<p><strong>ಶಿವಮೊಗ್ಗ:</strong> ‘ಸೆ.15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆಯ ಯಶಸ್ಸಿಗೆ ಕೇವಲ ಅಧಿಕಾರಿಗಳು ಮಾತ್ರವಲ್ಲ ಜಿಲ್ಲೆಯ ಜನರು, ಸಂಘ ಸಂಸ್ಥೆಗಳು ಕೈ ಜೋಡಿಸಬೇಕು’ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ ಮಾಡಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಬಗ್ಗೆ ಚರ್ಚಿಸಲು ವಿವಿಧ ಸಂಘ ಸಂಸ್ಥೆಗಳ ಮುಖಂಡರೊಂದಿಗೆ ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಡಾ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಈ ದೇಶಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿ ಹಾಕಿದ್ದಾರೆ. ಸಂವಿಧಾನದ ಬಗ್ಗೆ ಅರಿವು ಮೂಡಿಸಲು ಸೆ.15 ರಂದು ರಾಜ್ಯದಾದ್ಯಂತ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಮಾನವ ಸರಪಳಿ ರಚಿಸುವ ಮೂಲಕ ಆಚರಿಸಲಾಗುತ್ತಿದೆ.</p>.<p>ವಿವಿಧ ಕಲಾಮೇಳದೊಂದಿಗೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸ್ತ್ರೀಶಕ್ತಿ, ಸ್ವಸಹಾಯ ಮಹಿಳಾ ಗುಂಪುಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸಂಘಟನೆಗಳು, ಸರ್ಕಾರಿ ಅಧಿಕಾರಿ, ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸ್ಕೌಟ್–ಗೈಡ್ಸ್, ಎನ್ಎಸ್ಎಸ್, ಎನ್ಸಿಸಿ ಕೆಡೆಟ್ಗಳು ಹಾಗೂ ಸಾರ್ವಜನಿಕರು ಇದರಲ್ಲಿ ಭಾಗಿಯಾಗಲಿದ್ದಾರೆ ಎಂದರು.</p>.<p>ಸಂವಿಧಾನದ ಆಶಯ, ಪ್ರಜಾಪ್ರಭುತ್ವದ ಮಹತ್ವವನ್ನು ಯುವ ಪೀಳಿಗೆಗೆ ತಿಳಿಸುವುದು ಹಾಗೂ ಪ್ರತಿಯೊಬ್ಬರಲ್ಲೂ ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶ ಈ ಕಾರ್ಯಕ್ರಮದ್ದು ಎಂದರು.</p>.<p>ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಲ್ಲೇಶಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶೋಭಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ, ಸಹಾಯಕ ನಿರ್ದೇಶಕ ಸುರೇಶ್ ಉಪಸ್ಥಿತರಿದ್ದರು.</p>.<p><strong>60 ಕಿ.ಮೀ ಉದ್ದದ ಮಾನವ ಸರಪಳಿ ರಚನೆ!</strong> </p><p>ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಕ್ಕೆ ಪೂರಕವಾಗಿ ಒಗ್ಗಟ್ಟು ಪ್ರದರ್ಶಿಸಲು ಸೆ.15ರಂದು ಭದ್ರಾವತಿ ತಾಲ್ಲೂಕಿನ ಕಾರೇಹಳ್ಳಿಯಿಂದ ಶಿವಮೊಗ್ಗ ತಾಲ್ಲೂಕಿನ ಮಡಿಕೆಚೀಲೂರುವರೆಗೆ 60 ಕಿ.ಮೀ ದೂರದವರೆಗೆ ಮಾನವ ಸರಪಳಿ ರಚಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. 