ ಎಂಬುದನ್ನು ಮರೆತು ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಕ್ರಮ ಕೈಗೊಳ್ಳದಿದ್ದರೆ ಪ್ರತಿಯೊಬ್ಬರೂ ಇದೇ ರೀತಿ ಹೇಳಿಕೆ ನೀಡುವ ಅಪಾಯವಿದೆ ಎಂದು ಡಿಎಸ್‌ಎಸ್‌ ಕಾರ್ಯಕರ್ತರು ಪ್ರತಿಪಾದಿಸಿದರು. ಪ್ರಮುಖರಾದ ಪರಮೇಶ್ವರ ದೂಗೂರು, ಧರ್ಮಣ್ಣ, ಸಚಿನ್, ಮನು, ನಾಗರಾಜ್, ಶೇಖರ್, ವೈ.ಎನ್. ಹುಬ್ಬಳ್ಳಿ, ಸಂದೀಪ, ಬಾಬುಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT