<p><strong>ಸಾಗರ: ಮೀನು ಮರಿಗಳ ಸಂತತಿ ವೃದ್ಧಿ ಸಮಯದಲ್ಲಿ ಮೀನುಗಾರಿಕೆ ಮಾಡದಿರುವ ಮೂಲಕ ಮೀನುಗಾರರು ಅವುಗಳ ಸಂತತಿ ವೃದ್ಧಿಗೆ ಸಹಕರಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಮನವಿ ಮಾಡಿದರು. </strong></p>.<p><strong>ತಾಲ್ಲೂಕಿನ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಳೆಬಾಗಿಲಿನ ಶರಾವತಿ ಹಿನ್ನೀರಿಗೆ ಮೀನುಗಾರಿಕೆ ಇಲಾಖೆಯಿಂದ ಮೀನು ಮರಿಗಳನ್ನು ಬಿಡುವ ಕಾರ್ಯಕ್ಕೆ ಚಾಲನೆ ನೀಡಿ, </strong><strong> ಮೀನುಗಾರರ ಸುರಕ್ಷತೆಗೆ ಲೈಫ್ ಜಾಕೆಟ್, ಬಲೆಗಳು ಹಾಗೂ ಅಗತ್ಯ ಪರಿಕರಗಳನ್ನು ಗುರುವಾರ ವಿತರಿಸಿ ಮಾತನಾಡಿದರು. </strong></p>.<p><strong>ಮೀನಿನ ಮರಿಗಳು ಬೆಳವಣಿಗೆಯಾಗುವ ತನಕ ಯಾವ ನಿಯಮಗಳನ್ನು ಪಾಲಿಸಬೇಕು ಎನ್ನುವ ಕುರಿತು ಮೀನುಗಾರಿಕಾ ಇಲಾಖೆ ನೀಡುವ ಮಾರ್ಗಸೂಚಿಗಳನ್ನು ಮೀನುಗಾರರು ತಪ್ಪದೇ ಪಾಲಿಸಬೇಕು. ಹಾಗಾದಲ್ಲಿ ಮಾತ್ರ ಮೀನುಗಾರಿಕೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು.</strong></p>.<p><strong>ಈ ವರ್ಷ 9 ಲಕ್ಷ ಮೀನು ಮರಿಗಳನ್ನು ಬಿಡಲು ಚಾಲನೆ ನೀಡಲಾಗಿದೆ. ಇದರ ಜೊತೆಗೆ ಮೀನುಗಾರರ ಸುರಕ್ಷತೆಗೆ ಸಂಬಂಧಿಸಿದಂತೆ 40 ಫಲಾನುಭವಿಗಳಿಗೆ ತಲಾ ₹ 10 ಸಾವಿರ ಮೌಲ್ಯದ ಸುರಕ್ಷತಾ ಪರಿಕರಗಳನ್ನು ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.</strong></p>.<p><strong>ಕೋಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್, ಮೀನುಗಾರಿಕೆ ಇಲಾಖೆ ಜಿಲ್ಲಾ ಉಪನಿರ್ದೇಶಕ ಸತೀಶ್, ಸಹಾಯಕ ನಿರ್ದೇಶಕ ತಿಮ್ಮಪ್ಪ ಎಂ.ಎಚ್., ನಗರಸಭೆ ಸದಸ್ಯ ಗಣಪತಿ ಮಂಡಗಳಲೆ, ಪ್ರಮುಖರಾದ ಚೇತನ್ ರಾಜ್ ಕಣ್ಣೂರು, ಸೋಮಶೇಖರ್ ಲ್ಯಾವಿಗೆರೆ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: ಮೀನು ಮರಿಗಳ ಸಂತತಿ ವೃದ್ಧಿ ಸಮಯದಲ್ಲಿ ಮೀನುಗಾರಿಕೆ ಮಾಡದಿರುವ ಮೂಲಕ ಮೀನುಗಾರರು ಅವುಗಳ ಸಂತತಿ ವೃದ್ಧಿಗೆ ಸಹಕರಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಮನವಿ ಮಾಡಿದರು. </strong></p>.<p><strong>ತಾಲ್ಲೂಕಿನ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಳೆಬಾಗಿಲಿನ ಶರಾವತಿ ಹಿನ್ನೀರಿಗೆ ಮೀನುಗಾರಿಕೆ ಇಲಾಖೆಯಿಂದ ಮೀನು ಮರಿಗಳನ್ನು ಬಿಡುವ ಕಾರ್ಯಕ್ಕೆ ಚಾಲನೆ ನೀಡಿ, </strong><strong> ಮೀನುಗಾರರ ಸುರಕ್ಷತೆಗೆ ಲೈಫ್ ಜಾಕೆಟ್, ಬಲೆಗಳು ಹಾಗೂ ಅಗತ್ಯ ಪರಿಕರಗಳನ್ನು ಗುರುವಾರ ವಿತರಿಸಿ ಮಾತನಾಡಿದರು. </strong></p>.<p><strong>ಮೀನಿನ ಮರಿಗಳು ಬೆಳವಣಿಗೆಯಾಗುವ ತನಕ ಯಾವ ನಿಯಮಗಳನ್ನು ಪಾಲಿಸಬೇಕು ಎನ್ನುವ ಕುರಿತು ಮೀನುಗಾರಿಕಾ ಇಲಾಖೆ ನೀಡುವ ಮಾರ್ಗಸೂಚಿಗಳನ್ನು ಮೀನುಗಾರರು ತಪ್ಪದೇ ಪಾಲಿಸಬೇಕು. ಹಾಗಾದಲ್ಲಿ ಮಾತ್ರ ಮೀನುಗಾರಿಕೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು.</strong></p>.<p><strong>ಈ ವರ್ಷ 9 ಲಕ್ಷ ಮೀನು ಮರಿಗಳನ್ನು ಬಿಡಲು ಚಾಲನೆ ನೀಡಲಾಗಿದೆ. ಇದರ ಜೊತೆಗೆ ಮೀನುಗಾರರ ಸುರಕ್ಷತೆಗೆ ಸಂಬಂಧಿಸಿದಂತೆ 40 ಫಲಾನುಭವಿಗಳಿಗೆ ತಲಾ ₹ 10 ಸಾವಿರ ಮೌಲ್ಯದ ಸುರಕ್ಷತಾ ಪರಿಕರಗಳನ್ನು ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.</strong></p>.<p><strong>ಕೋಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್, ಮೀನುಗಾರಿಕೆ ಇಲಾಖೆ ಜಿಲ್ಲಾ ಉಪನಿರ್ದೇಶಕ ಸತೀಶ್, ಸಹಾಯಕ ನಿರ್ದೇಶಕ ತಿಮ್ಮಪ್ಪ ಎಂ.ಎಚ್., ನಗರಸಭೆ ಸದಸ್ಯ ಗಣಪತಿ ಮಂಡಗಳಲೆ, ಪ್ರಮುಖರಾದ ಚೇತನ್ ರಾಜ್ ಕಣ್ಣೂರು, ಸೋಮಶೇಖರ್ ಲ್ಯಾವಿಗೆರೆ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>