<p><strong>ಶಿವಮೊಗ್ಗ: </strong>ಅಡಿಕೆ ಆಮದು ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಸೋಮವಾರ ಗೋಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.</p>.<p>ಕೇಂದ್ರ ಸರ್ಕಾರ ವಿದೇಶದಿಂದ 17 ಸಾವಿರ ಮೆಟ್ರಿಕ್ ಟನ್ ಅಡಿಕೆ ಆಮದು ಮಾಡಿಕೊಳ್ಳಲು ಒಪ್ಪಿಕೊಂಡಿರುವುದರಿಂದ ದೇಶೀಯ ಅಡಿಕೆ ಬೆಳೆಗಾರರು ಸಂಕಷ್ಟಕ್ಕೊಳಗಾಗಿದ್ದಾರೆ. ಈಗಾಗಲೇ ಅಡಿಕೆ ಬೆಲೆ ಪ್ರತಿ ಟನ್ಗೆ ₹ 20 ಸಾವಿರದಷ್ಟು ಕುಸಿತ ಕಂಡಿದ್ದು, ಆಮದು ನೀತಿಯಿಂದಾಗಿ ಮತ್ತಷ್ಟು ಬೆಲೆ ಕುಸಿಯುವ ಭೀತಿ ಎದುರಾಗಿದೆ ಎಂದರು.</p>.<p>ಒಂದೆಡೆ ಬೆಲೆ ಕುಸಿತ, ಇನ್ನೊಂದೆಡೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗಗಳಿಂದ ಬೆಳೆ ನಾಶವಾಗಿದ್ದು, ರೈತರ ಸ್ಥಿತಿ ಚಿಂತಾಜನಕವಾಗಿದೆ. ರೋಗ ನಿಯಂತ್ರಣಕ್ಕೆ ಅಡಿಕೆ ಕಾರ್ಯಪಡೆ ರಚಿಸಿ ₹ 10 ಕೋಟಿ ಮೀಸಲಿಟ್ಟು ಗೃಹ ಸಚಿವರನ್ನು ಕಾರ್ಯಪಡೆ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಆದರೆ, ಅವರು ಬೆಳೆಗಾರರ ಹಿತ ಕಾಯುವಲ್ಲಿ ವಿಫಲರಾಗಿದ್ದಾರೆ. ಕೂಡಲೇ ಕೇಂದ್ರ ಸರ್ಕಾರ ಅಡಿಕೆ ಆಮದು ನಿಲ್ಲಿಸಬೇಕು. ಅಡಿಗೆ ಬೆಳೆಗಾರರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು. ಇಲ್ಲವಾದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ಈ ಸಂದರ್ಭದಲ್ಲಿ ಮುಖಂಡರಾದ ರವಿಕುಮಾರ್, ನಜೀರ್ ಅಹಮ್ಮದ್, ರಾಮಕೃಷ್ಣ, ಸುರೇಶ್ ಕೋಟೆಕಾರ್, ಸೋಮಶೇಖರ್, ಟಿ. ನೇತ್ರಾವತಿ, ಮಾಲತೇಶ್, ಸ್ಟೀವನ್, ಹರೀಶ್, ಪ್ರದೀಪ್, ಪುಪ್ಪಲತಾ, ಪ್ರವೀಣ್, ರೋಹಿತ್, ಮುಕ್ಬಲ್ ಅಹಮ್ಮದ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಅಡಿಕೆ ಆಮದು ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಸೋಮವಾರ ಗೋಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.</p>.<p>ಕೇಂದ್ರ ಸರ್ಕಾರ ವಿದೇಶದಿಂದ 17 ಸಾವಿರ ಮೆಟ್ರಿಕ್ ಟನ್ ಅಡಿಕೆ ಆಮದು ಮಾಡಿಕೊಳ್ಳಲು ಒಪ್ಪಿಕೊಂಡಿರುವುದರಿಂದ ದೇಶೀಯ ಅಡಿಕೆ ಬೆಳೆಗಾರರು ಸಂಕಷ್ಟಕ್ಕೊಳಗಾಗಿದ್ದಾರೆ. ಈಗಾಗಲೇ ಅಡಿಕೆ ಬೆಲೆ ಪ್ರತಿ ಟನ್ಗೆ ₹ 20 ಸಾವಿರದಷ್ಟು ಕುಸಿತ ಕಂಡಿದ್ದು, ಆಮದು ನೀತಿಯಿಂದಾಗಿ ಮತ್ತಷ್ಟು ಬೆಲೆ ಕುಸಿಯುವ ಭೀತಿ ಎದುರಾಗಿದೆ ಎಂದರು.</p>.<p>ಒಂದೆಡೆ ಬೆಲೆ ಕುಸಿತ, ಇನ್ನೊಂದೆಡೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗಗಳಿಂದ ಬೆಳೆ ನಾಶವಾಗಿದ್ದು, ರೈತರ ಸ್ಥಿತಿ ಚಿಂತಾಜನಕವಾಗಿದೆ. ರೋಗ ನಿಯಂತ್ರಣಕ್ಕೆ ಅಡಿಕೆ ಕಾರ್ಯಪಡೆ ರಚಿಸಿ ₹ 10 ಕೋಟಿ ಮೀಸಲಿಟ್ಟು ಗೃಹ ಸಚಿವರನ್ನು ಕಾರ್ಯಪಡೆ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಆದರೆ, ಅವರು ಬೆಳೆಗಾರರ ಹಿತ ಕಾಯುವಲ್ಲಿ ವಿಫಲರಾಗಿದ್ದಾರೆ. ಕೂಡಲೇ ಕೇಂದ್ರ ಸರ್ಕಾರ ಅಡಿಕೆ ಆಮದು ನಿಲ್ಲಿಸಬೇಕು. ಅಡಿಗೆ ಬೆಳೆಗಾರರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು. ಇಲ್ಲವಾದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ಈ ಸಂದರ್ಭದಲ್ಲಿ ಮುಖಂಡರಾದ ರವಿಕುಮಾರ್, ನಜೀರ್ ಅಹಮ್ಮದ್, ರಾಮಕೃಷ್ಣ, ಸುರೇಶ್ ಕೋಟೆಕಾರ್, ಸೋಮಶೇಖರ್, ಟಿ. ನೇತ್ರಾವತಿ, ಮಾಲತೇಶ್, ಸ್ಟೀವನ್, ಹರೀಶ್, ಪ್ರದೀಪ್, ಪುಪ್ಪಲತಾ, ಪ್ರವೀಣ್, ರೋಹಿತ್, ಮುಕ್ಬಲ್ ಅಹಮ್ಮದ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>