<p><strong>ಶಿವಮೊಗ್ಗ</strong>: ‘ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ವರದಿಯಂತೆ ಅಲೆಮಾರಿಗಳಿಗೆ ಪ್ರತ್ಯೇಕವಾಗಿ ಶೇ 1ರಷ್ಟು ಮೀಸಲಾತಿ ನೀಡಿದರೆ ಮಾತ್ರ ಸಾಮಾಜಿಕ ನ್ಯಾಯ ಸಿಗುತ್ತದೆ. ಸರ್ಕಾರ ಈ ನಿಟ್ಟಿನಲ್ಲಿ ಯೋಚಿಸಿ ಕ್ರಮ ಕೈಗೊಳ್ಳಬೇಕು’ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕ ಸಂಚಾಲಕ ಎಂ. ಗುರುಮೂರ್ತಿ ಒತ್ತಾಯಿಸಿದರು.</p>.<p>ವರದಿಯಲ್ಲಿ ಪರಿಶಿಷ್ಟ ಜಾತಿಯಲ್ಲಿ ತೀರಾ ಹಿಂದುಳಿದ ಅಲೆಮಾರಿ ಸಮುದಾಯಗಳಿಗೆ ಶೇ 1 ಮೀಸಲಾತಿ ಕಲ್ಪಿಸಲಾಗಿತ್ತು. ಆದರೆ ಸರ್ಕಾರವು ಅಲೆಮಾರಿ ಸಮುದಾಯಗಳನ್ನು ಸ್ಪೃಶ್ಯ ಜಾತಿಯವರೊಂದಿಗೆ ಸೇರಿಸುವ ಮೂಲಕ ಅನ್ಯಾಯ ಮಾಡಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು. </p>.<p>‘ಅಲೆಮಾರಿಗಳಲ್ಲಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಜಾತಿಗಳಾದ ಅಂದಾಜು 59 ಜಾತಿಗಳಿಗೆ ಇದರಿಂದ ತೊಂದರೆಯಾಗುತ್ತಿದ್ದು, ಅವರಿಗೆ ಈ ಹಿಂದೆ ಇದ್ದಂತೆ ಶೇ 1ರಷ್ಟು ಮೀಸಲಾತಿಯನ್ನು ಪ್ರತ್ಯೇಕವಾಗಿಯೇ ನೀಡಬೇಕು. ಹಾಗಾಗಿ ಸರ್ಕಾರ ಮತ್ತೊಮ್ಮೆ ತನ್ನ ನಿರ್ಧಾರವನ್ನು ಪರಿಷ್ಕರಣೆ ಮಾಡಿ ಅಲೆಮಾರಿಗಳಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು’ ಎಂದರು.</p>.<p>ಮೀಸಲಾತಿಯು ಕೇವಲ ಶಿಕ್ಷಣ ಮತ್ತು ಉದ್ಯೋಗಕ್ಕೆ ಮಾತ್ರ ಸೀಮಿತವಾಗಿದೆ. ಇದು ರಾಜಕೀಯ ಮೀಸಲಾತಿಗೂ ವಿಸ್ತರಿಸಬೇಕು ಎಂದು ದಲಿತ ಸಂಘರ್ಷ ಸಮಿತಿಯ ಮುಖಂಡ ಭದ್ರಾವತಿ ಶಿವಬಸಪ್ಪ ಒತ್ತಾಯಿಸಿದರು.</p>.<p>ಪ್ರಮುಖರಾದ ಎಂ. ಏಳುಕೋಟಿ, ಜೋಗಿ ಚಂದ್ರಪ್ಪ, ರಮೇಶ್ ಚಿಕ್ಕಮರಡಿ, ಬೊಮ್ಮನಕಟ್ಟೆ ಕೃಷ್ಣ, ಬಸವರಾಜ್, ರಾಜಶೇಖರ್, ಹರಿಗೆ ರವಿ, ಗಂಗಮಾಳಮ್ಮ, ಶ್ರೀನಿವಾಸ್, ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ‘ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ವರದಿಯಂತೆ ಅಲೆಮಾರಿಗಳಿಗೆ ಪ್ರತ್ಯೇಕವಾಗಿ ಶೇ 1ರಷ್ಟು ಮೀಸಲಾತಿ ನೀಡಿದರೆ ಮಾತ್ರ ಸಾಮಾಜಿಕ ನ್ಯಾಯ ಸಿಗುತ್ತದೆ. ಸರ್ಕಾರ ಈ ನಿಟ್ಟಿನಲ್ಲಿ ಯೋಚಿಸಿ ಕ್ರಮ ಕೈಗೊಳ್ಳಬೇಕು’ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕ ಸಂಚಾಲಕ ಎಂ. ಗುರುಮೂರ್ತಿ ಒತ್ತಾಯಿಸಿದರು.</p>.<p>ವರದಿಯಲ್ಲಿ ಪರಿಶಿಷ್ಟ ಜಾತಿಯಲ್ಲಿ ತೀರಾ ಹಿಂದುಳಿದ ಅಲೆಮಾರಿ ಸಮುದಾಯಗಳಿಗೆ ಶೇ 1 ಮೀಸಲಾತಿ ಕಲ್ಪಿಸಲಾಗಿತ್ತು. ಆದರೆ ಸರ್ಕಾರವು ಅಲೆಮಾರಿ ಸಮುದಾಯಗಳನ್ನು ಸ್ಪೃಶ್ಯ ಜಾತಿಯವರೊಂದಿಗೆ ಸೇರಿಸುವ ಮೂಲಕ ಅನ್ಯಾಯ ಮಾಡಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು. </p>.<p>‘ಅಲೆಮಾರಿಗಳಲ್ಲಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಜಾತಿಗಳಾದ ಅಂದಾಜು 59 ಜಾತಿಗಳಿಗೆ ಇದರಿಂದ ತೊಂದರೆಯಾಗುತ್ತಿದ್ದು, ಅವರಿಗೆ ಈ ಹಿಂದೆ ಇದ್ದಂತೆ ಶೇ 1ರಷ್ಟು ಮೀಸಲಾತಿಯನ್ನು ಪ್ರತ್ಯೇಕವಾಗಿಯೇ ನೀಡಬೇಕು. ಹಾಗಾಗಿ ಸರ್ಕಾರ ಮತ್ತೊಮ್ಮೆ ತನ್ನ ನಿರ್ಧಾರವನ್ನು ಪರಿಷ್ಕರಣೆ ಮಾಡಿ ಅಲೆಮಾರಿಗಳಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು’ ಎಂದರು.</p>.<p>ಮೀಸಲಾತಿಯು ಕೇವಲ ಶಿಕ್ಷಣ ಮತ್ತು ಉದ್ಯೋಗಕ್ಕೆ ಮಾತ್ರ ಸೀಮಿತವಾಗಿದೆ. ಇದು ರಾಜಕೀಯ ಮೀಸಲಾತಿಗೂ ವಿಸ್ತರಿಸಬೇಕು ಎಂದು ದಲಿತ ಸಂಘರ್ಷ ಸಮಿತಿಯ ಮುಖಂಡ ಭದ್ರಾವತಿ ಶಿವಬಸಪ್ಪ ಒತ್ತಾಯಿಸಿದರು.</p>.<p>ಪ್ರಮುಖರಾದ ಎಂ. ಏಳುಕೋಟಿ, ಜೋಗಿ ಚಂದ್ರಪ್ಪ, ರಮೇಶ್ ಚಿಕ್ಕಮರಡಿ, ಬೊಮ್ಮನಕಟ್ಟೆ ಕೃಷ್ಣ, ಬಸವರಾಜ್, ರಾಜಶೇಖರ್, ಹರಿಗೆ ರವಿ, ಗಂಗಮಾಳಮ್ಮ, ಶ್ರೀನಿವಾಸ್, ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>