ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿಯಾಗಲು ಡಿ.ಕೆ.ಶಿವಕುಮಾರ್ ಮೇಕೆದಾಟು ಪಾದಯಾತ್ರೆ: ಈಶ್ವರಪ್ಪ ವ್ಯಂಗ್ಯ

Last Updated 10 ಜನವರಿ 2022, 15:54 IST
ಅಕ್ಷರ ಗಾತ್ರ

ಶಿವಮೊಗ್ಗ: ಸಿದ್ದರಾಮಯ್ಯ ಅವರನ್ನು ಪಕ್ಕಕ್ಕೆ ಸರಿಸಿ ಮುಖ್ಯಮಂತ್ರಿಯಾಗುವ ಸಲುವಾಗಿ ಡಿ.ಕೆ.ಶಿವಕುಮಾರ್ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಅವರು ಡಿ.ಕೆ.ಶಿವಕುಮಾರ್ ಅಲ್ಲ, ಕೆ.ಡಿ ಶಿವಕುಮಾರ್‌ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಕುಟುಕಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.

‘ಶಿವಕುಮರ್ ತಿಹಾರ್ ಜೈಲಿಗೆ ಹೋಗಿದ್ದರು. ಅವರನ್ನು ನಾವು ಕಳುಹಿಸಿದ್ದೆವಾ? ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದರು. ಹಾಗಾಗಿ, ಜೈಲಿಗೆ ಹೋಗಿ ಬಂದರು. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದವರು. ಶಿವಕುಮಾರ್ ಮಂತ್ರಿ ಆಗಿದ್ದವರು. ಈಗ ಪಾದಯಾತ್ರೆ ಮಾಡಿದರೆ ಅವರನ್ನು ಜೈಲಿಗೆ ಹಾಕೋಕೆ ಆಗತ್ತಾ ಎಂದು ಛೇಡಿಸಿದರು.

ಪಾದಯಾತ್ರೆಯಲ್ಲಿ ಯಾವುದೇ ನಿಯಮ ಪಾಲನೆ ಆಗಿಲ್ಲ. ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿದೆ. ವಾಪಸ್ ಹೋಗಿದ್ದಾರೆ. ಸಿದ್ದರಾಮಯ್ಯ ಅವರಿಗೆ ಜ್ವರ ಹತ್ತಿಸಿ, ರಾಜ್ಯದ ಜನರಿಗೂ ಕೋವಿಡ್ ಹರಡಲು ಪಾದಯಾತ್ರೆಯೇ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT