ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಸರಾ ಆನೆಗಳಿಗೆ ಪಾಲಿಕೆ ಅಗೌರವ: ಆರೋ‍ಪ

Last Updated 18 ಅಕ್ಟೋಬರ್ 2021, 5:57 IST
ಅಕ್ಷರ ಗಾತ್ರ

ಶಿವಮೊಗ್ಗ: ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಆನೆಗಳಿಗೆ ಮಹಾನಗರ ಪಾಲಿಕೆ ಆಡಳಿತ ಆಗೌರವ ತೋರಿದೆ ಎಂಬ ಆರೋಪಗಳು ಕೇಳಿಬಂದಿದೆ.

ಪ್ರತಿ ವರ್ಷ ದಸರಾದಲ್ಲಿ ಭಾಗವಹಿಸಿದ್ದ ಆನೆಗಳನ್ನು ವಾಹನದಲ್ಲಿ ಕರೆತಂದು ದಸರಾ ಮುಗಿದ ನಂತರ ವಾಹನದಲ್ಲೇ ಸಕ್ರೆಬೈಲಿಗೆ ಕರೆತರಲಾಗುತ್ತಿತ್ತು. ಆದರೆ, ಈ ಬಾರಿ ದಸರಾದಲ್ಲಿ ಭಾಗವಹಿಸಿದ್ದ ಸಾಗರ ಹಾಗೂ ಭಾನುಮತಿ ಆನೆಗಳನ್ನು ಸಕ್ರೆಬೈಲಿನಿಂದ ನಡೆಸಿಕೊಂಡು ಶಿವಮೊಗ್ಗಕ್ಕೆ ಕರೆತರಲಾಗಿದೆ. ಹೋಗುವಾಗಲೂ ನಡೆಸಿಕೊಂಡು ಹೋಗಿದ್ದಾರೆ. ಇದಕ್ಕೆ ಪರಿಸರವಾದಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದಸರಾ ಮೆರವಣಿಗೆಯಲ್ಲಿ ಇವರೆಡೂ ಆನೆಗಳು ಸ್ವಲ್ಪ ದೂರ ಹೆಜ್ಜೆ ಹಾಕಿದ್ದವು. ಬಳಿಕ ಹಿಂತಿರುಗಿದ್ದವು. ಆ ದಿನ ಮಧ್ಯಾಹ್ನವೇ ಆನೆಗಳು ಬಿಡಾರಕ್ಕೆ ಮರಳಿವೆ. ಶಿವಮೊಗ್ಗದಿಂದ ಸಕ್ರೆಬೈಲು ಬಿಡಾರದವರೆಗೂ ಆನೆಗಳು ನಡೆದುಕೊಂಡೇ ಹೋಗಿವೆ. ದಸರಾ ಕಾರಣ ಆನೆಗಳಿಗೆ ಹಚ್ಚಲಾಗಿದ್ದ ಬಣ್ಣ ಕೂಡ ಹಾಗೆಯೇ ಇತ್ತು. ಆನೆಗಳು ನಡೆದು ಹೋಗುತ್ತಿರುವ ದೃಶ್ಯವನ್ನು ಪರಿಸರವಾದಿ ನಿತಿನ್‌ ಹೆರಳೆ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಪ್ರತಿ ಬಾರಿ ಶಿವಮೊಗ್ಗ ದಸರಾದ ಅಂಬಾರಿ ಹೊರಲು ಸಕ್ರೆಬೈಲು ಬಿಡಾರದಿಂದ ಆನೆಗಳನ್ನು ಕರೆಸಲಾಗುತ್ತದೆ. ಜಂಬೂಸವಾರಿ ಮರುದಿನ ಮಾವುತ, ಕಾವಾಡಿ, ಬಿಡಾರದ ಅಧಿಕಾರಿಗಳಿಗೆ ಗೌರವ ಸಲ್ಲಿಸಿ, ಆನೆಗಳಿಗೆ ಪೂಜೆ ಸಲ್ಲಿಸಿ ಬೀಳ್ಕೊಡಲಾಗುತಿತ್ತು. ಆದರೆ ಈ ಬಾರಿ ಅಂತಹ ಪರಿಪಾಠವಿಲ್ಲದಂತಾಗಿದೆ ಎಂದು ಪಾಲಿಕೆ ಕಾಂಗ್ರೆಸ್‌ ಸದಸ್ಯ ಬಿ.ಎ. ರಮೇಶ ಹೆಗ್ಡೆ ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT