ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಉಪ ತಹಶೀಲ್ದಾರ್ ಸಾವು

Last Updated 7 ಏಪ್ರಿಲ್ 2022, 4:46 IST
ಅಕ್ಷರ ಗಾತ್ರ

ಆನವಟ್ಟಿ: ಇಲ್ಲಿನ ನಾಡಕಚೇರಿಯ ಉಪತಹಶೀಲ್ದಾರ್ ಸಿ. ಚನ್ನಕೇಶವ(47) ಅವರು ಬುಧವಾರಕರ್ತವ್ಯ ನಿರ್ವಹಿಸುತ್ತಿರುವಾಗಲೇ
ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮಧ್ಯಾಹ್ನ ಊಟ ಮುಗಿಸಿ ಬಂದು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸು‌ತ್ತಿದ್ದಾಗ ಹೃದಯಾಘಾತದ ಲಕ್ಷಣ ಕಂಡುಬಂದಿದೆ. ತಕ್ಷಣ ಸಿಬ್ಬಂದಿ ಆನವಟ್ಟಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದರು. ಆಸ್ಪತ್ರೆ ಪ್ರವೇಶ ದ್ವಾರದ ಬಳಿಯೇ ಹೃದಯಾಘಾತವಾಗಿ ಅಲ್ಲೇ ಕುಸಿದುಬಿದ್ದರು. ವೈದ್ಯರು ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಚನ್ನಕೇಶವ ಅವರುಮೂಲತಃ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನವರು. ಸದ್ಯ ಸಾಗರದಲ್ಲಿ ವಾಸವಾಗಿದ್ದರು. ಸಾಗರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT