<p>ಸಾಗರ: ಕ್ಷೇತ್ರದಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಅನಗತ್ಯವಾಗಿ ಬಿಜೆಪಿ ಹಾಗೂ ಶಾಸಕರ ಹೆಸರನ್ನು ಎಳೆದು ತಂದು ಗೊಂದಲ ಸೃಷ್ಟಿಸುವವರಿಗೆ ಮಣೆ ಹಾಕಬೇಡಿ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ಬಿಜೆಪಿ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.</p>.<p>ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಶುಕ್ರವಾರ ನಡೆದ ಪಕ್ಷದ ಗ್ರಾಮಾಂತರ ವಿಭಾಗದ ಸಂಘಟನಾ ಸಭೆಯಲ್ಲಿ ಮಾತನಾಡಿದರು.</p>.<p>‘ಎಂಡಿಎಫ್ ವಿವಾದದ ಕುರಿತು ಪರೋಕ್ಷವಾಗಿ ಪ್ರಸ್ತಾಪಿಸುತ್ತ, ವಿರೋಧ ಪಕ್ಷಗಳಿಗೆ ಜನರ ಬಳಿ ಹೋಗಲು ಯಾವುದೇ ಪ್ರಮುಖ ವಿಷಯವಿಲ್ಲದ ಕಾರಣ ಇಲ್ಲಸಲ್ಲದ ವಿಷಯಗಳನ್ನು ಜನರ ಮುಂದೆ ತಂದು ಕೆಟ್ಟ ರಾಜಕಾರಣ ಮಾಡುತ್ತಿವೆ’ ಎಂದು ದೂರಿದರು.</p>.<p>ಬಿಜೆಪಿಯ ಅವಧಿಯಲ್ಲಿ ಆಗಿರುವಷ್ಟು ಅಭಿವೃದ್ಧಿ ಕಾರ್ಯ ಹಿಂದೆಂದೂ ಆಗಿಲ್ಲ. ಕೇಂದ್ರದಲ್ಲಿ ನರೇಂದ್ರ ಮೋದಿ, ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರ ಸಮರ್ಥ ನಾಯಕತ್ವ ಪಕ್ಷಕ್ಕೆ ಇದೆ. ನಾಯಕತ್ವದ ಕೊರತೆಯಿಂದ ಬಳಲುತ್ತಿರುವ ಕಾಂಗ್ರೆಸ್ ಪಕ್ಷದ ಸ್ಥಿತಿ ಹಿಂದೆಂದಿಗಿಂತಲೂ ಹೀನಾಯವಾಗಿದೆ ಎಂದರು.</p>.<p>ಏಪ್ರಿಲ್ 6ರಂದು ಬಿಜೆಪಿಯ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ತಾಲ್ಲೂಕಿನ 5280 ಬೂತ್ಗಳಲ್ಲಿ ಬಿಜೆಪಿ ಪ್ರಮುಖರ ಮನೆಯ ಮೇಲೆ ಪಕ್ಷದ ಬಾವುಟ ಹಾರಿಸುವ ಕಾರ್ಯಕ್ರಮವಿದೆ. ಪಕ್ಷದ ಪ್ರಮುಖರು ನೀಡುವ ಸೂಚನೆಯನ್ನು ಕಾರ್ಯಕರ್ತರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್, ಗ್ರಾಮಾಂತರ ಅಧ್ಯಕ್ಷ ಲೋಕನಾಥ ಬಿಳಿಸಿರಿ, ಎಪಿಎಂಸಿ ಅಧ್ಯಕ್ಷ ಚೇತನ್ ರಾಜ್ ಕಣ್ಣೂರು, ಪ್ರಮುಖರಾದ ಯು.ಎಚ್.ರಾಮಪ್ಪ, ದೇವೇಂದ್ರಪ್ಪ ಯಲಕುಂದ್ಲಿ<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ಕ್ಷೇತ್ರದಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಅನಗತ್ಯವಾಗಿ ಬಿಜೆಪಿ ಹಾಗೂ ಶಾಸಕರ ಹೆಸರನ್ನು ಎಳೆದು ತಂದು ಗೊಂದಲ ಸೃಷ್ಟಿಸುವವರಿಗೆ ಮಣೆ ಹಾಕಬೇಡಿ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ಬಿಜೆಪಿ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.</p>.<p>ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಶುಕ್ರವಾರ ನಡೆದ ಪಕ್ಷದ ಗ್ರಾಮಾಂತರ ವಿಭಾಗದ ಸಂಘಟನಾ ಸಭೆಯಲ್ಲಿ ಮಾತನಾಡಿದರು.</p>.<p>‘ಎಂಡಿಎಫ್ ವಿವಾದದ ಕುರಿತು ಪರೋಕ್ಷವಾಗಿ ಪ್ರಸ್ತಾಪಿಸುತ್ತ, ವಿರೋಧ ಪಕ್ಷಗಳಿಗೆ ಜನರ ಬಳಿ ಹೋಗಲು ಯಾವುದೇ ಪ್ರಮುಖ ವಿಷಯವಿಲ್ಲದ ಕಾರಣ ಇಲ್ಲಸಲ್ಲದ ವಿಷಯಗಳನ್ನು ಜನರ ಮುಂದೆ ತಂದು ಕೆಟ್ಟ ರಾಜಕಾರಣ ಮಾಡುತ್ತಿವೆ’ ಎಂದು ದೂರಿದರು.</p>.<p>ಬಿಜೆಪಿಯ ಅವಧಿಯಲ್ಲಿ ಆಗಿರುವಷ್ಟು ಅಭಿವೃದ್ಧಿ ಕಾರ್ಯ ಹಿಂದೆಂದೂ ಆಗಿಲ್ಲ. ಕೇಂದ್ರದಲ್ಲಿ ನರೇಂದ್ರ ಮೋದಿ, ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರ ಸಮರ್ಥ ನಾಯಕತ್ವ ಪಕ್ಷಕ್ಕೆ ಇದೆ. ನಾಯಕತ್ವದ ಕೊರತೆಯಿಂದ ಬಳಲುತ್ತಿರುವ ಕಾಂಗ್ರೆಸ್ ಪಕ್ಷದ ಸ್ಥಿತಿ ಹಿಂದೆಂದಿಗಿಂತಲೂ ಹೀನಾಯವಾಗಿದೆ ಎಂದರು.</p>.<p>ಏಪ್ರಿಲ್ 6ರಂದು ಬಿಜೆಪಿಯ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ತಾಲ್ಲೂಕಿನ 5280 ಬೂತ್ಗಳಲ್ಲಿ ಬಿಜೆಪಿ ಪ್ರಮುಖರ ಮನೆಯ ಮೇಲೆ ಪಕ್ಷದ ಬಾವುಟ ಹಾರಿಸುವ ಕಾರ್ಯಕ್ರಮವಿದೆ. ಪಕ್ಷದ ಪ್ರಮುಖರು ನೀಡುವ ಸೂಚನೆಯನ್ನು ಕಾರ್ಯಕರ್ತರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್, ಗ್ರಾಮಾಂತರ ಅಧ್ಯಕ್ಷ ಲೋಕನಾಥ ಬಿಳಿಸಿರಿ, ಎಪಿಎಂಸಿ ಅಧ್ಯಕ್ಷ ಚೇತನ್ ರಾಜ್ ಕಣ್ಣೂರು, ಪ್ರಮುಖರಾದ ಯು.ಎಚ್.ರಾಮಪ್ಪ, ದೇವೇಂದ್ರಪ್ಪ ಯಲಕುಂದ್ಲಿ<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>