ತುಂಗಾನಗರದ ಪ್ರವೀಣ್ ಮತ್ತು ತರಿಕೆರೆಯ ಸಂತೋಷ್ ಬಂಧಿತರು. ಪಲ್ಸರ್ ಬೈಕಿನಲ್ಲಿ ಬಂದಿದ್ದ ಇವರನ್ನು ಪೊಲೀಸರು ತಡೆದಿದ್ದಾರೆ. ತಪಾಸಣೆಗೂ ಮುನ್ನ ವಿಚಾರಣೆ ಮಾಡುತ್ತಿದ್ದಂತೆ ಈ ಇಬ್ಬರು ಪರಾರಿಯಾಗಲು ಯತ್ನಿಸಿದ್ದಾರೆ. ಅವರನ್ನು ಹಿಡಿದು ಪರಿಶೀಲಿಸಿದಾಗ ಅವರ ಬಳಿ ಮಾರಾಕಾಸ್ತ್ರಗಳು ಪತ್ತೆಯಾಗಿವೆ. ಈ ಸಂಬಂಧ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.