ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಆಗ್ರಹ

Last Updated 25 ಅಕ್ಟೋಬರ್ 2021, 3:58 IST
ಅಕ್ಷರ ಗಾತ್ರ

ಭದ್ರಾವತಿ: ಬಾಂಗ್ಲಾದೇಶದಲ್ಲಿನಹಿಂದೂಗಳು ಮತ್ತು ಅವರ ಧಾರ್ಮಿಕಸ್ಥಳಗಳನ್ನು ರಕ್ಷಿಸುವ ದೃಷ್ಟಿಯಿಂದ ಭಾರತ ಸರ್ಕಾರ ದಿಟ್ಟ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಯುವ ಬ್ರಿಗೇಡ್‌ನಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.

ನಗರ ಬಸ್ ನಿಲ್ದಾಣದಿಂದ ಅಂಬೇಡ್ಕರ್ ವೃತ್ತದ ತನಕ ಮೇಣದಬತ್ತಿ ಮೆರವಣಿಗೆ ನಡೆಸಿದ ಕಾರ್ಯಕರ್ತರು ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಆಗ್ರಹಿಸಿ ಘೋಷಣೆ ಕೂಗಿದರು.

ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆ ಅಲ್ಲಿನ ಸರ್ಕಾರದ ಜವಾಬ್ದಾರಿ. ಆದರೆ ಇದಕ್ಕಾಗಿ ಬೇಕಾದ ಕಾರ್ಯಕ್ರಮವನ್ನು ರೂಪಿಸದ ಅಲ್ಲಿನ ಸರ್ಕಾರ ಅವರನ್ನು ಕಡೆಗಣಿಸಿದೆ.ಕೇಂದ್ರ ಸರ್ಕಾರ ಈ ಕೂಡಲೇ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳನ್ನು ರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು. ಅವರ ರಕ್ಷಣೆಗೆ ಬೇಕಾದ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ರಾಜತಾಂತ್ರಿಕ ಕಚೇರಿ ಮೂಲಕ ಪ್ರಯತ್ನ ಮಾಡಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಉಮೇಶಗೌಡ, ಸಚಿನ್, ಧನುಷ್, ಮೋಹನಗೌಡ, ಸಂಜು, ಮಂಜು, ಶ್ರೇಯಸ್, ಜೋಗಿ, ರಮೇಶ, ಪ್ರಭು, ಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT