ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲೆಗಳಿಗೆ ಕೊಳಚೆ ನೀರು: ಕಡಿವಾಣಕ್ಕೆ ಸಂಸದರ ತಾಕೀತು

ಜಿಲ್ಲಾ ಪಂಚಾಯಿತಿ
Last Updated 24 ಡಿಸೆಂಬರ್ 2019, 16:19 IST
ಅಕ್ಷರ ಗಾತ್ರ

ಶಿವಮೊಗ್ಗ:ಯಾವುದೇ ವಾರ್ಡ್‌ನ ಒಳಚರಂಡಿಯ ಕೊಳಚೆ ನೀರುನಾಲೆಗಳಿಗೆಬಿಡಬಾರದು ಎಂದು ಸಂಸದ ಬಿ.ವೈ.ರಾಘವೇಂದ್ರ ಎಚ್ಚರಿಸಿದರು.

ಜಿಲ್ಲಾ ಪಂಚಾಯಿತಿಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಅಮೃತ್ ಯೋಜನೆಯಲ್ಲಿಶಿವಮೊಗ್ಗ ನಗರದಲ್ಲಿ ₨ 65 ಕೋಟಿ ವೆಚ್ಚದಲ್ಲಿ ನೀರು ಸರಬರಾಜು ಕಾಮಗಾರಿ ಕೈಗೊಳ್ಳಲಾಗುತ್ತಿದೆ.ಇದುವರೆಗೆ 11 ಓವರ್ ಹೆಡ್ ಟ್ಯಾಂಕ್‍ಗಳ ನಿರ್ಮಾಣ ಮಾಡಲಾಗಿದೆ.10 ಪೂರ್ಣಗೊಂಡಿವೆ. 28 ಕಿ.ಮೀ.ಉದ್ದದ ಪೈಪ್‍ಲೈನ್ ಕಾಮಗಾರಿ ನಡೆಸಲಾಗಿದೆ. ಬಾಕಿ ಉಳಿದಿರುವ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.

ದೀನ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ ಮೂಲಕಜಿಲ್ಲೆಯ ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು.ಗ್ರಾಮ ಜ್ಯೋತಿ ಯೋಜನೆಯಲ್ಲಿ16,288 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ರೂಪಿಸಲಾಗಿತ್ತು. ಇದುವರೆಗೆ 15,590 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಉಳಿದಶೇ 5ರಷ್ಟು ಮನೆಗಳಿಗೆ ಶೀಘ್ರ ಸಂಪರ್ಕ ಕಲ್ಪಿಸಬೇಕು ಎಂದು ತಾಕೀತು ಮಾಡಿದರು.

ಶುದ್ಧ ಕುಡಿಯುವ ನೀರಿನ ಘಟಕ: ಜಿಲ್ಲೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಸಮರ್ಪಕ ನಿರ್ವಹಣೆ ಮಾಡಬೇಕು. ಗ್ರಾಮೀಣ ಕುಡಿಯುವ ನೀರಿನ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ನೀರಿನ ಮೂಲಸಿಗುವ ಮದಲೇಪೈಪ್‍ಲೈನ್, ಟ್ಯಾಂಕ್ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಬಾರದು ಎಂದು ಎಚ್ಚರಿಸಿದರು.

ಜಿಲ್ಲೆಯಲ್ಲಿ 290 ಘಟಕಗಳಿವೆ. 30 ಘಟಕಗಳು ದುರಸ್ತಿಯಲ್ಲಿವೆ. ಗ್ರಾಮೀಣ ನೀರು ಪೂರೈಕೆ ವಿಭಾಗಕ್ಕೆಈ ಘಟಕಗಳ ನಿರ್ವಹಣೆ ಹಸ್ತಾಂತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಂ.ವೈ.ವೈಶಾಲಿ ತಿಳಿಸಿದರು.

ಉದ್ಯೋಗ ಖಾತ್ರಿ ಯೋಜನೆ: ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಕ್ಟೋಬರ್ ಕೊನೆಯವರೆಗೆ ₨ 8.7 5ಕೋಟಿ ಕೂಲಿ ಮೊತ್ತ ಹಾಗೂ ₨ 9.15 ಕೋಟಿ ಸಾಮಾಗ್ರಿ ಮೊತ್ತ ಪಾವತಿಸಬೇಕಿದೆ.ಬಾಕಿ ಮೊತ್ತ ಪಾವತಿಗೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಗ್ರಾಮೀಣ ಮಟ್ಟದಲ್ಲಿ ಮೂಲಸೌಲಭ್ಯ ಕಲ್ಪಿಸಲು ಉದ್ಯೋಗ ಖಾತ್ರಿ ಯೋಜನೆ ಉತ್ತಮ ಅವಕಾಶ. ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ರಾಘವೇಂದ್ರ ಸಲಹೆ ನೀಡಿದರು.

ತ್ಯಾಜ್ಯ ವಿಲೇವಾರಿ ಘಟಕ: ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಮುಂದಿನ ಜೂನ್ ಒಳಗೆ ಕಡ್ಡಾಯವಾಗಿ ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಲು ಆದೇಶ ನೀಡಲಾಗಿದೆ. ಈಗಾಗಲೆ 18 ಗ್ರಾಮ ಪಂಚಾಯಿತಿಗಳು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿವೆ.12ಕ್ಕೆ ಅನುಮೋದನೆನೀಡಲಾಗಿದೆ. ತಲಾ ₨ 10 ಲಕ್ಷ ಬಿಡುಗಡೆಯಾಗಿದೆ. 6 ಗ್ರಾಮ ಪಂಚಾಯಿತಿಗಳಲ್ಲಿಕಾಮಗಾರಿ ಆರಂಭವಾಗಿವೆಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ವಿವರ ನೀಡಿದರು.

ಪ್ರವಾಹ ಪುನರ್ವಸತಿ ಪರೀಶೀಲಿಸಿ: ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಾಣಕ್ಕೆ ₨ 5 ಲಕ್ಷ ನೀಡಲಾಗುತ್ತಿದೆ.ಲಾಭ ಅರ್ಹರಿಗೆ ತಲುಪಬೇಕು. ಕೆಲವು ಕಡೆ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ಅನುದಾನ ದುರುಪಯೋಗ ಪಡಿಸಿಕೊಂಡಬಗ್ಗೆ ದೂರುಗಳು ಬಂದಿವೆ.ಈ ಕುರಿತು ಪರಿಶೀಲನೆ ನಡೆಸಬೇಕು ಎಂದು ಶಾಸಕ ಅರಗ ಜ್ಞಾನೇಂದ್ರ ಒತ್ತಾಯಿಸಿದರು.

ಸಾಮಾಜಿಕ ಭದ್ರತಾ ಯೋಜನೆ: ಸಾಮಾಜಿಕ ಭದ್ರತಾ ಯೋಜನೆಯಲ್ಲಿ ಕೆಲವು ತಿಂಗಳಿನಿಂದ ಪಿಂಚಣಿ ಮೊತ್ತ ಫಲಾನುಭವಿಗಳಿಗೆ ದೊರಕಿಲ್ಲ. ಅದನ್ನೇ ನಂಬಿಕೊಂಡವರು ಸಂಕಷ್ಟ ಅನುಭವಿಸುತ್ತಿದ್ದಾರೆ.ತಕ್ಷಣ ಸರಿಪಡಿಸಬೇಕು. ಕೆ2 ಸಮಸ್ಯೆಯಿಂದಾಗಿ 6,200 ಫಲಾನುಭವಿಗಳ ಬ್ಯಾಂಕ್ ಖಾತೆ ತಾಳೆಯಾಗದ ಕಾರಣ ಪಿಂಚಣಿ ಪಾವತಿ ವಿಳಂಬವಾಗುತ್ತಿದೆ. ಅಂತ್ಯಸಂಸ್ಕಾರ ಯೋಜನೆಗೆ4,367 ಅರ್ಜಿಗಳಿಗೆ ಹಣ ನೀಡಲು2.18 ಕೋಟಿ ಅನುದಾನಕ್ಕಾಗಿ ಬೇಡಿಕೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿಅಧ್ಯಕ್ಷೆ ಜ್ಯೋತಿ ಎಸ್‌.ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯಕುಮಾರ್,ಶಾಸಕ ಕುಮಾರ ಬಂಗಾರಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT