<p><strong>ಶಿವಮೊಗ್ಗ</strong>: 'ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಬಂಧನದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈವಾಡ ಇದೆ. ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದರೆ ಸತ್ಯ ಹೊರಗೆ ಬರಲಿದೆ' ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಬುಧವಾರ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ಸರ್ಕಾರ ಸಿಐಡಿಗೆ ವಹಿಸಿದ್ದು ಸರಿಯಲ್ಲ. ರವಿ ಅವರನ್ನು ಐದು ಜಿಲ್ಲೆಗಳನ್ನು ಸುತ್ತಿಸಿ ಕರೆದುಕೊಂಡು ಹೋಗಲು ಪೊಲೀಸರಿಗೆ ಅಣತಿ ನೀಡಿದವರು ಯಾರು ಎಂಬುದು ಬಯಲಿಗೆ ಬರಲಿ’ ಎಂದರು.</p>.<p>‘ಸರ್ಕಾರ ಈ ಪ್ರಕರಣವನ್ನು ಯಾಕೆ ಇಷ್ಟು ಎಳೆದಾಡುತ್ತಿದೆ. ಇದರ ಹಿಂದೆ ಯಾರಿದ್ದಾರೆ? ಗೂಂಡಾಗಳನ್ನು ಬಿಟ್ಟು ರವಿ ಅವರ ಮೇಲೆ ಹಲ್ಲೆ ನಡೆಸಲು ಯತ್ನಿಸಿದವರು ಯಾರು? ಎಲ್ಲವೂ ಬಯಲಿಗೆ ಬರಬೇಕಾಗಿದೆ. ಅದು ಅದಕ್ಕೆ ನ್ಯಾಯಾಂಗ ತನಿಖೆಗೆ ಸೂಕ್ತ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: 'ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಬಂಧನದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈವಾಡ ಇದೆ. ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದರೆ ಸತ್ಯ ಹೊರಗೆ ಬರಲಿದೆ' ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಬುಧವಾರ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ಸರ್ಕಾರ ಸಿಐಡಿಗೆ ವಹಿಸಿದ್ದು ಸರಿಯಲ್ಲ. ರವಿ ಅವರನ್ನು ಐದು ಜಿಲ್ಲೆಗಳನ್ನು ಸುತ್ತಿಸಿ ಕರೆದುಕೊಂಡು ಹೋಗಲು ಪೊಲೀಸರಿಗೆ ಅಣತಿ ನೀಡಿದವರು ಯಾರು ಎಂಬುದು ಬಯಲಿಗೆ ಬರಲಿ’ ಎಂದರು.</p>.<p>‘ಸರ್ಕಾರ ಈ ಪ್ರಕರಣವನ್ನು ಯಾಕೆ ಇಷ್ಟು ಎಳೆದಾಡುತ್ತಿದೆ. ಇದರ ಹಿಂದೆ ಯಾರಿದ್ದಾರೆ? ಗೂಂಡಾಗಳನ್ನು ಬಿಟ್ಟು ರವಿ ಅವರ ಮೇಲೆ ಹಲ್ಲೆ ನಡೆಸಲು ಯತ್ನಿಸಿದವರು ಯಾರು? ಎಲ್ಲವೂ ಬಯಲಿಗೆ ಬರಬೇಕಾಗಿದೆ. ಅದು ಅದಕ್ಕೆ ನ್ಯಾಯಾಂಗ ತನಿಖೆಗೆ ಸೂಕ್ತ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>