8 ಗ್ರಾಮ ಪಂಚಾಯಿತಿ ವ್ಯಾಪ್ತಿ ಸ್ಥಳೀಯ ಸಂಸ್ಥೆಗಳು ನಗರ ವ್ಯಾಪ್ತಿಯನ್ನು ಒಳಗೊಂಡು ಮಾನವ ಸರಪಳಿ ರಚಿಸಲು ಸಿದ್ಧತೆ ನಡೆಸಲಾಗಿದೆ ಎಂದು ಗುರುದತ್ತ ಹೆಗಡೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ಸೆ.15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆಯ ಯಶಸ್ಸಿಗೆ ಕೇವಲ ಅಧಿಕಾರಿಗಳು ಮಾತ್ರವಲ್ಲ ಜಿಲ್ಲೆಯ ಜನರು, ಸಂಘ ಸಂಸ್ಥೆಗಳು ಕೈ ಜೋಡಿಸಬೇಕು’ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ ಮಾಡಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಬಗ್ಗೆ ಚರ್ಚಿಸಲು ವಿವಿಧ ಸಂಘ ಸಂಸ್ಥೆಗಳ ಮುಖಂಡರೊಂದಿಗೆ ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಡಾ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಈ ದೇಶಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿ ಹಾಕಿದ್ದಾರೆ. ಸಂವಿಧಾನದ ಬಗ್ಗೆ ಅರಿವು ಮೂಡಿಸಲು ಸೆ.15 ರಂದು ರಾಜ್ಯದಾದ್ಯಂತ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಮಾನವ ಸರಪಳಿ ರಚಿಸುವ ಮೂಲಕ ಆಚರಿಸಲಾಗುತ್ತಿದೆ.</p>.<p>ವಿವಿಧ ಕಲಾಮೇಳದೊಂದಿಗೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸ್ತ್ರೀಶಕ್ತಿ, ಸ್ವಸಹಾಯ ಮಹಿಳಾ ಗುಂಪುಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸಂಘಟನೆಗಳು, ಸರ್ಕಾರಿ ಅಧಿಕಾರಿ, ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸ್ಕೌಟ್–ಗೈಡ್ಸ್, ಎನ್ಎಸ್ಎಸ್, ಎನ್ಸಿಸಿ ಕೆಡೆಟ್ಗಳು ಹಾಗೂ ಸಾರ್ವಜನಿಕರು ಇದರಲ್ಲಿ ಭಾಗಿಯಾಗಲಿದ್ದಾರೆ ಎಂದರು.</p>.<p>ಸಂವಿಧಾನದ ಆಶಯ, ಪ್ರಜಾಪ್ರಭುತ್ವದ ಮಹತ್ವವನ್ನು ಯುವ ಪೀಳಿಗೆಗೆ ತಿಳಿಸುವುದು ಹಾಗೂ ಪ್ರತಿಯೊಬ್ಬರಲ್ಲೂ ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶ ಈ ಕಾರ್ಯಕ್ರಮದ್ದು ಎಂದರು.</p>.<p>ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಲ್ಲೇಶಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶೋಭಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ, ಸಹಾಯಕ ನಿರ್ದೇಶಕ ಸುರೇಶ್ ಉಪಸ್ಥಿತರಿದ್ದರು.</p>.<p><strong>60 ಕಿ.ಮೀ ಉದ್ದದ ಮಾನವ ಸರಪಳಿ ರಚನೆ!</strong> </p><p>ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಕ್ಕೆ ಪೂರಕವಾಗಿ ಒಗ್ಗಟ್ಟು ಪ್ರದರ್ಶಿಸಲು ಸೆ.15ರಂದು ಭದ್ರಾವತಿ ತಾಲ್ಲೂಕಿನ ಕಾರೇಹಳ್ಳಿಯಿಂದ ಶಿವಮೊಗ್ಗ ತಾಲ್ಲೂಕಿನ ಮಡಿಕೆಚೀಲೂರುವರೆಗೆ 60 ಕಿ.ಮೀ ದೂರದವರೆಗೆ ಮಾನವ ಸರಪಳಿ ರಚಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. 8 ಗ್ರಾಮ ಪಂಚಾಯಿತಿ ವ್ಯಾಪ್ತಿ ಸ್ಥಳೀಯ ಸಂಸ್ಥೆಗಳು ನಗರ ವ್ಯಾಪ್ತಿಯನ್ನು ಒಳಗೊಂಡು ಮಾನವ ಸರಪಳಿ ರಚಿಸಲು ಸಿದ್ಧತೆ ನಡೆಸಲಾಗಿದೆ ಎಂದು ಗುರುದತ್ತ ಹೆಗಡೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>