‘ಬಿಜೆಪಿ ಯಡಿಯೂರಪ್ಪ ಅವರನ್ನು ಬಳಸಿ ಬಿಸಾಡಿದೆ’ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಂಬಂಧಿಸಿದಂತೆ ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಎಲ್ಲ ರೀತಿ ಅವಕಾಶ ಮಾಡಿಕೊಟ್ಟಿದ್ದಾರೆ. ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರಿ ನಡೆಸಲು ಅವಕಾಶ ನೀಡಿದ್ದಾರೆ. ಅಧಿಕಾರ ಇಲ್ಲದಿದ್ದರೂ ರಾಜ್ಯದಲ್ಲಿ ಒಡಾಟ ಮಾಡಿ ಪಕ್ಷ ಬಲ ಪಡಿಸಲು ಗಮನ ನೀಡುತ್ತಿದ್ದೇನೆ. ನನಗೆ ಎಲ್ಲ ರೀತಿ ಸಹಕಾರವನ್ನು ಅಧಿಕಾರಿಗಳು, ಮುಖ್ಯಮಂತ್ರಿ ಹಾಗೂ ಮಂತ್ರಿಗಳು ನೀಡುತ್ತಿದ್ದಾರೆ’ ಎಂದು ಹೇಳಿದರು.