<p><strong>ಶಿವಮೊಗ್ಗ</strong>: ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಆನೆಗಳಿಗೆ ಮಹಾನಗರ ಪಾಲಿಕೆ ಆಡಳಿತ ಆಗೌರವ ತೋರಿದೆ ಎಂಬ ಆರೋಪಗಳು ಕೇಳಿಬಂದಿದೆ.</p>.<p>ಪ್ರತಿ ವರ್ಷ ದಸರಾದಲ್ಲಿ ಭಾಗವಹಿಸಿದ್ದ ಆನೆಗಳನ್ನು ವಾಹನದಲ್ಲಿ ಕರೆತಂದು ದಸರಾ ಮುಗಿದ ನಂತರ ವಾಹನದಲ್ಲೇ ಸಕ್ರೆಬೈಲಿಗೆ ಕರೆತರಲಾಗುತ್ತಿತ್ತು. ಆದರೆ, ಈ ಬಾರಿ ದಸರಾದಲ್ಲಿ ಭಾಗವಹಿಸಿದ್ದ ಸಾಗರ ಹಾಗೂ ಭಾನುಮತಿ ಆನೆಗಳನ್ನು ಸಕ್ರೆಬೈಲಿನಿಂದ ನಡೆಸಿಕೊಂಡು ಶಿವಮೊಗ್ಗಕ್ಕೆ ಕರೆತರಲಾಗಿದೆ. ಹೋಗುವಾಗಲೂ ನಡೆಸಿಕೊಂಡು ಹೋಗಿದ್ದಾರೆ. ಇದಕ್ಕೆ ಪರಿಸರವಾದಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ದಸರಾ ಮೆರವಣಿಗೆಯಲ್ಲಿ ಇವರೆಡೂ ಆನೆಗಳು ಸ್ವಲ್ಪ ದೂರ ಹೆಜ್ಜೆ ಹಾಕಿದ್ದವು. ಬಳಿಕ ಹಿಂತಿರುಗಿದ್ದವು. ಆ ದಿನ ಮಧ್ಯಾಹ್ನವೇ ಆನೆಗಳು ಬಿಡಾರಕ್ಕೆ ಮರಳಿವೆ. ಶಿವಮೊಗ್ಗದಿಂದ ಸಕ್ರೆಬೈಲು ಬಿಡಾರದವರೆಗೂ ಆನೆಗಳು ನಡೆದುಕೊಂಡೇ ಹೋಗಿವೆ. ದಸರಾ ಕಾರಣ ಆನೆಗಳಿಗೆ ಹಚ್ಚಲಾಗಿದ್ದ ಬಣ್ಣ ಕೂಡ ಹಾಗೆಯೇ ಇತ್ತು. ಆನೆಗಳು ನಡೆದು ಹೋಗುತ್ತಿರುವ ದೃಶ್ಯವನ್ನು ಪರಿಸರವಾದಿ ನಿತಿನ್ ಹೆರಳೆ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.</p>.<p>ಪ್ರತಿ ಬಾರಿ ಶಿವಮೊಗ್ಗ ದಸರಾದ ಅಂಬಾರಿ ಹೊರಲು ಸಕ್ರೆಬೈಲು ಬಿಡಾರದಿಂದ ಆನೆಗಳನ್ನು ಕರೆಸಲಾಗುತ್ತದೆ. ಜಂಬೂಸವಾರಿ ಮರುದಿನ ಮಾವುತ, ಕಾವಾಡಿ, ಬಿಡಾರದ ಅಧಿಕಾರಿಗಳಿಗೆ ಗೌರವ ಸಲ್ಲಿಸಿ, ಆನೆಗಳಿಗೆ ಪೂಜೆ ಸಲ್ಲಿಸಿ ಬೀಳ್ಕೊಡಲಾಗುತಿತ್ತು. ಆದರೆ ಈ ಬಾರಿ ಅಂತಹ ಪರಿಪಾಠವಿಲ್ಲದಂತಾಗಿದೆ ಎಂದು ಪಾಲಿಕೆ ಕಾಂಗ್ರೆಸ್ ಸದಸ್ಯ ಬಿ.ಎ. ರಮೇಶ ಹೆಗ್ಡೆ ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಆನೆಗಳಿಗೆ ಮಹಾನಗರ ಪಾಲಿಕೆ ಆಡಳಿತ ಆಗೌರವ ತೋರಿದೆ ಎಂಬ ಆರೋಪಗಳು ಕೇಳಿಬಂದಿದೆ.</p>.<p>ಪ್ರತಿ ವರ್ಷ ದಸರಾದಲ್ಲಿ ಭಾಗವಹಿಸಿದ್ದ ಆನೆಗಳನ್ನು ವಾಹನದಲ್ಲಿ ಕರೆತಂದು ದಸರಾ ಮುಗಿದ ನಂತರ ವಾಹನದಲ್ಲೇ ಸಕ್ರೆಬೈಲಿಗೆ ಕರೆತರಲಾಗುತ್ತಿತ್ತು. ಆದರೆ, ಈ ಬಾರಿ ದಸರಾದಲ್ಲಿ ಭಾಗವಹಿಸಿದ್ದ ಸಾಗರ ಹಾಗೂ ಭಾನುಮತಿ ಆನೆಗಳನ್ನು ಸಕ್ರೆಬೈಲಿನಿಂದ ನಡೆಸಿಕೊಂಡು ಶಿವಮೊಗ್ಗಕ್ಕೆ ಕರೆತರಲಾಗಿದೆ. ಹೋಗುವಾಗಲೂ ನಡೆಸಿಕೊಂಡು ಹೋಗಿದ್ದಾರೆ. ಇದಕ್ಕೆ ಪರಿಸರವಾದಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ದಸರಾ ಮೆರವಣಿಗೆಯಲ್ಲಿ ಇವರೆಡೂ ಆನೆಗಳು ಸ್ವಲ್ಪ ದೂರ ಹೆಜ್ಜೆ ಹಾಕಿದ್ದವು. ಬಳಿಕ ಹಿಂತಿರುಗಿದ್ದವು. ಆ ದಿನ ಮಧ್ಯಾಹ್ನವೇ ಆನೆಗಳು ಬಿಡಾರಕ್ಕೆ ಮರಳಿವೆ. ಶಿವಮೊಗ್ಗದಿಂದ ಸಕ್ರೆಬೈಲು ಬಿಡಾರದವರೆಗೂ ಆನೆಗಳು ನಡೆದುಕೊಂಡೇ ಹೋಗಿವೆ. ದಸರಾ ಕಾರಣ ಆನೆಗಳಿಗೆ ಹಚ್ಚಲಾಗಿದ್ದ ಬಣ್ಣ ಕೂಡ ಹಾಗೆಯೇ ಇತ್ತು. ಆನೆಗಳು ನಡೆದು ಹೋಗುತ್ತಿರುವ ದೃಶ್ಯವನ್ನು ಪರಿಸರವಾದಿ ನಿತಿನ್ ಹೆರಳೆ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.</p>.<p>ಪ್ರತಿ ಬಾರಿ ಶಿವಮೊಗ್ಗ ದಸರಾದ ಅಂಬಾರಿ ಹೊರಲು ಸಕ್ರೆಬೈಲು ಬಿಡಾರದಿಂದ ಆನೆಗಳನ್ನು ಕರೆಸಲಾಗುತ್ತದೆ. ಜಂಬೂಸವಾರಿ ಮರುದಿನ ಮಾವುತ, ಕಾವಾಡಿ, ಬಿಡಾರದ ಅಧಿಕಾರಿಗಳಿಗೆ ಗೌರವ ಸಲ್ಲಿಸಿ, ಆನೆಗಳಿಗೆ ಪೂಜೆ ಸಲ್ಲಿಸಿ ಬೀಳ್ಕೊಡಲಾಗುತಿತ್ತು. ಆದರೆ ಈ ಬಾರಿ ಅಂತಹ ಪರಿಪಾಠವಿಲ್ಲದಂತಾಗಿದೆ ಎಂದು ಪಾಲಿಕೆ ಕಾಂಗ್ರೆಸ್ ಸದಸ್ಯ ಬಿ.ಎ. ರಮೇಶ ಹೆಗ್ಡೆ ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>